ರಾಜಕೀಯ ಕುತೂಹಲದ ‘ಬಂಟ’ವಾಳ ಕ್ಷೇತ್ರ!


Team Udayavani, Apr 20, 2018, 9:00 AM IST

Nethravati-Bridge-Bantwal-600.jpg

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಗ್ಗೆ ಕರಾವಳಿ ಮಾತ್ರವಲ್ಲ, ಕರ್ನಾಟಕ ರಾಜ್ಯವೇ ಕುತೂಹಲ ವನ್ನು ಹೊಂದಿರುತ್ತದೆ. ಇಲ್ಲಿ ಬರುವ ಫಲಿತಾಂಶಗಳೆಲ್ಲ ಜಿಲ್ಲೆಯ ಮಟ್ಟಿಗೆ ಹೊಸ ದಾಖಲೆಗಳೇ ಆಗಿರುತ್ತವೆ!ಕರ್ನಾಟಕದ ಕರಾವಳಿ ಮತ್ತು ಮಲೆನಾಡನ್ನು ಬೆಸೆಯುವ ಹಾಗೂ ವಿವಿಧ ಕಾರಣಗಳಿಂದ ಮಹತ್ವವನ್ನು ಹೊಂದಿದೆ ಈ ಕ್ಷೇತ್ರ. ನೇತ್ರಾವತಿ ನದಿಯ ಮಡಿಲಲ್ಲಿ ಇರುವ ಊರು. ರಾಜ್ಯ ಹೆದ್ದಾರಿಯ ಮಹತ್ವದ ಕೇಂದ್ರ. ವಸ್ತುಶಃ ಶತಮಾನದ ಇತಿಹಾಸವಿರುವ ಪಾಣೆಮಂಗಳೂರು ಸೇತುವೆ ಈಗ ಸಮಾನಾಂತರವಾಗಿ ಹೊಸ ಸೇತುವೆಯನ್ನು ಹೊಂದಿದೆ. ತೆಂಗು, ಅಡಿಕೆ, ಭತ್ತ, ರಬ್ಬರ್‌ ಕೃಷಿಯ ಸಮೃದ್ಧಿಯ ಊರು. ಸಾಹಿತ್ಯ, ಸಂಸ್ಕೃತಿ, ಕಲೆ, ಕ್ರೀಡೆ ಸಹಿತ ಎಲ್ಲ ಸೃಷ್ಟಿಶೀಲ ರಂಗಗಳಿಗೆ ಸಂಬಂಧಿಸಿ ಅನೇಕಾನೇಕ ಸಾಧಕರ ಊರು ಬಂಟ್ವಾಳ. ಅಖೀಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ನೀಡಿರುವ ಅಧ್ಯಕ್ಷರ ಪೈಕಿ ಬೆನಗಲ್‌, ಪಂಜೆ, ಮುಳಿಯ, ಕಡೆಂಗೋಡ್ಲು ಅವರು ಇಲ್ಲಿಯವರು. ಸರ್ವ ಧರ್ಮಗಳ ಮಹತ್ವದ ಕೇಂದ್ರಗಳು ಇಲ್ಲಿವೆ.

ಹಾಗೆ ನೋಡಿದರೆ, ಮೊದಲ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಈ ಹೆಸರಲ್ಲಿ ಕ್ಷೇತ್ರವಿರಲಿಲ್ಲ. ಪಕ್ಕದಲ್ಲಿ ಪಾಣೆಮಂಗಳೂರು ಇತ್ತು. 1967ರಿಂದ ಬಂಟ್ವಾಳ ಕ್ಷೇತ್ರ ರೂಪುಗೊಂಡಿತು. 2009ರಲ್ಲಿ ಮತ್ತಷ್ಟು ವಿಸ್ತಾರವಾದ ಭೌಗೋಳಿಕ ಸ್ವರೂಪವನ್ನು ಪಡೆಯಿತು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ ಅವರು (1934) ಬಂಟ್ವಾಳಕ್ಕೆ ಅಗಮಿಸಿ ಜನರನ್ನು ಉದ್ದೇಶಿಸಿ ಮಾತನಾಡಿದ್ದರು.

