ಯಾಕೋ ಹುಡುಗ ಬದಲಾಗಿದ್ದ!


Team Udayavani, Aug 21, 2018, 6:00 AM IST

4.jpg

ಕಡಲ ತೀರದಲ್ಲಿ ತಂಗಾಳಿ, ಅಲೆಗಳ ಆರ್ಭಟ, ಉಸುಕಿನ ಬಯಲಿನ ನಡುವೆ ಕುಳಿತು ಅದೆಷ್ಟು ಮಾತಾಡಿದ್ದೆವು. ಈ ಸಂಜೆಯು ಹೀಗೆ ನಿಲ್ಲಬಾರದಾ ಅನ್ನಿಸಿದ್ದುಂಟು. ಗಡಿಯಾರ ನಕ್ಕಿತ್ತು ನಮ್ಮ ನೋಡಿ. ಮತ್ತಷ್ಟು ಬೇಗ ತಿರುಗುತ್ತಿತ್ತು. ಮೊದಮೊದಲು ಇದ್ದ ಪ್ರೀತಿಯ ತೀವ್ರತೆ ತಿಳಿಯಾದಂತೆ ಕಾಣತೊಡಗಿತ್ತು. ಪ್ರೇಮ ಸಂದೇಶಗಳು ಕಡಿಮೆಯಾಗುತ್ತಿದ್ದವು. ಹುಡುಗ ಯಾಕೋ ಬದಲಾಗಿದ್ದಾನೆ ಅಂತ ಮನ ಹೇಳುತಿತ್ತು…

“ಯಾಕೆ ಅನು, ಡಲ್‌ ಆಗಿದ್ಯಾ? ಮುಂದೆ ಆಳ ಜಾಸ್ತಿ ಇರುತ್ತೆ, ಹೋಗ್ಬೇಡ’. ಗೆಳತಿ ಸಂಗೀತಾ ಎಚ್ಚರಿಸಿದಾಗ ವಾಸ್ತವಕ್ಕೆ ಬಂದಿದ್ದೆ. ಬಿಜಾಪುರ ಬೋರ್ಡಿಂಗ್‌ ಸ್ಕೂಲ್‌ಗೆ ಟೀಚರ್‌ ಆಗಿ ಸೇರಿ, ನಾಲ್ಕೈದು ವರ್ಷಗಳೇ ಕಳೆದಿದ್ದವು. ಈಗ ಶಾಲೆಯ ಪ್ರವಾಸದ ನೆಪದಲ್ಲಿ ಕಾರವಾರದ ಠಾಗೋರ್‌ ಬೀಚ್‌ನಲ್ಲಿ ತೇಲುತ್ತಿದ್ದೆನಷ್ಟೇ.

  ಯಾಕೋ ಈ ದಿನಗಳಲ್ಲಿ ಬಿಜಾಪುರದ ಬಿಸಿಲಿಗಿಂತ ಮನಸಿನ ಬೇಗೆಯೇ ಹೆಚ್ಚು ಸುಡುತ್ತಿತ್ತು. ಅಮ್ಮ “ಯಾವಾಗ ಮನೆಗೆ ಬರ್ತೀಯ? ಮದುವೆಯ ವಯಸ್ಸು ಮೀರುತ್ತಿದೆ, ಬಿಸಿಲೂರೇ ಬೇಕಾ ನಿಂಗೆ?’ ಅಂತ ಬಯ್ಯುತ್ತಿದ್ದಾಗ, ಎಷ್ಟೋ ಸಲ ಕರೆ ಕಟ್‌ ಮಾಡಿದ್ದೆ. ಹೇಗೆ ಹೇಳಲಿ ಹರೆಯದ ನೆನಪುಗಳ ಯಾತನೆಯನ್ನು?

