ಕವಲು ದಾರಿಯಲ್ಲಿ ಎಂಜಿನಿಯರಿಂಗ್‌ ಶಿಕ್ಷಣ


Team Udayavani, Sep 11, 2018, 6:00 AM IST

23.jpg

ಒಂದು ಕಾಲದಲ್ಲಿ, ಎಂಜಿನಿಯರಿಂಗ್‌ ಓದಬೇಕೆಂಬುದೇ ವಿದ್ಯಾರ್ಥಿಗಳ ಕನಸಾಗಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಒಂದು ಸಾವಿರವಲ್ಲ, ಹದಿಮೂರು ಸಾವಿರಕ್ಕೂ ಹೆಚ್ಚು ಸೀಟ್‌ಗಳು ಭರ್ತಿಯಾಗದೇ ಉಳಿದಿವೆ…

2016-17ರಲ್ಲಿ ಭಾರತದ 3291 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳಲ್ಲಿ ಲಭ್ಯವಿದ್ದ 15 ಲಕ್ಷ 71 ಸಾವಿರದ ಎರಡು ನೂರಾ ಇಪ್ಪತ್ತು ಸೀಟುಗಳಲ್ಲಿ ಶೇಕಡಾ 50.1ರಷ್ಟು ಸೀಟುಗಳು ಮಾತ್ರ ಭರ್ತಿಯಾಗಿದ್ದವು. ಕರ್ನಾಟಕದಲ್ಲಿ ಲಭ್ಯವಿದ್ದ 1 ಲಕ್ಷ ಐದು ನೂರಾ ಅರವತ್ತೆçದು ಸೀಟುಗಳಲ್ಲಿ ಶೇಕಡಾ 74ರಷ್ಟು ಮಾತ್ರ ಭರ್ತಿಯಾಗಿದ್ದವು.

22 ಏಪ್ರಿಲ್‌ 2018ರಂದು ಅಖೀಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ), ಈ ವರ್ಷ ದೇಶಾದಂತ್ಯ ಲಭ್ಯವಿರುವ ಎಂಜಿನಿಯರಿಂಗ್‌ ಸೀಟುಗಳಲ್ಲಿ 1 ಲಕ್ಷ 67 ಸಾವಿರ ಸೀಟುಗಳನ್ನು ಕಡಿತಗೊಳಿಸುವುದಾಗಿ ತಿಳಿಸಿತು. ಹೀಗಾಗಿ ಈ ವರ್ಷ ಲಭ್ಯವಿರುವ ಸೀಟುಗಳ ಸಂಖ್ಯೆ 14 ಲಕ್ಷ 90 ಸಾವಿರಕ್ಕೆ ಇಳಿದಿದೆ. 

   ಕೆಲವು ವರ್ಷಗಳ ಹಿಂದೆ ಎಂಜಿನಿಯರಿಂಗ್‌ ಶಿಕ್ಷಣಕ್ಕಿದ್ದ ಬೇಡಿಕೆ ಈಗ ಇಲ್ಲ. ಹೀಗಾಗಿರುವುದಕ್ಕೆ ಕಾರಣವೇನು ಅಂದಿರಾ? ಎಂಜಿನಿಯರಿಂಗ್‌ ಪದವೀಧರರಿಗೆ ಸೂಕ್ತ ಉದ್ಯೋಗ ದೊರೆಯುತ್ತಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಕಾಲೇಜು ಸೇರಲು ಮುಂದಾಗುತ್ತಿಲ್ಲವೆಂದು ಕೆಲವರ ವಾದ. ಪ್ರತಿವರ್ಷ ಲಕ್ಷಾಂತರ ಜನ ಎಂಜಿನಿಯರಿಂಗ್‌ ಪದವಿ ಪಡೆದರೂ, ಶೇಕಡಾ 85ರಷ್ಟು ಪದವೀಧರರಿಗೆ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳು ಇಲ್ಲದ ಕಾರಣ, ಸೂಕ್ತ ಉದ್ಯೋಗ ದೊರೆಯುತ್ತಿಲ್ಲವೆಂಬುದು, ಎಂಜಿನಿಯರ್‌ ಪದವೀಧರರ ಸ್ಪಷ್ಟ ಮಾತು. 

