ನಿಲ್ಲಿಸಿ ಕೇಳಲು ಧೈರ್ಯ ಬರುತ್ತಿಲ್ಲ


Team Udayavani, Sep 11, 2018, 6:00 AM IST

26.jpg

ಅಂದು ಭಾಸ್ಕರ ಮೋಡಗಳ ಮಧ್ಯೆ ಸಿಲುಕಿ ವಸುಂಧರೆಯ ಚುಂಬಿಸಲು ಒದ್ದಾಡುತ್ತಿದ್ದ. ಇತ್ತ ಮೈಮೇಲಿದ್ದ ಕಂಬಳಿ ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಿತ್ತು. ಅದನ್ನು ಚೂರು ಎಳೆದು, ಕಿಟಕಿಯತ್ತ ಕಣ್ಣು ಹಾಯಿಸಿದಾಗ ಮಳೆ ನಿಲ್ಲುವ ಯಾವ ಮುನ್ಸೂಚನೆಯೂ ಕಾಣುತ್ತಿರಲಿಲ್ಲ. ಮಬ್ಬುಗತ್ತಲಿನಿಂದ ತುಂಬಿದ ಕೋಣೆಯಲ್ಲಿ ಮಳೆಯ ಆರ್ಭಟ ಬಿಟ್ಟರೆ ಎಲ್ಲವೂ ಶಾಂತವಾಗಿತ್ತು. ಅಮ್ಮ ಬಂದು ಬಡಿದೆಬ್ಬಿಸಲು ಗಂಟೆ ಒಂಬತ್ತಾಗಿತ್ತು. ನಿತ್ಯ ಕರ್ಮವ ಮುಗಿಸಿ ಎಡೆಬಿಡದೆ ಸುರಿಯುವ ಮಳೆಯಲ್ಲೇ ಕಾಲೇಜಿಗೆ ಹೊರಟೆ. 

ಮೊದಲೇ ಟೈಮಾಗಿತ್ತು. ಚಲಿಸುತ್ತಿರುವ ಬಸ್‌ ಹಿಡಿಯಲು ಓಡುತ್ತಾ ಸರ್ರನೆ ಕಾಲು ಜಾರಿ ನೆಲಕ್ಕೆ ಬಿದ್ದೆ. ಅದನ್ನು ಕಂಡು ನಿಂತವರಲ್ಲಿ ಕೆಲವರು ಒಳಗೊಳಗೆ ಕುಹಕದ ನಗೆ ಬೀರಿದರೆ, ಇನ್ನು ಕೆಲವರು ಕಂಡರೂ ಕಾಣದ ಹಾಗೆ ಸುಮ್ಮನಿದ್ದರು. ಇನ್ನೇನು ಎಲ್ಲರನ್ನೂ ಬೈದುಕೊಂಡು ಮೇಲೇಳಬೇಕು ಎನ್ನುವಷ್ಟರಲ್ಲಿ ಆತ ನನ್ನ ಕೈಗಳಿಗೆ ತನ್ನ ಕೈ ನೀಡಿ, ನಿಧಾನಕ್ಕೆ ಏಳಿ ಎಂದ. ನಂತರ, ನನ್ನಿಂದ ಬಹು ದೂರ ಬಿದ್ದಿದ್ದ ಬ್ಯಾಗನ್ನು ತಂದು ಕೈಯಲ್ಲಿಟ್ಟು, ಟೇಕ್‌ಕೇರ್‌ ಎಂದು ಹೇಳಿ ಪೂರ್ಣ ಚಂದಿರನಂತೆ ಮಾಯವಾಗಿಬಿಟ್ಟ. 

ಮೊದಲ ನೋಟದಲ್ಲೇ ಅವನ ವಶನಾಗಿಬಿಟ್ಟೆ ಎಂದೆನಿಸಿತು. ಹುಣ್ಣಿಮೆ ಚಂದ್ರನ ತೇಜಸ್ಸು ಅವನ ಮುಖದ ಮೇಲೆ ರಾರಾಜಿಸುತ್ತಿತ್ತು. ಆತನ ಗುಂಗುರು ಕೂದಲು, ಚಿಗುರು ಮೀಸೆಯಲ್ಲಿನ ಹುಮ್ಮಸ್ಸು, ಹೆಣ್ಣು ಮಕ್ಕಳ ಹುಬ್ಬನ್ನು ನಾಚಿಸುವಂತಿದ್ದ ಅವನ ಹುಬ್ಬುಗಳು, ದಾಳಿಂಬೆಯೂ ನಾಚುವಷ್ಟು ಚೆಂದಕ್ಕಿದ್ದ ಅವನ ದಂತಪಂಕ್ತಿಗಳು… ಇಷ್ಟು ಸಾಕಾಗಿತ್ತು ಮೈತುಂಬ ಅವನ ಗುಂಗೇರಲು.

