ಮನಸು ಈಗಲೂ ನಿನ್ನನ್ನೇ ಬಯಸುತಿದೆ…


Team Udayavani, Aug 7, 2018, 6:00 AM IST

8.jpg

ಕೊನೆಯ ಬೆಂಚಿನಲ್ಲಿ ಕೂರುತ್ತಿದ್ದ ನಾನು ಎಲ್ಲರನ್ನೂ ನೋಡುತ್ತಿದ್ದೆ. ಆದರೆ, ನನ್ನನ್ನು ನೋಡುವವಳೂ ಒಬ್ಬಳು ಇದ್ದಾಳೆಂದು ಸ್ನೇಹಿತ ಹೇಳುವವರೆಗೂ ನನಗೆ ತಿಳಿದಿರಲಿಲ್ಲ. 

ಹಾಯ್‌ ಶ್ರೀ,
 ನಾನು ನಿನ್ನ ಮುದ್ದಿನ ಪಂಡು. ಈಗ ನೀನು ಎಲ್ಲಿದ್ದೀಯೋ? ಹೇಗಿದ್ದೀಯೋ? ನನಗಂತೂ ತಿಳಿಯದು. ನಿನ್ನನ್ನು ನೋಡಿದ ಮೊದಲ ದಿನದಿಂದಲೇ ನಿನ್ನ ಮೇಲೆ ಪ್ರೀತಿಯಾಯಿತು. ಅಂದಿನಿಂದ ಇಂದಿನವರೆಗೂ ಮನಸ್ಸಲ್ಲಿ ನಿನ್ನದೇ ಗುನುಗು. ನಿನ್ನನ್ನು ನೋಡದೇ ಸುಮಾರು ಆರೇಳು ವರ್ಷಗಳು ಉರುಳಿಹೋದವೆಂದರೆ ನನಗಿನ್ನೂ ನಂಬಲಾಗುತ್ತಿಲ್ಲ! 

ಆಗ ನಾವೆಲ್ಲಾ ಹತ್ತನೇ ತರಗತಿಯಲ್ಲಿದ್ದೆವು. ಕೊನೆಯ ಬೆಂಚಿನಲ್ಲಿ ಕೂರುತ್ತಿದ್ದ ನಾನು ಎಲ್ಲರನ್ನೂ ನೋಡುತ್ತಿದ್ದೆ. ಆದರೆ, ನನ್ನನ್ನು ನೋಡುವವಳೂ ಒಬ್ಬಳು ಇದ್ದಾಳೆಂದು ಸ್ನೇಹಿತ ಹೇಳುವವರೆಗೂ ನನಗೆ ತಿಳಿದಿರಲಿಲ್ಲ. ಪಕ್ಕದಲ್ಲಿ ಕೂರುತ್ತಿದ್ದ ಸ್ನೇಹಿತ, ಆ ಹುಡುಗಿ ಯಾಕೋ ನಿನ್ನನ್ನೇ ನೋಡಿ ನಗುತ್ತಿರುತ್ತಾಳೆ? ಎಂದು ಕೇಳುತ್ತಿದ್ದ. ಏನೋ ತಮಾಷೆ ಮಾಡ್ತಿದ್ದಾನೆ ಎಂದುಕೊಂಡು ನಾನು ಗಮನ ಹರಿಸಿರಲಿಲ್ಲ. ಆದರೂ ಅವನು ಪ್ರತಿದಿನವೂ ಅದನ್ನೇ ಹೇಳುತ್ತಿದ್ದುದರಿಂದ, ನೋಡಿಯೇ ಬಿಡೋಣ ಇವನು ಹೇಳುತ್ತಿರುವುದು ಸುಳ್ಳೋ? ನಿಜವೋ? ಎಂದು ಪರೀಕ್ಷಿಸಲು ಒಂದು ದಿನ ನಾನೂ ನಿನ್ನತ್ತ ತಿರುಗಿ ನೋಡಿಯೇ ಬಿಟ್ಟೆ! 

ಹಾಗೆ ನೋಡಿದಾಗ ನನಗೆ ನೀನು ಮಾತ್ರ ಕಾಣಲಿಲ್ಲ. ಬದಲಿಗೆ ನನ್ನ ಭವಿಷ್ಯವೇ ನಿನ್ನಲ್ಲಿ ಕಾಣಿಸಿಬಿಟ್ಟಿತು. ಅದುವರೆಗೂ ಲಂಗು-ಲಗಾಮಿಲ್ಲದೆ, ಎಲ್ಲೆಲ್ಲೋ ಸುತ್ತುತ್ತಿದ್ದ ನನ್ನ ಮನಸ್ಸು ಅಂದಿನಿಂದ ನಿನ್ನದೇ ಧ್ಯಾನದಲ್ಲಿ ಮುಳುಗಿಹೋಯಿತು. 

