ಸಿಟ್ಟಲ್ಲಿ ಕೊಟ್ಟ ಪೆಟ್ಟು ಬಾಳಿನ ದಾರಿ ತೋರಿತು!


Team Udayavani, Feb 12, 2019, 12:30 AM IST

x-5.jpg

“ಸನ್ಮಾನ್ಯ ಅಧ್ಯಕ್ಷರೆ, ಅತಿಥಿಗಳೇ…’ ಮುಂದಿನದು ನೆನಪಾಗುತ್ತಿಲ್ಲ. ಮಾಸ್ತರರಿಗೆ ಸಿಟ್ಟು ಎಲ್ಲಿತ್ತೋ ಗೊತ್ತಿಲ್ಲ. ಅಲ್ಲೇ ಕಿಟಕಿಯಲ್ಲಿದ್ದ ರೂಲ್‌ ಬಡಿಗೆಯಿಂದ ಒಳ ಮೊಣಕಾಲಿಗೆ “ಟಪ್‌’ ಎಂದು ಒಂದೇಟು ಕೊಟ್ಟರು. ಅದೆಷ್ಟು ನೋವಾಯಿತೆಂದರೆ, ಕಣ್ಣೀರು ಸುರಿಯಿತು.
 
ನಾಲ್ಕು ದಶಕದ ಹಿಂದಿನ ಘಟನೆ ಇದು. ನಾನಾಗ 7ನೇ ತರಗತಿ ಓದುತ್ತಿದ್ದೆ. ನಮಗೆ ಆಲೂರ ಸರ್‌ ಎಂಬ ಶಿಕ್ಷಕರಿದ್ದರು. ಅವರ ಹೆಂಡತಿಯೂ ಶಿಕ್ಷಕಿಯೇ. ಆ ಶಿಕ್ಷಕ ದಂಪತಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ. ತಪ್ಪು ಮಾಡಿದ ಹುಡುಗರ ಅಂಗೈ ಮೇಲೆ ಜಬರಿ ಏಟಿನ ಕೆಂಪಾದ ರಂಗೋಲಿ ಎಳೆಯುತ್ತಿದ್ದರಾದರೂ, ಅದರಲ್ಲಿ ನನಗೆ ಮಾತ್ರ ಸ್ವಲ್ಪ ವಿನಾಯಿತಿ. ಆದರೆ, ನನ್ನ ಈ ಗರ್ವವೇ ಒಮ್ಮೆ ಅವರಿಂದ ನಾನೂ ಪೆಟ್ಟು ತಿನ್ನಲು ಕಾರಣವಾಯ್ತು.

ರಾಷ್ಟ್ರೀಯ ಹಬ್ಬಗಳಲ್ಲಿ ನಮ್ಮೂರು ಗ್ರಾಮ ಪಂಚಾಯತಿ ಮುಂದೆ ಸಾಮೂಹಿಕ ಕಾರ್ಯಕ್ರಮ ನಡೆಯುತ್ತಿತ್ತು. ಶಾಲಾ ಮಕ್ಕಳಿಂದ, “ಹಾರುತಿಹುದು ಏರುತಿಹುದು ನೋಡು ನಮ್ಮ ಬಾವುಟ’ ಗೀತೆ ಗಾಯನ, ನಂತರ ಪ್ರತಿ ಕಾರ್ಯಕ್ರಮದಲ್ಲೂ ನನ್ನದೇ ಭಾಷಣ. ಆಲೂರ ಮಾಸ್ತರರೇ ಭಾಷಣ ಬರೆದು ಕೊಡುತ್ತಿದ್ದರು. ನಾನು ಅದನ್ನು ಬಾಯಿಪಾಠ ಮಾಡಿ, ಅವರಿಗೆ ಒಪ್ಪಿಸಬೇಕಿತ್ತು.