ಮರುದಿನದಿಂದ ಕಣ್ಣು ಮುಚ್ಚಿದರೆ ಸಾಕು, ಆತನದ್ದೇ ಚಹರೆ. ರಾತ್ರಿಯೆಲ್ಲಾ ಅವನೇ ಆವರಿಸಿದ್ದ. ಮಾರನೇ ದಿನ ಅವನನ್ನು ಮಾತನಾಡಿಸಲೇಬೇಕೆಂದು ಅದೇ ಬಸ್‌ ಸ್ಟಾಂಡಿನ ಹತ್ತಿರ ನಿಂತೆ. ಆತ ಬರಲೇ ಇಲ್ಲ. ನಿರಾಶೆ ಜೊತೆಯಾಗಿ ಹೆಜ್ಜೆ ಹಾಕಲು, ಕೂಗಳತೆಯ ದೂರದಲ್ಲಿ ಗೆಳೆಯರ ಗುಂಪಿನೊಂದಿಗೆ ಚಾ ಹೀರುತ್ತಾ ನಿಂತಿದ್ದ. ಇನ್ನೇನು ಮಾತನಾಡಿಸಬೇಕೆಂದು ಅಲ್ಲಿಗೆ ದೌಡಾಯಿಸುವಷ್ಟರಲ್ಲಿ ಬೈಕ್‌ ಏರಿ ಹೋರಟೇ ಹೋದ. ಈ ಹದಿಹರೆಯದ ಮನಸ್ಸೇ ಹೀಗೇನೋ! ಈಗಲೂ ನಾನು ಅವನ ಕಲ್ಪನೆಯಲ್ಲೇ ಹೊಯ್ದಾಡುತ್ತಿರುವೆ, ಚಿಟಪಟ ಮಳೆಯಂತೆ, ಸುಳಿಮಿಂಚಂತೆ ಅವನು ಆವರಿಸಿಕೊಂಡಿದ್ದಾನೆ… 

ಆದರೆ, ಮೊನ್ನೆಯಿಂದ ಹೀಗೊಂದು ಯೋಚನೆ ಜೊತೆಯಾಗಿದೆ. ನಾನೇನೋ ಅವನಿಗಾಗಿ ಹಂಬಲಿಸ್ತಾ ಇದೀನಿ. ಆದರೆ, ಅಂಥದೇ ಫೀಲ್‌ ಅವನೊಳಗೂ ಇದೆಯಾ? ಅವನ ಮನಸೊಳಗೆ ಈಗಾಗಲೇ ಬೇರೆ ಯಾರಾದರೂ ಇರಬಹುದಾ? ಅದೇ ಕಾರಣಕ್ಕೆ ಅವನು ಒಮ್ಮೆಯೂ ಭೇಟಿಯಾಗದೆ ಅಥವಾ ನನ್ನನ್ನು ಕಂಡರೂ ಕಾಣದವನಂತೆ ವರ್ತಿಸುತ್ತಾ ಸುಮ್ಮನೆ ಉಳಿದುಬಿಟ್ಟಿದ್ದಾನಾ? ಇಂಥ ಯೋಚನೆಗಳಲ್ಲೇ ಕಳೆದುಹೋಗಿದ್ದೇನೆ. ಉತ್ತರ ಹೇಳಬೇಕಾದವನು ಕೈಗೇ ಸಿಗುತ್ತಿಲ್ಲ. ನಿಲ್ಲಿಸಿ ಕೇಳ್ಳೋಣವೆಂದರೆ, ನನಗೆ ಧೈರ್ಯ ಬರುತ್ತಿಲ್ಲ… ಏನು ಮಾಡಲಿ?

ಮಾಲತಿ ಅಗಸರ

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.