  ಆಗಿನ್ನೂ ನಾನು ಎಸ್ಸೆಸ್ಸೆಲ್ಸಿ. ಹಳ್ಳಿಯ ಹೈಸ್ಕೂಲ್‌ಗೆ ನಾನೇ ಮೊದಲಿಗಳು. ಅದೇ ವರ್ಷ ವರ್ಗಾವಣೆ ಆಗಿ ಕನ್ನಡದ ಮೇಷ್ಟ್ರು ಬಂದಿದ್ದರು. ಅವರ ಮಗ ಬಹಳ ಮುದ್ದಾಗಿದ್ದ. ಅವನ ಹೆಸರು ರವಿ. ಹೆಸರಿನಂತೆಯೇ ಹೊಳೆಯುತ್ತಿದ್ದ. ಶುರುವಿನಲ್ಲಿ ಅವನನ್ನು ಕದ್ದುಮುಚ್ಚಿ ನೋಡುತ್ತಿದ್ದೆ. ನನ್ನ ನಿದ್ದೆಯ ಕದ್ದಿದ್ದ. ಆಗಾಗ ಕದ್ದು ಮುಚ್ಚಿ ಮುದ್ದು ಮುಖವ ನೋಡುತ್ತಿದ್ದೆ. ಓದುವ ನೆಪಮಾಡಿ ಬೆಟ್ಟದ ಬಯಲಿನಲ್ಲಿ ಕುಳಿತು ನನ್ನೇ ನಾನು ಮರೆತಿದ್ದೆ, ಬೀಸುವ ಗಾಳಿಗೆ ಕೇಳಿದ್ದೆ, ಹರಿವ ತೊರೆಯ ಕೇಳಿದ್ದೆ, ಹಾರುವ ಹಕ್ಕಿಗೆ ಕೇಳಿದ್ದೆ, “ಇದೇ ಪ್ರೀತಿನಾ?’ ಎಂದು. ಮಾತು ಬಾರದ ಅವುಗಳಿಂದ ನನಗೆ ಬೇಕಾದ ಉತ್ತರ ಪಡೆದಿದ್ದೆ.

   ಕಾಲೇಜಿಗೆ ಕಾಲಿಟ್ಟು ವರ್ಷ ಕಳೆದಿತ್ತು. ಒಂದೇ ಬಸ್ಸಿನಲ್ಲಿ ಓಡಾಟ. ಖಾಲಿ ಬಸ್ಸಿನಲ್ಲಿ ನನ್ನ ಪಕ್ಕದಲ್ಲಿ ಬಂದು ಕುಳಿತು, “ಯಾಕೆ ನೀನು ಕದ್ದು ಮುಚ್ಚಿ ನನ್ನ ನೋಡ್ತಿಯ? ಎರಡು ವರ್ಷಗಳಿಂದ ಗಮನಿಸ್ತಾ ಇದ್ದೀನಿ’ ಎಂದ. ನಕ್ಕು ಸುಮ್ಮನಾದೆ. ನಗುವಿನಲ್ಲಿ ನೂರಾರು ಭಾವನೆಗಳನ್ನು ಹೇಳಿದ್ದೆ. ಜಾಣ ಬೇಗ ಅರ್ಥಮಾಡಿಕೊಂಡ. ಪ್ರೀತಿಯ ತೇರು, ನಮ್ಮೂರ ಬಸ್ಸು. ನಮ್ಮೊಲವಿನ, ವಿರಹಗಳ, ಭವಿಷ್ಯದ ನಿಲುವುಗಳ ಗೋಪುರ ಬೆಳೆಯುತ್ತಿತ್ತು. ಕಾಲವೂ ಸರಿಯುತಿತ್ತು.

  ಹಣೆಗೊಂದು ಹೂಮುತ್ತನ್ನಿಟ್ಟು, ಹುಡುಗ ಎಂಜಿನಿಯರಿಂಗ್‌ ಓದಲು ಹೊರಟಿದ್ದು ಬಹುದೊಡ್ಡ ನಗರಕ್ಕೆ. ನಾ ಸೇರಿದ್ದು ಕಡಲೂರಿನ ಹಾಸ್ಟೆಲ್ಗೆ. ದಿನವೂ ಟೆರೇಸನ್ನೇರಿ, ರಾತ್ರಿ ಚುಕ್ಕಿಗಳ ಎಣಿಸುತ್ತಿದ್ದೆ. ಬೆಳದಿಂಗಳಲ್ಲಿ ಅವನನ್ನು ನೆನೆಯುತ್ತಿದ್ದೆ. ಅವನ ಪತ್ರಗಳು ಪುಟಗಟ್ಟಲೇ ಬರುತ್ತಿದ್ದವು. ಊರಿಗೆ ಬಂದಾಗ ನಾನಿದ್ದಲ್ಲೂ ಬರುತ್ತಿದ್ದ.

