ಟಿಕ್‌ ಟಾಕ್‌ನಿಂದ ಹೊರ ಬರಲು…. 


Team Udayavani, Mar 19, 2019, 12:30 AM IST

w-15.jpg

ಟಿಕ್‌ ಟಾಕ್‌ ಆ್ಯಪ್‌ ನಮ್ಮ ಸಮಯವನ್ನಷ್ಟೇ ಅಲ್ಲ, ಮನಸ್ಸಿನ ಶಾಂತಿಯನ್ನೂ ಹಾಳು ಮಾಡುತ್ತಿದೆ. ಮಕ್ಕಳು ಹಾಗೂ ಹದಿ ಹರೆಯದವರಲ್ಲಿಯೇ ಟಿಕ್‌ ಟಾಕ್‌ ಕ್ರೇಝ್ ಹೆಚ್ಚಿದ್ದು, ದಿನದ ಬಹುಪಾಲು ಸಮಯವನ್ನು ಮೊಬೈಲ್‌ನಲ್ಲೇ ಕಳೆಯುತ್ತಿದ್ದಾರೆ. ಈ ಆ್ಯಪ್‌ನಲ್ಲಿ ಯಾರು ಬೇಕಾದರೂ, ಯಾವ ರೀತಿಯ ವಿಡಿಯೊವನ್ನು ಬೇಕಾದರೂ ಅಪ್‌ಲೋಡ್‌ ಮಾಡುವ ಅವಕಾಶ ಇದೆ. ವಯಸ್ಸಿಗೆ ಮೀರಿದ ಕೆಲವು ಕಂಟೆಂಟ್‌ಗಳು ಮಕ್ಕಳ ಮನಸ್ಸಿನ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ. ಟಿಕ್‌ ಟಾಕ್‌ ವಿಡಿಯೊಗಳನ್ನು ನೋಡಿ, ನಕ್ಕು ಸುಮ್ಮನಾಗುವವರು ಕೆಲವರಾದರೆ, ಬೇರೆಯವರ ವಿಡಿಯೊಗಳನ್ನು ನೋಡಿ ಪ್ರಚೋದನೆಗೆ ಒಳಗಾಗಿ, ವಿಡಿಯೊ ಅಪ್‌ಲೋಡ್‌ ಮಾಡುವವರೂ ಇದ್ದಾರೆ. ತಮ್ಮ ವಿಡಿಯೋವನ್ನು ಎಲ್ಲರೂ ನೋಡಿ, ಶೇರ್‌ ಮಾಡಬೇಕು. ಆ ಮೂಲಕ ತಮ್ಮ ಫಾಲೋವರ್ಗಳ ಸಂಖ್ಯೆ ಹೆಚ್ಚಬೇಕೆಂದು ತಲೆ ಕೆಡಿಸಿಕೊಳ್ಳುತ್ತಿರುವವರೆಷ್ಟೋ. ಒಳ್ಳೆಯ ಕಮೆಂಟ್ಸ್‌ಗಳು ಸಿಕ್ಕಾಗ ಹಿರಿಹಿರಿ ಹಿಗ್ಗಿ, ಕೆಟ್ಟ ಕಮೆಂಟ್‌ಗಳಿಗೆ ಖನ್ನರಾಗಿ, ಲೈಕ್ಸ್‌, ಕಮೆಂಟ್‌, ಶೇರ್ಗಳ ಲೆಕ್ಕಾಚಾರ ಹಾಕುತ್ತಾ ತಮ್ಮದೇ ಆದ ಫ್ಯಾಂಟಸಿ ಜಗತ್ತನ್ನು ಸೃಷ್ಟಿಸಿಕೊಂಡಿದ್ದಾರೆ. ಆ ಜಗತ್ತಿನಲ್ಲಿ ಅವರೇ ಸೆಲಬ್ರಿಟಿಗಳು. ಅವರಿಗೊಂದಷ್ಟು ಅಭಿಮಾನಿಗಳು. ಆ ಭ್ರಮೆಯ ಬಲೂನಿಗೆ ಕೆಟ್ಟ ಕಮೆಂಟ್‌ನ ಸೂಜಿ ಚುಚ್ಚಿದರೆ ಖನ್ನತೆ. 

