ಕವಲು ದಾರಿಯಲ್ಲಿ ಎಂಜಿನಿಯರಿಂಗ್‌ ಶಿಕ್ಷಣ


Team Udayavani, Sep 11, 2018, 6:00 AM IST

23.jpg

ಒಂದು ಕಾಲದಲ್ಲಿ, ಎಂಜಿನಿಯರಿಂಗ್‌ ಓದಬೇಕೆಂಬುದೇ ವಿದ್ಯಾರ್ಥಿಗಳ ಕನಸಾಗಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಒಂದು ಸಾವಿರವಲ್ಲ, ಹದಿಮೂರು ಸಾವಿರಕ್ಕೂ ಹೆಚ್ಚು ಸೀಟ್‌ಗಳು ಭರ್ತಿಯಾಗದೇ ಉಳಿದಿವೆ…

2016-17ರಲ್ಲಿ ಭಾರತದ 3291 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳಲ್ಲಿ ಲಭ್ಯವಿದ್ದ 15 ಲಕ್ಷ 71 ಸಾವಿರದ ಎರಡು ನೂರಾ ಇಪ್ಪತ್ತು ಸೀಟುಗಳಲ್ಲಿ ಶೇಕಡಾ 50.1ರಷ್ಟು ಸೀಟುಗಳು ಮಾತ್ರ ಭರ್ತಿಯಾಗಿದ್ದವು. ಕರ್ನಾಟಕದಲ್ಲಿ ಲಭ್ಯವಿದ್ದ 1 ಲಕ್ಷ ಐದು ನೂರಾ ಅರವತ್ತೆçದು ಸೀಟುಗಳಲ್ಲಿ ಶೇಕಡಾ 74ರಷ್ಟು ಮಾತ್ರ ಭರ್ತಿಯಾಗಿದ್ದವು.

22 ಏಪ್ರಿಲ್‌ 2018ರಂದು ಅಖೀಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ), ಈ ವರ್ಷ ದೇಶಾದಂತ್ಯ ಲಭ್ಯವಿರುವ ಎಂಜಿನಿಯರಿಂಗ್‌ ಸೀಟುಗಳಲ್ಲಿ 1 ಲಕ್ಷ 67 ಸಾವಿರ ಸೀಟುಗಳನ್ನು ಕಡಿತಗೊಳಿಸುವುದಾಗಿ ತಿಳಿಸಿತು. ಹೀಗಾಗಿ ಈ ವರ್ಷ ಲಭ್ಯವಿರುವ ಸೀಟುಗಳ ಸಂಖ್ಯೆ 14 ಲಕ್ಷ 90 ಸಾವಿರಕ್ಕೆ ಇಳಿದಿದೆ. 

   ಕೆಲವು ವರ್ಷಗಳ ಹಿಂದೆ ಎಂಜಿನಿಯರಿಂಗ್‌ ಶಿಕ್ಷಣಕ್ಕಿದ್ದ ಬೇಡಿಕೆ ಈಗ ಇಲ್ಲ. ಹೀಗಾಗಿರುವುದಕ್ಕೆ ಕಾರಣವೇನು ಅಂದಿರಾ? ಎಂಜಿನಿಯರಿಂಗ್‌ ಪದವೀಧರರಿಗೆ ಸೂಕ್ತ ಉದ್ಯೋಗ ದೊರೆಯುತ್ತಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಕಾಲೇಜು ಸೇರಲು ಮುಂದಾಗುತ್ತಿಲ್ಲವೆಂದು ಕೆಲವರ ವಾದ. ಪ್ರತಿವರ್ಷ ಲಕ್ಷಾಂತರ ಜನ ಎಂಜಿನಿಯರಿಂಗ್‌ ಪದವಿ ಪಡೆದರೂ, ಶೇಕಡಾ 85ರಷ್ಟು ಪದವೀಧರರಿಗೆ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳು ಇಲ್ಲದ ಕಾರಣ, ಸೂಕ್ತ ಉದ್ಯೋಗ ದೊರೆಯುತ್ತಿಲ್ಲವೆಂಬುದು, ಎಂಜಿನಿಯರ್‌ ಪದವೀಧರರ ಸ್ಪಷ್ಟ ಮಾತು. 