  ಕಡಲ ತೀರದಲ್ಲಿ ತಂಗಾಳಿ, ಅಲೆಗಳ ಆರ್ಭಟ, ಉಸುಕಿನ ಬಯಲಿನ ನಡುವೆ ಕುಳಿತು ಅದೆಷ್ಟು ಮಾತಾಡಿದ್ದೆವು. ಈ ಸಂಜೆಯು ಹೀಗೆ ನಿಲ್ಲಬಾರದಾ ಅನ್ನಿಸಿದ್ದುಂಟು. ಗಡಿಯಾರ ನಕ್ಕಿತ್ತು ನಮ್ಮ ನೋಡಿ. ಮತ್ತಷ್ಟು ಬೇಗ ತಿರುಗುತ್ತಿತ್ತು. ಮೊದಮೊದಲು ಇದ್ದ ಪ್ರೀತಿಯ ತೀವ್ರತೆ ತಿಳಿಯಾದಂತೆ ಕಾಣತೊಡಗಿತ್ತು. ಪ್ರೇಮ ಸಂದೇಶಗಳು ಕಡಿಮೆಯಾಗುತ್ತಿದ್ದವು. ಹುಡುಗ ಯಾಕೋ ಬದಲಾಗಿದ್ದಾನೆ ಅಂತ ಮನ ಹೇಳುತಿತ್ತು. ಪರೀಕ್ಷೆಯ ತಲೆಬಿಸಿಯಲ್ಲಿದ್ದಾನೆಂದು ಸುಮ್ಮನಾದೆ. ಅವನಲ್ಲಿನ ಪ್ರೀತಿ ಬೇರೆ ರೂಪ ಪಡೆದಿತ್ತು. ಮಾಯಾನಗರಿಯ ಮಾಯೆ ಅವನೊಳಗೆ ಆವರಿಸಿತ್ತು. ಹುಡುಗ ಬದಲಾಗಿದ್ದ. ಮೊಬೈಲ್‌ ಕೈಗೆ ಬಂದಿತ್ತು. ಗೆಳೆಯರ ಬಳಗ ಹೆಚ್ಚಿತ್ತು. ಅಪ್ಪ ಹೊಸ ಬೈಕ್‌ ಕೊಡಿಸಿದ್ದರಂತೆ.

   ಅಮ್ಮನ ಜೊತೆ ಕಾಡಿ ಬೇಡಿ ಮೊಬೈಲ್‌ ಗಿಟ್ಟಿಸಿದ್ದೆ. ಪ್ರೀತಿಯ ಹೂವು ಬಾಡದಿರಲೆಂದು ಬಯಸಿದ್ದೆ. ನಾನೇ ಕರೆಮಾಡಿ ಮಾತಾಡುವ ಬಯಕೆ. ಆದರೆ ಭಯ, ಮೆಸೇಜಿಗೂ ರಿಪ್ಲೆ„ ಇಲ್ಲ. ಆಮೇಲೆ ಅವನ ಫೇಸ್‌ಬುಕ್‌ ಸ್ನೇಹಿತೆಯ ಮೂಲಕ ಸತ್ಯ ಗೊತ್ತಾದಾಗ ಶಾಕ್‌ ಆಗಿದ್ದೆ. “ಕಾಳ್‌ ಹಾಕುತ್ತಿದ್ದ ಹುಡುಗಿಯನ್ನು ನಾನೇಕೆ ಸುಮ್ಮನೆ ಬಿಡಲಿ, ಸಖತ್‌ ಆಟ ಆಡಿಸಿದೆ’ ಅಂದಿದ್ದನಂತೆ. ನಾನು ಅವನಿಗೆ ಬರೆದ ಪ್ರೇಮಪತ್ರಗಳನ್ನು ಓದಿ, ಮನರಂಜನೆ ಪಡೆಯುತ್ತಿದ್ದನಂತೆ.

  ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿ ಪಕ್ಕಕ್ಕಿಟ್ಟು, ಅವತ್ತೇ ಇಂಥದ್ದೇ ಕಡಲ ತೀರದಲ್ಲಿ ಕುಳಿತು ಅತ್ತಾಗ ಸಮಾಧಾನ ಆಗಿತ್ತು. ಅಲೆಗಳು ಸಂತೈಸಲು “ನಾ ಮುಂದೆ, ತಾ ಮುಂದೆ’ ಅಂದಂತೆ ಭಾಸವಾಯಿತು. ಫೇಸ್‌ಬುಕ್‌ ಖಾತೆ ಮುಚ್ಚಿದೆ. ಮುಚ್ಚಿದ ಪುಸ್ತಕ ತೆರೆದು ಓದತೊಡಗಿದೆ. ಪ್ರೇಮದ ಪೊರೆ ಕಳಚಿ ಬಿಸಾಕಿದ್ದೆ. ಪದವಿ ಮುಗಿಸಿ, ಬಿ.ಇಡಿ ಸೇರಿದ್ದೆ.