ಹಾಗಾದ್ರೆ, ಈ ಗೀಳಿನಿಂದ ಹೊರ ಬರಲು ಸಾಧ್ಯವೇ ಇಲ್ವಾ? ಖಂಡಿತವಾಗಿಯೂ ಇದೆ. ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡರೆ, ಎಲ್ಲವೂ ಸಾಧ್ಯ. 
1. ದಿನನಿತ್ಯ ಮಾಡಬೇಕಾದ ಕೆಲಸಗಳ ವೇಳಾಪಟ್ಟಿಯನ್ನು ರಚಿಸಿ, ಅದನ್ನು ಪಾಲಿಸುತ್ತಾ ಬನ್ನಿ. ಓದು- ಬರಹ, ಕಾಲೇಜು ಸಮಯ, ಊಟ, ಆಟ, ನಿದ್ದೆ, ಮನರಂಜನೆ… ಹೀಗೆ ಪ್ರತಿಯೊಂದಕ್ಕೂ ಇಂತಿಷ್ಟೇ ಸಮಯ ಅಂತ ನಿಗದಿಪಡಿಸಿಕೊಳ್ಳಿ.

2. ಸ್ಕ್ರೀನ್‌ಟೈಮ್‌ ಅಥವಾ ಗ್ಯಾಜೆಟ್‌ ಟೈಮ್‌ಗೆ ನಿಗದಿಯಾಗಿರುವ ಸಮಯದಲ್ಲಿ ಮಾತ್ರ ಮೊಬೈಲ್‌ ಬಳಸಿ. ಶುರುವಿನಲ್ಲಿ ಸ್ಕ್ರೀನ್‌ಟೈಮ್‌ಗೆ ಒಂದು ಗಂಟೆ ನಿಗದಿಸಿದ್ದರೆ, ಕ್ರಮೇಣ ಅದನ್ನು ಕಡಿಮೆ ಮಾಡುತ್ತಾ ಬನ್ನಿ. 

3. ಹಿರಿಯರು ತಮ್ಮ ಮೊಬೈಲ್‌ ಅನ್ನು ಲಾಕ್‌ ಮಾಡಿ ಇಟ್ಟುಕೊಳ್ಳಬೇಕು ಹಾಗೂ ಮಕ್ಕಳು ಮೊಬೈಲ್‌ ಬಳಸುವಾಗ ಅವರ ಮೇಲೆ ಗಮನ ಇಡಬೇಕು. 

4. ಸೋಶಿಯಲ್‌ ಮೀಡಿಯಾಗಳ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು 

5. ಮಕ್ಕಳಲ್ಲಿ ಮೊಬೈಲ್‌ ಗೀಳು ತಪ್ಪಿಸಲು, ಹೊರಾಂಗಣ ಆಟದಲ್ಲಿ ಅವರು ತೊಡಗಿಕೊಳ್ಳುವಂತೆ ಪೋಷಕರು ಪ್ರೋತ್ಸಾಹಿಸಿ.    

6. ಯಾವುದೇ ಗೀಳು/ ಚಟದಿಂದ ಹೊರಕ್ಕೆ ಬರುವಾಗ, ಮನಸ್ಸಿನಲ್ಲಿ ಆಗುವ ಏರಿಳಿತಗಳು ತಾತ್ಕಾಲಿಕ. ಟಿಕ್‌ಟಾಕ್‌ ಗೀಳಿಗೆ ಒಳಗಾದವರು ಒಂದೇ ಕ್ಷಣದಲ್ಲಿ ಅದರಿಂದ ಹೊರ ಬರಲು ಸಾಧ್ಯವಿಲ್ಲ. ಹಂತಹಂತವಾಗಿ ಅದರಿಂದ ದೂರಾಗಬೇಕು.  

7. ಅಪ್ಪ-ಅಮ್ಮನ ಮೊಬೈಲ್‌ ಅನ್ನು ಅವರಿಗಿಂತ ಮಕ್ಕಳೇ ಹೆಚ್ಚು ಬಳಸುತ್ತಾರೆ. ಹಾಗಾಗಿ, ಹಿರಿಯರು ಕೂಡ ಈ ಆ್ಯಪ್‌ನಿಂದ ದೂರಾಗಬೇಕು.

 ಡಾ. ಶಿವದೇವ್‌

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.