ನಿನ್ನ ನೋಡುವ ಸಲುವಾಗಿಯೇ, ನೋಟ್ಸ್‌ ಬೇಕೆಂಬ ನೆಪವೊಡ್ಡಿ  ನಿಮ್ಮ ಮನೆಗೆ ಬರುತ್ತಿದ್ದೆ. ನಿನಗೂ ನನ್ನ ಮೇಲೆ ಅಷ್ಟೇ ಪ್ರೀತಿ ಇದ್ದುದರಿಂದ, ಅದೇ ನೆಪವನ್ನೊಡ್ಡಿ ನೀನೂ ನಮ್ಮ ಮನೆಗೆ ಬರುತ್ತಿದ್ದೆ. ಆದರೂ ನನ್ನ ಮನದಾಳದ ಗೊಂದಲಕ್ಕೆ ಉತ್ತರವಾಗಿ, ನೀನೇ ಅಲ್ಲವೇ ನೋಟ್ಸ್‌ಅನ್ನು ಹಿಂದಿರುಗಿಸುವಾಗ, ಅದರೊಳಗೆ “ಐ ಲವ್‌ ಯೂ’ ಎಂದು ಬರೆದು,ನನಗೆ ಪ್ರೇಮಲೋಕವನ್ನು ಪರಿಚಯಿಸಿದ್ದು?

 ಹೀಗೆ ಸುಂದರವಾಗಿ ಸಾಗುತ್ತಿದ್ದ ನಮ್ಮಿಬ್ಬರ ಪ್ರೇಮದ ಪಯಣದ ಮೇಲೆ ಅದ್ಯಾರ ಕಣ್ಣು ಬಿತ್ತೋ? ನಮ್ಮಿಬ್ಬರ ಪ್ರೀತಿಯ ವಿಷಯ ನಮ್ಮ ಮನೆಗಳಲ್ಲಿ ತಿಳಿದು, ರಂಪವಾಯಿತು. ಅದೊಂದು ದಿನ ನಿಮ್ಮಮ್ಮ, “ಇನ್ಮುಂದೆ ನಮ್ಮ ಮನೆಯ ಹತ್ತಿರ ಬರಬೇಡಪ್ಪ’ ಎಂದು ಹೇಳಿಬಿಟ್ಟರು. ಅಂದಿನಿಂದ ನಿನ್ನನ್ನು ಭೇಟಿಯಾಗಲು ನಾನು ಮಾಡದ ಪ್ರಯತ್ನವಿಲ್ಲ. ನಿನ್ನ ಮನೆಯವರು ನಿನಗೇನು ಹೇಳಿ ನನ್ನಿಂದ ದೂರವಿಟ್ಟರೋ ನನಗಂತೂ ಗೊತ್ತಿಲ್ಲ. ನೀನು ನನ್ನನ್ನು ಬಿಟ್ಟು ಹೋಗಿ ಎಷ್ಟೋ ವರ್ಷಗಳು ಕಳೆದರೂ, ನಿನ್ನ ನೆನಪುಗಳು ಈಗಲೂ ಕಾಡುತ್ತಲೇ ಇವೆ. ಮನಸ್ಸು ಇಂದಿಗೂ ನಿನ್ನನ್ನೇ ಬಯಸುತ್ತಿದೆ. ಈಗ ಹಠಾತ್ತಾಗಿ ನಾನು ಈ ಪತ್ರ ಬರೆಯಲು ಕಾರಣ ಕೂಡ ನೀನೇ ಶ್ರೀ. ಈ ಪತ್ರ ಓದಿದರೆ ನೀನು ವಾಪಸ್‌ ಬಂದೇ ಬರ್ತೀಯಾ ಅನ್ನೋ ಭರವಸೆ ನನ್ನದು. ಹಾಗೆಯೇ ಆಗಲಿ ಎಂದು ಆಶಿಸುತ್ತಾ…….

ಇಂತಿ,
ನಿನ್ನ ಮುದ್ದಿನ ಪಂಡು
-ಗಿರೀಶ್‌ ಚಂದ್ರ ವೈ.ಆರ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.