ಸೀಟುಗಳು ಭರ್ತಿಯಾಗದೆ ಉಳಿಯುತ್ತಿರುವುದೇಕೆ?
ಎಂಜಿನಿಯರಿಂಗ್‌ ಕಾಲೇಜಿನಲ್ಲಿ ದೊರೆಯುವ ಶಿಕ್ಷಣದ ಗುಣಮಟ್ಟ, ಲಭ್ಯವಿರುವ ಮೂಲಭೂತ ಸೌಕರ್ಯಗಳು, ಈ ಕಾಲೇಜಿನಲ್ಲಿ ನಡೆವ ಕ್ಯಾಂಪಸ್‌ ಇಂಟರ್‌ವ್ಯೂಗಳು, ಅಲ್ಲಿ ದೊರೆಯುತ್ತಿರುವ ಉದ್ಯೋಗಾವಕಾಶಗಳು… ಹೀಗೆ, ವಿವಿಧ ವಿಷಯಗಳನ್ನು ಪರಿಶೀಲಿಸಿ, ಯಾವ ಕಾಲೇಜಿನಲ್ಲಿ ಸೇರಬೇಕು ಎಂದು ವಿದ್ಯಾರ್ಥಿಗಳು ನಿರ್ಧರಿಸುತ್ತಿದ್ದಾರೆ. ಹೀಗಾಗಿ ಉತ್ತಮ ಗುಣಮಟ್ಟದ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೀಟುಗಳು ಭರ್ತಿಯಾಗುತ್ತವೆ ಮತ್ತು ಉಳಿದ ಕಾಲೇಜುಗಳಲ್ಲಿ ಸೀಟುಗಳು ಅಧಿಕ ಸಂಖ್ಯೆಯಲ್ಲಿ ಭರ್ತಿಯಾಗದೆ ಉಳಿಯುತ್ತಿವೆ. 

ಪ್ರವೇಶಾಂಕ ಏರಿಕೆ
ಬೇಡಿಕೆ ಇಲ್ಲದ ಎಂಜಿನಿಯರಿಂಗ್‌ ಕೋರ್ಸುಗಳು ಮತ್ತು ಕಳಪೆ ಗುಣಮಟ್ಟದ ಕಾಲೇಜುಗಳಿಂದಾಗಿ ಭರ್ತಿಯಾಗದೆ ಉಳಿಯುವ ಸೀಟುಗಳ ಸಂಖ್ಯೆ ಅಧಿಕವಾಗಿದೆ. ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳಿಗೆ ಒತ್ತು ನೀಡದೆ ಎಐಟಿಸಿಇ ರೂಪಿಸುವ ಎಂಜಿನಿಯರಿಂಗ್‌ ಪಠ್ಯಕ್ರಮದಿಂದಾಗಿ ಪದವೀಧರರಿಗೆ ಉದ್ಯೋಗ ದೊರೆಯುವುದು ಕಷ್ಟವಾಗುತ್ತಿದೆ. 2011ರವರೆಗೆ ಎಂಜಿನಿಯರಿಂಗ್‌ ಪ್ರವೇಶಕ್ಕೆ ವಿದ್ಯಾರ್ಥಿಯು, ಪಿಯುಸಿಯಲ್ಲಿ ಗಣಿತ, ರಸಾಯನ ಶಾಸ್ತ್ರ ಮತ್ತು ಭೌತಶಾಸ್ತ್ರದಲ್ಲಿ ಶೇಕಡಾ 50 ಅಂಕಗಳನ್ನು ಗಳಿಸಿರಬೇಕು ಎನ್ನುವ ನಿಯಮ ಚಾಲ್ತಿಯಲ್ಲಿತ್ತು. ಆದರೆ ನಂತರದ ದಿನಗಳಲ್ಲಿ ಎಐಸಿಟಿಇ ಇದನ್ನು ಶೇಕಡಾ 45 ಅಂಕಗಳಿಗೆ ಇಳಿಸಿತು. ಎಂಜಿನಿಯರಿಂಗ್‌ ಕಾಲೇಜು ಸೇರುವ ವಿದ್ಯಾರ್ಥಿಗಳ ಸಂಖ್ಯೆ ತಾತ್ಕಾಲಿಕವಾಗಿ ಹೆಚ್ಚಾದರೂ, ಪದವೀಧರರ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮವಾಯಿತು.

ಬೇಡಿಕೆ ಇಲ್ಲದ ಕೋರ್ಸ್‌ಗಳು
ಏರೋಸ್ಪೇಸ್‌, ಆಟೋಮೋಟಿವ್‌ ಮತ್ತು ರೋಬೋಟಿಕ್ಸ್‌, ಸೆರಾಮಿಕ್ಸ್‌ ಮತ್ತು ಸಿಮೆಂಟ್‌, ಪರಿಸರ, ಇನ್ಸ್‌ಟ್ರಾಮೆಂಟೇಷನ್‌, ಮ್ಯಾನುಫ್ಯಾಕ್ಚರಿಂಗ್‌, ಪೆಟ್ರೋ-ಕೆಮಿಕಲ್‌, ಗಣಿಗಾರಿಕೆ, ಪಾಲಿಮರ್‌, ರೇಷ್ಮೆ ಸೇರಿದಂತೆ ಒಟ್ಟು 12 ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಬೇಡಿಕೆ ಇಲ್ಲದ ಕಾರಣ, ಇವುಗಳನ್ನು ಮುಚ್ಚುವಂತೆ ಎಐಸಿಟಿಇಗೆ ಶಿಫಾರಸು ಮಾಡಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಇದು ಸಾಧ್ಯವಾದಾಗ, ಕರ್ನಾಟಕದಲ್ಲಿ ಭರ್ತಿಯಾಗುವ ಎಂಜಿನಿಯರಿಂಗ್‌ ಸೀಟುಗಳ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. 

ಉದಯ ಶಂಕರ ಪುರಾಣಿಕ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.