ಟೆಸ್ಟ್‌ ಎದುರಿಸುವುದು ಹೇಗೆ?


Team Udayavani, Sep 11, 2018, 6:00 AM IST

24.jpg

ಕಲಿಕೆ ಜೀವನಪರ್ಯಂತ ಇದ್ದೇ ಇರುತ್ತೆ. ಅದು ಯಾವತ್ತಿಗೂ ಮುಗಿಯುವುದಿಲ್ಲ ಎಂಬ ಮಾತಿದೆ. ಪರೀಕ್ಷೆ ಬಂದಾಗ ಗಾಬರಿ ಬೀಳುವ ಅಗತ್ಯವಿಲ್ಲ. ಚೆನ್ನಾಗಿ ತಯಾರಾಗಿದ್ದರೆ ಯಾವ ಚಿಂತೆಯೂ ಇರುವುದಿಲ್ಲ. ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಇರುವ ತಂತ್ರಗಳು ಇಲ್ಲಿವೆ…

ಒಂದು ಕೆಲಸ ಮಾಡಿ
ಇದು “ಒಂದ್‌ ಕೆಲ್ಸ ಮಾಡಿ…’ ಎಂದು ದಾರಿ ತೋರುವ ವಾಕ್ಯವಲ್ಲ. ಓದುವಾಗ ಪಾಲಿಸಬೇಕಾದ ಸಿದ್ಧಾಂತ. ಇದರರ್ಥ, ಓದುವಾಗ ತಲೆಯೊಳಗೆ ಬೇರ್ಯಾವ ಆಲೋಚನೆಯನ್ನೂ ಮಾಡಬಾರದು. ಅಂದರೆ, ಒಂದೇ ವಿಷಯದ ಕಡೆ ನಮ್ಮ ಗಮನ ಕೇಂದ್ರಿತವಾಗಿರಬೇಕು. 

ಚೆನ್ನಾಗಿ ನಿದ್ದೆ ಮಾಡಿ
ತರಗತಿಯಲ್ಲಿ ಅಲ್ಲ! ಕೆಲವರಿಗೆ ರಾತ್ರಿಯಿಡೀ ನಿದ್ದೆಗೆಟ್ಟು ಓದುವ ಅಭ್ಯಾಸವಿರುತ್ತದೆ. ಓದುವುದೇನೋ ಸರಿ, ಆದರೆ ನಿದ್ದೆಗೆಟ್ಟು, ಕಣ್ಣಿಗೆ, ಮನಸ್ಸಿಗೆ ಕಿರಿಕಿರಿ ಮಾಡಿಕೊಳ್ಳಬಾರದು. ನಿದ್ದೆಗೆಡುವುದರಿಂದ ನಮಗೇ ಹೆಚ್ಚು ತೊಂದರೆ. ನೆನಪಿನಲ್ಲಿರೋದೂ ಮರೆತು ಹೋದೀತು. ಹೀಗಾಗಿ ಓದಿನಷ್ಟೆ ನಿದ್ದೆಯೂ ಮುಖ್ಯ.

ಸ್ವಪರೀಕ್ಷೆ
ನಾವೆಲ್ಲರೂ ಎಷ್ಟು ಕಲಿತಿದ್ದೇವೆ ಎಂಬುದನ್ನು ತಿಳಿಯಲು ಎಕ್ಸಾಮ್‌ ತನಕ ಕಾಯಬೇಕಿಲ್ಲ. ನಮಗೆ ನಾವೇ ಪರೀಕ್ಷೆ ಕೊಟ್ಟುಕೊಂಡೂ ತಿಳಿಯಬಹುದು. ಇದರಿಂದ ನಮ್ಮ ಸಾಮರ್ಥ್ಯ, ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗುತ್ತದೆ.

ಸಮಯ ಕೊಡಿ
ಬೀಜ ಏಕಾಏಕಿ ಒಂದೇ ರಾತ್ರಿಯಲ್ಲಿ ಮರವಾಗಿ ಬೆಳೆದುಬಿಡುವುದಿಲ್ಲ. ಅದಕ್ಕೆ ವರ್ಷಗಳ ಕಾಲ ಹಿಡಿಯುತ್ತದೆ. ಆಗಲೇ ಸದೃಢವಾಗಿ ಗಾಳಿ, ಮಳೆ, ಬಿಸಿಲಿಗೆ ಸೋಲದೆ ನಿಲ್ಲಲು ಸಾಧ್ಯ. ನಮ್ಮ ಓದು ಕೂಡಾ ಅದೇ ರೀತಿ ಇರಬೇಕು. ಪರೀಕ್ಷೆ ಬಂದಾಗ ಮಾತ್ರ ಓದುವುದಲ್ಲ. ಶುರುವಿನಿಂದಲೇ ಓದುತ್ತಿದ್ದರೆ ಮೆದುಳಿನೊಳಗೆ ವಿಷಯಗಳು ಭದ್ರವಾಗಿ ಕೂರುವುದು. ಅಲ್ಲದೆ ವಿಷಯ ಚೆನ್ನಾಗಿ ಅರ್ಥವಾಗುವುದು.

