ದೋಣಿಯೇರಿ ಬರುವ ಟೀಚರಮ್ಮ


Team Udayavani, Oct 16, 2018, 6:00 AM IST

z-11.jpg

ಈಕೆಯ ಪಾಲಿಗೆ ಬೋಟಿಂಗ್‌, ಟ್ರೆಕ್ಕಿಂಗ್‌ ಅನ್ನೋದು ಅಡ್ವೆಂಚರ್ಸ್‌ ವಿಷಯಗಳೇ ಅಲ್ಲ. ತುಂಬಿ ಹರಿಯುವ ನದಿಯನ್ನು ದಾಟುವುದು, ಕಲ್ಲು ಮುಳ್ಳಿನ ಕಾಡಿನ ಹಾದಿಯಲ್ಲಿ ನಡೆಯುವುದು ದಿನಚರಿಯ ಭಾಗ. ಕಾಡುಪ್ರಾಣಿಗಳ ಸದ್ದು ಕೇಳುತ್ತಾ, ಅವುಗಳ ಹೆಜ್ಜೆ ಹಾದಿಯಲ್ಲೇ ನಡೆದು ಶಾಲೆ ತಲುಪುವ ಈ ಶಿಕ್ಷಕಿಯ ಕಥೆ, ಯಾವ ಶೌರ್ಯ ಪ್ರಶಸ್ತಿ ವಿಜೇತರಿಗೂ ಕಡಿಮೆಯಿಲ್ಲ…

ತಿರುವನಂತಪುರ ಬಳಿಯ ಅಂಬೂರಿ ಎಂಬ ಸಣ್ಣ ಹಳ್ಳಿಯ ಆ ಮನೆಯಲ್ಲಿ ಬೆಳಕಾಗುವುದು ಸ್ವಲ್ಪ ಬೇಗವೇ. ಹಳ್ಳಿಯ ಜನರಿನ್ನೂ ಎದ್ದು, ಮೈ ಮುರಿಯುತ್ತಿರುವಾಗಲೇ, ಆ ಮನೆಯಿಂದ ಸ್ಕೂಟರೊಂದು ಧೂಳೆಬ್ಬಿಸುತ್ತ ಸಾಗುತ್ತದೆ. ಅಂದರೆ, ಗಂಟೆ ಏಳಾಯ್ತು. ಟೀಚರಮ್ಮ ಹೊರಟರು ಅಂತ ಅರ್ಥ. ಮತ್ತೆ ಸಂಜೆ ಅವರು ಬರುವುದು, ಏಳರ ನಂತರವೇ ಅನ್ನೋದು ಎಲ್ಲರಿಗೂ ಗೊತ್ತು. ಮಳೆ ಸುರಿಯಲಿ, ಚಳಿ ಮೈ ಕೊರೆಯುತ್ತಿರಲಿ, ಈ ಶಿಕ್ಷಕಿಯ ಗಡಿಯಾರ ಚಲಿಸುವುದು ಹೀಗೆಯೇ.