  ಈ ಏಕಾಂಗಿ ಪಯಣದಲ್ಲಿ ಹಲವು ಯಶಸ್ಸು ಸಿಕ್ಕಿತ್ತು. ಒಳ್ಳೆಯ ಕೆಲಸ ಸಿಕ್ಕಿತು. ಆದರೂ ಅವನ ಪ್ರೇಮ ಮತ್ತೆ ಕಾಡಿತು. ಡಿಲೀಟ್‌ ಮಾಡಿದ್ದ ಫೇಸ್‌ಬುಕ್‌ ಅನ್ನು ಮತ್ತೆ ತೆರೆದೆ. ಎಲ್ಲೂ ಅವನ ಖಾತೆ ಕಾಣಲಿಲ್ಲ. ಅವನ ಗೆಳೆಯನ ಸ್ಟೇಟಸ್‌ನಿಂದ ಗೊತ್ತಾಯ್ತು: ರವಿ ಮುಳುಗಿದ್ದ, wheeling ಭೂತದ ಬಾಯೊಳಗೆ ಸಿಕ್ಕು.

  ಮೊನ್ನೆ ಊರಿಗೆ ಹೋದಾಗ ನೆನಪಾಗಿದ್ದು ಅದೇ ಪ್ರೀತಿಯ ಹೊತ್ತು ತೇರಂತೆ ಸಾಗಿದ ಬಸ್ಸು, ಕಳ್ಳ ನೋಟದ ಆಟಗಳು. ಬೆಟ್ಟ ಗುಡ್ಡದ ಹಾದಿಯಲ್ಲಿ ನಡೆದರೆ “ಯಾಕೀ ಒಂಟಿ ಪಯಣ?’ ಎಂದು ತಂಗಾಳಿ ಹಂಗಿಸುತ್ತಿತ್ತು. ಹಾರುವ ಹಕ್ಕಿಗಳು, ಹರಿಯುವ ಝರಿಗಳು ನನ್ನ ನೋಡಿ ಪಿಸುಪಿಸು ಎನ್ನುತ್ತಿದ್ದವು. 

   ಒಂದಿನ ನನ್ನೆಲ್ಲ ಕತೆಯನ್ನು ಅಮ್ಮನಿಗೆ ಒಪ್ಪಿಸಿಬಿಟ್ಟೆ. ಅಮ್ಮ ಅಂದಳು, “ಇಷ್ಟಕ್ಕೇ ಜೀವನ ಮುಗಿದಿದೆ ಅಂತಂದ್ಕೊಂಡಿದ್ದೀಯ… ನಿಮ್ಮಪ್ಪ ಹೋದಾಗ ನಿನಗೆ ಬರೀ ಒಂದು ವರ್ಷ. ನಾನು ಹೇಗೆ ನಿನ್ನ ಬೆಳೆಸಿದ್ದೀನಿ ಗೊತ್ತಾ? ಬೇರೆ ಜಾತಿಯ ಹೆಂಗಸನ್ನು ಪ್ರೀತಿಸಿದ, ನಿಮ್ಮ ತಾತಂಗೆ ತಿಳಿದು ನನ್ನ ಸೊಸೆಯಾಗಿ ತಂದರು. ಕೊನೆಗೆ ನಿಮ್ಮ ಅಪ್ಪ ಅವಳ ಹಿಂದೆ ಹೋಗಿ ತಾವೇ ಬಾರದ ಲೋಕ ಸೇರಿದ್ದರು. ನಾನು ಅಳ್ತಾ ಕೂತಿದ್ದರೆ, ಮಗಳೇ ನಿನ್ನ ನೋಡಿಕೊಳ್ಳುವ, ತೋಟವನ್ನು ಹಸಿರಾಗಿಸುವ ಕೆಲಸವನ್ನು ಯಾರು ಮಾಡ್ತಿದ್ರು, ಹೇಳು? ಪ್ರೀತಿ ಪ್ರೇಮ ಜೀವನದ ಒಂದು ಹಂತ. ಅದನ್ನೇ ನೆನೆದು ಎಷ್ಟು ದಿನ ಇರ್ತೀಯಾ, ವಾಸ್ತವ ನೋಡು. ಕಳೆದುಹೋದ ಕನಸಿನಿಂದ ಹೊರಗೆ ಬಂದು, ಹೊಸ ಕನಸಿಗೆ ಬಣ್ಣ ಬಳಿದು, ಸುಂದರವಾದ ಬದುಕಿಗೆ ಕಾಲಿಡು’ ಎಂದು ಎದ್ದು ಹೋದರು.

   ಅಮ್ಮನ ಮಾತಿಗಿಂತ ದೊಡ್ಡ ಪ್ರೇರಣೆ ಮತ್ತೂಂದಿಲ್ಲ ಅಂತನ್ನಿಸಿಬಿಟ್ಟಿತು. ಈಗ ನಾನು ಬದುಕಿನಲ್ಲಿ ಗೆದ್ದಿದ್ದೇನೆ.

ಅಂಜನಾ ಗಾಂವ್ಕರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.