ನೆನಪಿಡುವ ಕಲೆ
ಪಠ್ಯದಲ್ಲಿರುವ ಕೆಲವೊಂದು ಸಂಗತಿಗಳನ್ನು ಮನನ ಮಾಡಬೇಕಾಗಿ ಬರುತ್ತದೆ. ಕೆಲವೊಮ್ಮೆ ಈ ವಿಷಯಗಳು ದೀರ್ಘ‌ವಾಗಿದ್ದರಂತೂ ಮನನ ಮಾಡುವುದು ಕಷ್ಟವೆಂಬಂತೆ ತೋರುತ್ತದೆ. ಇಂಥಾ ಸಮಯದಲ್ಲಿ ಕೆಲ ಮಾರ್ಗಗಳು ನೆರವಿಗೆ ಬರುತ್ತವೆ. ಪೂರ್ತಿ ವಿಷಯವನ್ನೇ ನೆನಪಿಡುವ ಬದಲು ಶಾರ್ಟ್‌ ಆಗಿ ಒಂದೇ ಅಕ್ಷರದಿಂದ ನೆನಪಿಡಿ. ವಿಜ್ಞಾನದ ಪೀರಿಯಾಡಿಕ್‌ ಟೇಬಲ್‌ನಲ್ಲಿ ಏಛಿ, Nಛಿ, ಅr… ಎಂದೆಲ್ಲಾ ಬರೆದಿರುತ್ತಾರಲ್ಲ, ಹಾಗೆ. ಈ ತಂತ್ರವನ್ನು ಬಳಸಿಕೊಂಡು ಸೂತ್ರಗಳು, ಉದ್ದುದ್ದ ಪಾಯಿಂಟುಗಳಿರುವ ಉತ್ತರಗಳನ್ನೆಲ್ಲಾ ನೆನಪಿಡಬಹುದು. ಇದನ್ನು ಸ್ಮಾರ್ಟ್‌ ಸ್ಟಡಿ ಎಂದು ಕರೆಯುವರು.

ರಫ್ಬುಕ್‌ ಬಳಸಿ
ತಾವು ಕಲಿತದ್ದನ್ನೆಲ್ಲ ರಫ್ಬುಕ್‌ನಲ್ಲಿ ಪುಟ್ಟದಾಗಿ ನೋಟ್ಸ್‌ ಮಾಡಿಕೊಳ್ಳುವುದರಿಂದ ಹಲವು ಉಪಯೋಗಗಳಿವೆ. ಮನನ ಮಾಡಿಕೊಂಡಂತಾಗುವುದಲ್ಲದೆ, ಪರೀಕ್ಷೆಗೆ ಕೆಲ ಗಂಟೆಗಳಿರುವಾಗ ಪೂರ್ತಿ ಸಿಲಬಸ್‌ ಅನ್ನು ಅತಿ ಶೀಘ್ರವಾಗಿ ತಿರುವಿಕೊಳ್ಳಬಹುದು.

ವಿರಾಮ ಕೊಟ್ಟುಕೊಳ್ಳಿ
ಓದಿನ ನಡುವೆ ವಾಕ್‌, ಸ್ನೇಹಿತರೊಡನೆ ಮಾತು, ಸ್ವಲ್ಪ ಹೊತ್ತು ಮನರಂಜನೆ ಇದ್ದರೆ ತಪ್ಪೇನಿಲ್ಲ. ಅತಿಯಾಗಬಾರದು ಅಷ್ಟೆ. ಒಂದು ಬ್ರೇಕ್‌ ನೀಡುವುದರಿಂದ ಮನಸ್ಸು ರಿಲ್ಯಾಕ್ಸ್‌ ಆಗುತ್ತದೆ. ಓದನ್ನು ಮುಂದುವರಿಸಲು ಇನ್ನಷ್ಟು ಉತ್ಸಾಹ ಬರುತ್ತದೆ. ಆದರೆ ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಓದು ಶುರು ಮಾಡಿದರೆ ವಿರಾಮ ನೀಡಲು ಸಾಧ್ಯವಾಗದು. ಹೀಗಾಗಿ ಶುರುವಿನಿಂದಲೇ ಓದುವುದು ಅತ್ಯಗತ್ಯ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.