  ಬೆಳಗ್ಗೆ ಏಳು ಗಂಟೆಗೆ ಅಂಬೂರಿಯಿಂದ ಹೊರಟ, ಕೆ.ಆರ್‌. ಉಷಾಕುಮಾರಿಯವರ ಸ್ಕೂಟರ್‌ ಒಂದೆರಡು ಕಿಲೋಮೀಟರ್‌ ಕ್ರಮಿಸಿ, ಕುಂಬಿಕ್ಕಲ್‌ ಕಡವು ಎಂಬಲ್ಲಿಗೆ ತಲುಪುತ್ತದೆ. ಆಮೇಲೆ ಅದಕ್ಕೆ ಸಂಜೆಯವರೆಗೆ ರೆಸ್ಟ್‌. ಯಾಕಂದ್ರೆ, ಮುಂದೆ ಮೈದುಂಬಿ ಹರಿಯುತ್ತಿರೋ ನದಿಯನ್ನು ಉಷಾ, ದೋಣಿಯಲ್ಲೇ ದಾಟಬೇಕು. ಅಂಬಿಗನನ್ನು ನಂಬಿ, ಕೆಲವೊಮ್ಮೆ ತಾವೇ ಸ್ವತಃ ಹುಟ್ಟು ಹಾಕಿಕೊಂಡು ಆಚೆ ದಡ ತಲುಪುವ ಉಷಾರನ್ನು ವೆಲ್‌ಕಂ ಮಾಡೋದು, ದುರ್ಗಮ ಕಾಡು. ಅಲ್ಲಿಂದ ಟ್ರೆಕ್ಕಿಂಗ್‌ ಎಂಬ ಹೊಸ ಸಾಹಸ ಶುರು. ಕಾಡಿನಲ್ಲಿ ಎರಡು ಕಿ.ಮೀ. ನಡೆದ ಮೇಲೆ, ಬೆಟ್ಟವೊಂದು ಎದುರಾಗುತ್ತದೆ. ಕೈಯಲ್ಲಿ ಕೋಲು ಹಿಡಿದು, ಆ ಕಲ್ಲು ಮುಳ್ಳಿನ ಬೆಟ್ಟ ಹತ್ತುವುದು ಅವರ ಪಾಲಿಗೇನು ಸಾಹಸದ ಯಾತ್ರೆಯಲ್ಲ. ಆ ಹಾದಿಯಲ್ಲಿ ಒಂದೆರಡು ಮಕ್ಕಳು ಅವರಿಗೆ ಜೊತೆಯಾಗುತ್ತಾರೆ. ಹೀಗೆ ಮತ್ತೆ ಎರಡು ಕಿ.ಮೀ. ಟ್ರೆಕ್ಕಿಂಗ್‌ ಮಾಡಿದರೆ, ಸಿಗುವುದೇ ಅಗಸ್ತ್ಯ ಏಕೋಪಾಧ್ಯಾಯ ವಿದ್ಯಾಲಯ. ಉಷಾ ಅವರು ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಶಾಲೆ ಅದು. ಬೆಳಗ್ಗೆ ಹತ್ತರಿಂದ ನಾಲ್ಕರವರೆಗೆ ಪಾಠ ಮಾಡಿ, ಅಲ್ಲಿಂದ ಹೊರಟರೆ ಮನೆಗೆ ವಾಪಸಾಗುವಾಗ ಸಂಜೆ ಏಳು ಗಂಟೆ. ಮರುದಿನ ಮತ್ತದೇ ಹಾದಿ… ಕಳೆದ ಹದಿನೆಂಟು ವರ್ಷಗಳಿಂದ ಉಷಾ ಹೀಗೆ ಕೆಲಸ ಮಾಡುತ್ತಿದ್ದಾರೆ!

ಆಲ್‌ರೌಂಡರ್‌ ಟೀಚರ್‌
ಅಗಸ್ತ್ಯ ಏಕೋಪಾಧ್ಯಾಯ ಶಾಲೆ ಇರುವುದು ಕುನ್ನತುಮಲ ಎಂಬ ಅರಣ್ಯ ಪ್ರದೇಶದಲ್ಲಿ. 1- 4ನೇ ತರಗತಿಯವರೆಗಿನ ಆ ಶಾಲೆಗೆ, ಉಷಾ ಒಬ್ಬರೇ ಶಿಕ್ಷಕಿ. ಅಲ್ಲಿಗೆ ಬರುವವರೆಲ್ಲರೂ ಬುಡಕಟ್ಟು ಜನಾಂಗದ ಮಕ್ಕಳು. ಈ ವರ್ಷ ದಾಖಲಾಗಿರುವ ಮಕ್ಕಳ ಸಂಖ್ಯೆ 14. ಅಡುಗೆಗೆ ಸಹಾಯಕಿ ಒಬ್ಬಳಿದ್ದಾಳೆ ಅನ್ನೋದನ್ನು ಬಿಟ್ಟರೆ, ಉಳಿದ ಎಲ್ಲ ಕೆಲಸವನ್ನೂ ಉಷಾ ಅವರೇ ನೋಡಿಕೊಳ್ಳಬೇಕು. ನಾಲ್ಕು ತರಗತಿಯ ಮಕ್ಕಳಿಗೆ ಮಲಯಾಳಂ, ಗಣಿತ, ಇಂಗ್ಲಿಷ್‌, ಪರಿಸರ ಅಧ್ಯಯನ ಪಾಠ ಮಾಡುವುದರ ಜೊತೆಗೆ, ಸರ್ಕಾರದಿಂದ ಬರುವ ಅಡುಗೆ ಸಾಮಗ್ರಿ, ಪುಸ್ತಕ, ಸಮವಸ್ತ್ರಗಳನ್ನು ಶಿಕ್ಷಣ ಇಲಾಖೆಯಿಂದ ಶಾಲೆಗೆ ತರುವ, ಅಡುಗೆಯ ಉಸ್ತುವಾರಿ ನೋಡಿಕೊಳ್ಳುವ, ದಾಖಲಾತಿಗಳನ್ನು ಬರೆಯುವ ಜವಾಬ್ದಾರಿಯೂ ಶಿಕ್ಷಕಿಯ ಹೆಗಲಿನ ಮೇಲೇ ಬೀಳುತ್ತದೆ. ಅಷ್ಟೇ ಅಲ್ಲ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಕ್ಕಳನ್ನು ತಯಾರು ಮಾಡಬೇಕು. ಇಲ್ಲಿಂದ ಪಾಸ್‌ ಆಗಿ, ಬೇರೆ ಶಾಲೆಗೆ ಹೋದಾಗ, ನನ್ನ ಮಕ್ಕಳು ಯಾವ ವಿಷಯದಲ್ಲೂ ಹಿಂದೆ ಬೀಳಬಾರದು ಎಂಬುದು ಉಷಾರ ಕಾಳಜಿ. ಹಾಗಾಗಿ, ಮಕ್ಕಳನ್ನು ಸ್ಪರ್ಧಾತ್ಮಕವಾಗಿ ರೂಪಿಸುವಲ್ಲಿಯೂ ಇವರು ಹಿಂದೆ ಬಿದ್ದಿಲ್ಲ. 