 ತಮ್ಮ ಮನೆಯ ಮೆಟ್ಟಿಲ ಮೇಲೆ ಒಂದು ಜಬರಿ ಕೈಯಲ್ಲಿ ಹಿಡಿದು ಮಾಸ್ತರರು ಕುಳಿತಿರುತ್ತಿದ್ದರು. ನಾನು ಅವರ ಮುಂದೆ ನಿಂತು ಒಮ್ಮೆ ಅತ್ತ, ಒಮ್ಮೆ ಇತ್ತ ಕೈ ಹೊರಳಿಸುತ್ತ ಭಾಷಣ ಒಪ್ಪಿಸಬೇಕಿತ್ತು. ಅವರೇನೋ ದ್ರೋಣಾಚಾರ್ಯರು. ಆದರೆ, ನಾನು ಅರ್ಜುನನಂತಿರಲಿಲ್ಲ. ಸರಿಯಾಗಿ ಭಾಷಣ ಮಾಡದಿದ್ದಾಗ, ಅವರಿಗೆ ಸಿಟ್ಟು. ಕೋಪದ ಉಪಶಮನವೆಂದರೆ, ಕೊನೆಯವರೆಗೆ ಸರಿಯಾಗಿ ಹೇಳಿದ್ದರೂ, ಮತ್ತೂಮ್ಮೆ “ಸನ್ಮಾನ್ಯ ಅಧ್ಯಕ್ಷರೇ, ಗೌರವಾನ್ವಿತ ಅತಿಥಿಗಳೇ…’ ಇಂದ ಶುರು ಮಾಡಬೇಕಿತ್ತು. ಅತ್ತ ರೇಡಿಯೋ ತನ್ನಷ್ಟಕ್ಕೆ ತಾನು ನಿರಂತರ ಆಲಾಪ ಮಾಡುತ್ತಿದ್ದರೆ, ಇತ್ತ ನನ್ನ ಭಾಷಣದ ಆಲಾಪ ಆಗಾಗ ಕಟ್‌ ಕಟ್‌ ಆಗುತ್ತಿತ್ತು.

 ಆ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಎಂಟತ್ತು ದಿನ ಇತ್ತು. ಮಾಸ್ತರರು ಭಾಷಣ ಬರೆದು, ಬಾಯಿಪಾಠ ಮಾಡಲು ಹೇಳಿದರು. “ಹ್ಞುಂ’ ಎಂದು ತಲೆ ಅಲ್ಲಾಡಿಸಿದ ನಾನು, ಅಮ್ಮನೊಂದಿಗೆ ಊರಿಗೆ ಹೋಗಿಬಿಟ್ಟೆ. “ನನಗೇ ಏನು ಪ್ರತಿ ಸಾರಿ ಭಾಷಣ ಮಾಡೋಕೆ ಹೇಳ್ಳೋದು ಸರ್‌! ಈ ಸಲ ಬೇರೆಯವರಿಗೆ ಹೇಳ್ತಾರೆ ಬಿಡು’ ಎಂಬ ಅಹಂ ತಲೆ ಹೊಕ್ಕಿತ್ತು. ಐದಾರು ದಿನಗಳ ನಂತರ ಊರಿಗೆ ವಾಪಸ್‌ ಬಂದವಳೇ, ಮಾಸ್ತರರ ಮನೆಗೆ ಹೋದೆ. ಲಾಂದ್ರದ ಬೆಳಕಿನಲ್ಲಿ ತಣ್ಣಗೆ ಬೆಳದಿಂಗಳಂತೆ ಕುಳಿತಿದ್ದರು ಅವರು. “ಭಾಷಣ ಹೇಳು. ನಾಳೆ ಕಾರ್ಯಕ್ರಮ ಐತಿ’ ಎಂದರು. ನನ್ನ ಜಂಘಾಬಲವೇ ಉಡುಗಿ ಹೋಯ್ತು. ತುಟಿ ಅದುರಿತು. ಭಾಷಣ ಕಲಿತಿಲ್ಲ ಅಂತ ಹೇಳಲೂ ಧೈರ್ಯ ಸಾಲಲಿಲ್ಲ.

“ಸನ್ಮಾನ್ಯ ಅಧ್ಯಕ್ಷರೆ, ಅತಿಥಿಗಳೇ…’ ಮುಂದಿನದು ನೆನಪಾಗುತ್ತಿಲ್ಲ. ಮಾಸ್ತರರಿಗೆ ಸಿಟ್ಟು ಎಲ್ಲಿತ್ತೋ ಗೊತ್ತಿಲ್ಲ. ಅಲ್ಲೇ ಕಿಟಕಿಯಲ್ಲಿದ್ದ ರೂಲ್‌ ಬಡಿಗೆಯಿಂದ ಒಳ ಮೊಣಕಾಲಿಗೆ “ಟಪ್‌’ ಎಂದು ಒಂದೇಟು ಕೊಟ್ಟರು. ಅದೆಷ್ಟು ನೋವಾಯಿತೆಂದರೆ, ಕಣ್ಣೀರು ಸುರಿಯಿತು. “ಮನೆಯಲ್ಲಿ ಅಭ್ಯಾಸ ಮಾಡು’ ಎಂದು ಸಿಟ್ಟಿನಲ್ಲೇ ವಾಪಸ್‌ ಕಳಿಸಿದರು.