ಬಂಟ್ವಾಳ ಕ್ಷೇತ್ರದಲ್ಲಿ  ಕಾಂಗ್ರೆಸ್‌ನ ಬಿ. ರಮಾನಾಥ ರೈ (ಹಾಲಿ ಸಚಿವರು- ಶಾಸಕರು) ಅವರು 1985ರಿಂದ ಈವರೆಗೆ ಆರು ಬಾರಿ ಜಯಿಸಿದ್ದಾರೆ. 2004ರಲ್ಲಿ ಮಾತ್ರ ಬಿಜೆಪಿಯ ಬಿ. ನಾಗರಾಜ ಶೆಟ್ಟಿ ಅವರು ಇಲ್ಲಿ ಜಯಿಸಿದ್ದರು. 1989ರಿಂದ ಇಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವೆ ಪ್ರಧಾನ ಸ್ಪರ್ಧೆ. ಎರಡೂ ಪಕ್ಷಗಳಿಂದ ಸ್ಪರ್ಧಿಸಿದವರು ಬಂಟ ಸಮಾಜದ ಅಭ್ಯರ್ಥಿಗಳು. ಈ ಬಾರಿ ಕೂಡ! ಬಂಟ್ವಾಳ ಕ್ಷೇತ್ರದಲ್ಲಿ ಪ್ರಬಲವಾದ ರಾಜಕೀಯ ಜಾಗೃತಿ ಇದೆ. ಚುನಾವಣಾಪೂರ್ವ ಸಂದರ್ಭದಲ್ಲಿದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಗ್ರಾಮ ಪಂಚಾಯತ್‌ ಹಂತದಿಂದ ಲೋಕಸಭಾ ಚುನಾವಣೆಯವರೆಗೆ ಇಲ್ಲಿನ ಮತದಾರರು ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.

ಕೆಲವೊಮ್ಮೆ ಅನಪೇಕ್ಷಿತ ಘಟನೆಗಳು ನಡೆದಿಲ್ಲ ಎಂದಲ್ಲ. ಆದರೆ ಅದು ತತ್‌ಕ್ಷಣವೇ ಬಗೆಹರಿದಿದೆ ಅನ್ನುವುದು ಸಮಾಧಾನಕರವಾದ ಸಂಗತಿ. ಅನೇಕ ರಾಷ್ಟ್ರ-ರಾಜ್ಯ- ಸ್ಥಳೀಯ ಪಕ್ಷಗಳಿಂದ ನೆಲೆ ಒದಗಿಸಿದ ಕ್ಷೇತ್ರ ಬಂಟ್ವಾಳ. ಈ ಬಾರಿಯೂ ಇಲ್ಲಿ ರಾಜಕೀಯ ಕಾವು ಈಗಾಗಲೇ ನಿಚ್ಚಳವಾಗಿದೆ. ಚುನಾವಣಾ ದಿನಾಂಕ ಘೋಷಣೆಯ ಮೊದಲೇ ಇಲ್ಲಿಗೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಬಂದಿದ್ದಾರೆ. ರ್ಯಾಲಿಗಳು ನಡೆದಿವೆ. ಆರೋಪ-ಪ್ರತ್ಯಾರೋಪಗಳು ‘ಮೊಳಗುತ್ತಲೇ’ ಇವೆ. ರಾಜಕೀಯ ಸಮೀಕರಣ, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕುತೂಹಲ ಮತ್ತಷ್ಟು ವೃದ್ಧಿಸಿದೆ!

ಅಂದ ಹಾಗೆ …
ಅನೇಕ ಪ್ರಥಮಗಳ ಹಿನ್ನೆಲೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕಿದೆ. ಇಲ್ಲಿನ 1967ರ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್‌ನ ಲೀಲಾವತಿ ಎಸ್‌. ರೈ ಗೆದ್ದರು. ಅವಿಭಜಿತ ಜಿಲ್ಲೆಯಿಂದ ಆ ವರ್ಷ ರೈ ಮತ್ತು ಕುಂದಾಪುರದಿಂದ ವಿನ್ನಿಫ್ರೆಡ್‌ ಫೆರ್ನಾಂಡಿಸ್‌ ವಿಧಾನಸಭೆಗೆ ಪ್ರವೇಶಿಸಿದ ಪ್ರಥಮ ಮಹಿಳಾ ಸದಸ್ಯರು. 1978ರಲ್ಲಿ ಕಮ್ಯೂನಿಸ್ಟ್‌ ಪಕ್ಷಕ್ಕೆ ಇಲ್ಲಿ ಬಿ. ವಿ. ಕಕ್ಕಿಲ್ಲಾಯರ ಮೂಲಕ ಪ್ರಾತಿನಿಧ್ಯ ದೊರೆಯಿತು. 1992-94-99-2013ರಿಂದ ಕಾಂಗ್ರೆಸ್‌ನ ಬಿ. ರಮಾನಾಥ ರೈ ಸಚಿವರು. 2004ರಲ್ಲಿ ಗೆದ್ದ ಬಿಜೆಪಿಯ ಬಿ. ನಾಗರಾಜ ಶೆಟ್ಟಿ ಸಚಿವರಾದರು. 1978ರಲ್ಲಿ ಗೆದ್ದ ಬಿ.ಎ. ಮೊದಿನ್‌ ಮುಂದೆ ವಿಧಾನ ಪರಿಷತ್‌ (1995-99) ಸದಸ್ಯರಾಗಿ ಸಚಿವರಾಗಿದ್ದರು.

— ಮನೋಹರ ಪ್ರಸಾದ್‌

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.