20 ವರ್ಷದಿಂದ ಒಂದೇ ಶಾಲೆ, ಒಂದೇ ದಾರಿ
ಬಡ ಮಕ್ಕಳು ಶಾಲೆಯಿಂದ ದೂರ ಸರಿಯುತ್ತಿರುವುದನ್ನು ಗಮನಿಸಿದ ಕೇರಳ ಸರ್ಕಾರ, 1997ರಲ್ಲಿ ಡಿಸ್ಟ್ರಿಕ್ಟ್ ಪ್ರೈಮರಿ ಎಜುಕೇಶನ್‌ ಪ್ರೋಗ್ರಾಂ ಎಂಬ ಯೋಜನೆಯೊಂದನ್ನು ರೂಪಿಸಿತು. ಉಷಾ ಕುಮಾರಿ ಅವರು, ಆ ಯೋಜನೆಯ ಸ್ವಯಂ ಸೇವಕಿಯಾಗಿದ್ದರು. ಬುಡಕಟ್ಟು ಜನಾಂಗದವರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ, ಆ ಮಕ್ಕಳನ್ನು ಶಾಲೆಗೆ ಕರೆ ತರುವ ಕೆಲಸ ಅವರದ್ದಾಗಿತ್ತು. ಕುನ್ನತುಮಲ ಸುತ್ತಮುತ್ತ ಸರ್ಕಾರಿ ಶಾಲೆ ಇಲ್ಲದಿರುವುದನ್ನು ಮನಗಂಡ ಸರ್ಕಾರ, 1999ರಲ್ಲಿ ಅಗಸ್ತ್ಯವನಂ ಎಂಬಲ್ಲಿ ಅಗಸ್ತ್ಯ ಏಕೋಪಾಧ್ಯಾಯ ಶಾಲೆ ತೆರೆಯಿತು. ಆಗ ಅಲ್ಲಿಗೆ ಉಷಾ, ಶಿಕ್ಷಕಿಯಾಗಿ ನೇಮಕವಾದರು. ಅವತ್ತು ಶುರುವಾದ ಪಯಣ, ಇಂದಿಗೂ ನಿಂತಿಲ್ಲ. 

ಮನೆಮನೆಗೂ ಹೋಗಬೇಕಾಗಿತ್ತು…    
ಶಾಲೆಯೇನೋ ಶುರುವಾಯ್ತು. ಆದರೆ, ಶಾಲೆಗೊಂದು ಕಟ್ಟಡವೇ ಇರಲಿಲ್ಲ. ಮಕ್ಕಳೂ ಬರುತ್ತಿರಲಿಲ್ಲ. ಶಾಲೆಯಲ್ಲಿ ಕೊಟ್ಟ ಪಠ್ಯ ಪುಸ್ತಕಗಳನ್ನು ಒಲೆಗೆ ಎಸೆದು ಮಕ್ಕಳು ಕೂಲಿಗೆ ಹೋಗುತ್ತಿದ್ದರು. ಆಗ ಉಷಾ, ಮನೆಮನೆಗೂ ಹೋಗಿ, ಮಕ್ಕಳ ಮನವೊಲಿಸಬೇಕಾಗಿತ್ತು. ಕ್ರಮೇಣ ಅವರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾದ ಉಷಾ, ಬುಡಕಟ್ಟು ಜನಾಂಗದವರ ಮನವನ್ನೂ ಗೆದ್ದರು. ಮೊದಲ ಒಂದು ವರ್ಷ ಕಲ್ಲು ಬಂಡೆಯ ಮೇಲೆ, ಮರದ ಕೆಳಗೆ ಕುಳಿತೇ ಪಾಠ ಮಾಡಿದರು. ನಂತರ ಕಟ್ಟಡ ನಿರ್ಮಾಣವಾಯ್ತು, ಮಕ್ಕಳೂ ತಪ್ಪದೇ ಶಾಲೆಗೆ ಬರತೊಡಗಿದರು. 