ಮರುದಿನ ಗ್ರಾಮ ಪಂಚಾಯತಿ ಧ್ವಜಾರೋಹಣ. ಭಾಷಣಕ್ಕೆ ನನ್ನ ಹೆಸರು ಕರೆದರು. ಮಾಸ್ತರರ ಕಡೆ ನೋಡಿದೆ. ಹೋಗು ಎಂದು ಕಣ್ಣಲ್ಲಿ ಆಜ್ಞೆ ಇತ್ತರು.  ನಾನು ವೇದಿಕೆಯೇರಿ, ಕೈ ಮಾಡಿ ಭಾಷಣ ಮಾಡಿದೆ. ಎಲ್ಲ ಮುಗಿದ ಮೇಲೆ ಕಂಪಾಸ್‌ ಬಾಕ್ಸ್‌, ನೋಟ್‌ ಬುಕ್‌, ಒಂದು ಚೀಲ ಪೆಪ್ಪರಮೆಂಟ್‌ ಬಹುಮಾನ ಸಿಕ್ಕಿತು. ಸೀದಾ ಹೋಗಿ ಸರ್‌ ಎದುರು ನಿಂತೆ. ಅವರ ಕಣ್ಣಲ್ಲಿ  ಹೊಳಪಿತ್ತು. “ಮಗಳ.. ಭಾರೀ ಶ್ಯಾಣೆ ಆಗೀ. ನಾ ಬರೆದದ್ದಕ್ಕಿಂತ ಚಂದ ಹೇಳಿದಿ ನೋಡ್‌!’ ಎಂದು ಬೆನ್ನು ತಟ್ಟಿದರು. 

 ಹಿಂದಿನ ದಿನ ಅವರು ಹೊಡೆದದ್ದಕ್ಕೆ, “ನೀನ್ಯಾಕವ್ವ ಊರಿಗೆ ಬಂದಿ. ಇಲ್ಲೇ ಅಜ್ಜಿ ಜೊತೆ ಇರಬೇಕಿಲ್ಲ’ ಎಂದು ಅಮ್ಮನೂ ಬೇಜಾರು ಮಾಡಿಕೊಂಡಿದ್ದಳು. ಕಂದೀಲದ ಬೆಳಕಲ್ಲಿ  ರಾತ್ರಿಯಿಡೀ ಚೆನ್ನಾಗಿ ಬಾಯಿಪಾಠ ಮಾಡಿದ್ದೆ. ಆ ಪರಿಶ್ರಮವೇ ಮಾಸ್ತರರ ಕಣ್ಣಲ್ಲಿ ಹೊಳಪಾಗಿ ಕಾಣಿಸಿತ್ತು. 

ಅಂದು ಆಲೂರ ಸರ್‌ ಬರೆದು ಕೊಟ್ಟ ಅಕ್ಷರದ ಸಾಲುಗಳೇ ಇಂದು ಬಾಳಿನ ಅರ್ಥ ಹುಡುಕಲು ಕಲಿಸಿವೆ. ಇಂದು ನನ್ನ ಬರಹವನ್ನು ಗುರುತಿಸಿ, ಭಾಷಣಕ್ಕೆ ಆಮಂತ್ರಣ ಕೊಡುತ್ತಾರೆಂದರೆ ಅದರ ಶ್ರೇಯ ಆಲೂರ ಸರ್‌ನಂಥ ಶಿಕ್ಷಕರಿಗೆ ಸೇರಬೇಕು. ಬಾಳಿನ ಉದ್ದಗಲದಲ್ಲಿ ಬಂದು ಹೋದ ಒಳ ಪೆಟ್ಟುಗಳು ನೂರು. ಯಾವ ಏಟಿನಿಂದ ಯಾರ ಬಾಳಿನಲ್ಲಿ ಚಿತ್ತಾರ ಮೂಡುತ್ತದೋ ಯಾರಿಗೆ ಗೊತ್ತು? ಸ್ವೀಕರಿಸುವವನ ಎದೆ ಮಾತ್ರ ಭಾರವಾಗದೇ ಹಗುರಾಗಿರಬೇಕು.. ಇದು ಅವರೇ ಹೇಳಿದ ತತ್ವದ ಮಾತು. ಆಲೂರ ಸರ್‌, ನಿಮಗೊಂದು ಶರಣು. 

ಲಲಿತಾ ಕೆ. ಹೊಸಪ್ಯಾಟಿ, ಹುನಗುಂದ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.