ಸೀಟುಗಳು ಭರ್ತಿಯಾಗದೆ ಉಳಿಯುತ್ತಿರುವುದೇಕೆ?
ಎಂಜಿನಿಯರಿಂಗ್‌ ಕಾಲೇಜಿನಲ್ಲಿ ದೊರೆಯುವ ಶಿಕ್ಷಣದ ಗುಣಮಟ್ಟ, ಲಭ್ಯವಿರುವ ಮೂಲಭೂತ ಸೌಕರ್ಯಗಳು, ಈ ಕಾಲೇಜಿನಲ್ಲಿ ನಡೆವ ಕ್ಯಾಂಪಸ್‌ ಇಂಟರ್‌ವ್ಯೂಗಳು, ಅಲ್ಲಿ ದೊರೆಯುತ್ತಿರುವ ಉದ್ಯೋಗಾವಕಾಶಗಳು… ಹೀಗೆ, ವಿವಿಧ ವಿಷಯಗಳನ್ನು ಪರಿಶೀಲಿಸಿ, ಯಾವ ಕಾಲೇಜಿನಲ್ಲಿ ಸೇರಬೇಕು ಎಂದು ವಿದ್ಯಾರ್ಥಿಗಳು ನಿರ್ಧರಿಸುತ್ತಿದ್ದಾರೆ. ಹೀಗಾಗಿ ಉತ್ತಮ ಗುಣಮಟ್ಟದ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೀಟುಗಳು ಭರ್ತಿಯಾಗುತ್ತವೆ ಮತ್ತು ಉಳಿದ ಕಾಲೇಜುಗಳಲ್ಲಿ ಸೀಟುಗಳು ಅಧಿಕ ಸಂಖ್ಯೆಯಲ್ಲಿ ಭರ್ತಿಯಾಗದೆ ಉಳಿಯುತ್ತಿವೆ. 

ಪ್ರವೇಶಾಂಕ ಏರಿಕೆ
ಬೇಡಿಕೆ ಇಲ್ಲದ ಎಂಜಿನಿಯರಿಂಗ್‌ ಕೋರ್ಸುಗಳು ಮತ್ತು ಕಳಪೆ ಗುಣಮಟ್ಟದ ಕಾಲೇಜುಗಳಿಂದಾಗಿ ಭರ್ತಿಯಾಗದೆ ಉಳಿಯುವ ಸೀಟುಗಳ ಸಂಖ್ಯೆ ಅಧಿಕವಾಗಿದೆ. ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳಿಗೆ ಒತ್ತು ನೀಡದೆ ಎಐಟಿಸಿಇ ರೂಪಿಸುವ ಎಂಜಿನಿಯರಿಂಗ್‌ ಪಠ್ಯಕ್ರಮದಿಂದಾಗಿ ಪದವೀಧರರಿಗೆ ಉದ್ಯೋಗ ದೊರೆಯುವುದು ಕಷ್ಟವಾಗುತ್ತಿದೆ. 2011ರವರೆಗೆ ಎಂಜಿನಿಯರಿಂಗ್‌ ಪ್ರವೇಶಕ್ಕೆ ವಿದ್ಯಾರ್ಥಿಯು, ಪಿಯುಸಿಯಲ್ಲಿ ಗಣಿತ, ರಸಾಯನ ಶಾಸ್ತ್ರ ಮತ್ತು ಭೌತಶಾಸ್ತ್ರದಲ್ಲಿ ಶೇಕಡಾ 50 ಅಂಕಗಳನ್ನು ಗಳಿಸಿರಬೇಕು ಎನ್ನುವ ನಿಯಮ ಚಾಲ್ತಿಯಲ್ಲಿತ್ತು. ಆದರೆ ನಂತರದ ದಿನಗಳಲ್ಲಿ ಎಐಸಿಟಿಇ ಇದನ್ನು ಶೇಕಡಾ 45 ಅಂಕಗಳಿಗೆ ಇಳಿಸಿತು. ಎಂಜಿನಿಯರಿಂಗ್‌ ಕಾಲೇಜು ಸೇರುವ ವಿದ್ಯಾರ್ಥಿಗಳ ಸಂಖ್ಯೆ ತಾತ್ಕಾಲಿಕವಾಗಿ ಹೆಚ್ಚಾದರೂ, ಪದವೀಧರರ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮವಾಯಿತು.

ಬೇಡಿಕೆ ಇಲ್ಲದ ಕೋರ್ಸ್‌ಗಳು
ಏರೋಸ್ಪೇಸ್‌, ಆಟೋಮೋಟಿವ್‌ ಮತ್ತು ರೋಬೋಟಿಕ್ಸ್‌, ಸೆರಾಮಿಕ್ಸ್‌ ಮತ್ತು ಸಿಮೆಂಟ್‌, ಪರಿಸರ, ಇನ್ಸ್‌ಟ್ರಾಮೆಂಟೇಷನ್‌, ಮ್ಯಾನುಫ್ಯಾಕ್ಚರಿಂಗ್‌, ಪೆಟ್ರೋ-ಕೆಮಿಕಲ್‌, ಗಣಿಗಾರಿಕೆ, ಪಾಲಿಮರ್‌, ರೇಷ್ಮೆ ಸೇರಿದಂತೆ ಒಟ್ಟು 12 ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಬೇಡಿಕೆ ಇಲ್ಲದ ಕಾರಣ, ಇವುಗಳನ್ನು ಮುಚ್ಚುವಂತೆ ಎಐಸಿಟಿಇಗೆ ಶಿಫಾರಸು ಮಾಡಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಇದು ಸಾಧ್ಯವಾದಾಗ, ಕರ್ನಾಟಕದಲ್ಲಿ ಭರ್ತಿಯಾಗುವ ಎಂಜಿನಿಯರಿಂಗ್‌ ಸೀಟುಗಳ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. 

ಉದಯ ಶಂಕರ ಪುರಾಣಿಕ

ಟಾಪ್ ನ್ಯೂಸ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.