ಸಂಬಳಕ್ಕಾಗಿ ದುಡಿಯುತ್ತಿಲ್ಲ
ಕೆಲವೊಮ್ಮೆ 2-3 ತಿಂಗಳಾದರೂ ಸಂಬಳ ಕೈ ಸೇರುವುದಿಲ್ಲ. ಮಕ್ಕಳ ಊಟದ ಸಾಮಗ್ರಿಗಳು ಬರುವುದಿಲ್ಲ. ಆಗೆಲ್ಲಾ ಉಷಾ, ತನ್ನ ಸ್ವಂತ ಹಣದಿಂದ ಮಕ್ಕಳಿಗೆ ಹಾಲು, ಮೊಟ್ಟೆ ತಂದು ಕೊಡುತ್ತಾರೆ. ಹಾಗಾಗಿಯೇ ಮಕ್ಕಳಿಗೆ, ಅವರ ಹೆತ್ತವರಿಗೆ ಉಷಾ ಟೀಚರ್‌ ಅಂದ್ರೆ ಅಚ್ಚುಮೆಚ್ಚು. ಹುಷಾರಿಲ್ಲದಿದ್ದರೂ ಶಾಲೆಗೆ ಬರುವ ಟೀಚರ್‌ಗೆ ವಾಪಸ್‌ ಮನೆಗೆ ಹೋಗಲಾಗದಿದ್ದರೆ, ವಿದ್ಯಾರ್ಥಿಗಳ ಮನೆಯಲ್ಲೇ ಉಪಚಾರ ಸಿಗುತ್ತದೆ.

ಕಾಡುಪ್ರಾಣಿಗಳ ಭಯ
ಉಷಾ ಅವರು ಶಾಲೆಗೆ ಬರುವ ದಾರಿಯಲ್ಲಿ ಕೆಲವೊಮ್ಮೆ ಸಣ್ಣ ಪುಟ್ಟ ಕಾಡುಪ್ರಾಣಿಗಳು ಎದುರಾಗುತ್ತವಂತೆ. ಆನೆ, ಚಿರತೆ ಇರುವ ಅರಣ್ಯವಾಗಿದ್ದರೂ, ಅವು ಒಮ್ಮೆಯೂ ಎದುರಿಗೆ ಸಿಕ್ಕದಿರುವುದು ಅವರ ಪುಣ್ಯ. ಮಳೆಗಾಲದಲ್ಲಿ ನದಿ ತುಂಬಿ ಹರಿದಾಗ, ಮಳೆಯಿಂದಾಗಿ ದಾರಿಯಲ್ಲಿ ಭೂಕುಸಿತ ಉಂಟಾದಾಗ ಜೀವ ಕೈಯಲ್ಲಿ ಹಿಡಿದು ಓಡಾಡಬೇಕು. ಆದರೂ, ಶಾಲೆಗೆ ರಜೆ ಮಾಡಲು ಉಷಾರ ಮನಸ್ಸು ಒಪ್ಪುವುದಿಲ್ಲ. ನಾಲ್ಕನೇ ತರಗತಿಯವರೆಗೆ ಮಕ್ಕಳು ಚೆನ್ನಾಗಿ ಓದಿದರೆ, ಮುಂದೆ ಹೆತ್ತವರು ಬೋರ್ಡಿಂಗ್‌ ಶಾಲೆಗೆ ಕಳಿಸುವ ಮನಸ್ಸು ಮಾಡುತ್ತಾರೆ. ಹಾಗಾಗಿ ಅವರಿಗಾಗಿ ನಾನು ಯಾವುದೇ ಕಷ್ಟ ಎದುರಿಸಲು ಸಿದ್ಧ ಅಂತಾರೆ ಉಷಾ. 

ಬೇರೆ ಶಾಲೆಯ ಮಕ್ಕಳಂತೆ, ನನ್ನ ಮಕ್ಕಳೂ ಎಲ್ಲಾ ವಿಷಯದಲ್ಲೂ ಜಾಣರಾಗಬೇಕು. ಮುಂದೆ ಸಿಟಿಯ ಶಾಲೆಗೆ ಓದಲು ಹೋದಾಗ, ನನಗೇನೂ ಗೊತ್ತಿಲ್ಲ ಅನ್ನೋ ಕೀಳರಿಮೆ ಅವರನ್ನು ಕಾಡಬಾರದು. ಹಾಗಾಗಿ, ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಅವರನ್ನು ಸಜ್ಜುಗೊಳಿಸುವುದು ನನ್ನ ಆದ್ಯತೆ. ಒಬ್ಬ ಶಿಕ್ಷಕರಿಂದ ಈ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ.
ಕೆ.ಆರ್‌. ಉಷಾ ಕುಮಾರಿ

– ಪ್ರಿಯಾಂಕ ಎನ್‌.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.