ಪಾರುಪತ್ಯಕ್ಕೆ ಗೌಡರ ಛಾಯಾಕದನ


Team Udayavani, Apr 21, 2018, 6:40 AM IST

hassan.jpg

ಏನಾದರೂ ಮಾಡಿ ಹಾಸನದಲ್ಲಿ ಪ್ರಭಾವ ಬೆಳೆಸಿಕೊಳ್ಳುತ್ತಿರುವ ಸಚಿವ ಎ.ಮಂಜು ಅವರನ್ನು ಕಟ್ಟಿ ಹಾಕಬೇಕು ಎಂಬುದು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಪಟ್ಟು… ಹೇಗಾದರೂ ಮಾಡಿ ಹಾಸನ ಜಿಲ್ಲೆಯಲ್ಲಿರುವ ದೇವೇಗೌಡರ ಪ್ರಭಾವ ಇಳಿಸಬೇಕು ಎಂಬುದು ಈಗಾಗಲೇ ಗೆದ್ದು ಸಚಿವ ಸ್ಥಾನವನ್ನೂ ಅಲಂಕರಿಸಿರುವ ಮತ್ತು ಒಕ್ಕಲಿಗ ಮುಖಂಡನೂ ಆಗಿರುವ ಎ.ಮಂಜು ಅವರ ಮಹಾಪಟ್ಟು… 

ಈ ಎರಡು ಕಾರಣಗಳಿಂದಾಗಿ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ. ಮಂಜು ಎದುರಾಳಿಯಾಗಿ ಜೆಡಿಎಸ್‌ನಿಂದ ಎ.ಟಿ.ರಾಮಸ್ವಾಮಿ ಸ್ಪರ್ಧಿಸುತ್ತಿ ದ್ದಾರೆ. ಈ ಕ್ಷೇತ್ರದಲ್ಲಿಯೇ ಮೂರು ಬಾರಿ ಶಾಸಕರಾಗಿದ್ದ ಅವರು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 

ಈ ಬಾರಿ ಎ. ಮಂಜು ಗೆದ್ದರೆ ಅದು ಹ್ಯಾಟ್ರಿಕ್‌ ಗೆಲುವು. ಹಾಗೆಯೇ ಅವರ ಪ್ರತಿಸ್ಪರ್ಧಿ ರಾಮ ಸ್ವಾಮಿ ವಿಜಯಿಯಾದರೂ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಶಾಸಕರೆಂಬ ದಾಖಲೆಯಾಗಲಿದೆ.  ಮಂಜು ಹಾಗೂ ರಾಮಸ್ವಾಮಿ ಈಗಾಗಲೇ ಮೂರು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಯೋಗಾರಮೇಶ್‌ ಎರಡನೇ ಬಾರಿ ಕಣಕ್ಕಿಳಿಯುತ್ತಿದ್ದು ಚೊಚ್ಚಲ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.  ಯೋಗಾರಮೇಶ್‌ ಸ್ಪರ್ಧೆ ಕಳೆದ ಬಾರಿಯ ಚುನಾವಣೆಯಲ್ಲಿ ರಾಮಸ್ವಾಮಿ ಗೆಲುವಿಗೆ ಅಡ್ಡಿಯಾಗಿತ್ತು ಎಂದು ವಿಶ್ಲೇಷಿಸಲಾಗಿತ್ತು. 

ಕುರುಬ ಹಾಗೂ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಹಳ್ಳಿಮೈಸೂರು ಹೋಬಳಿಯಲ್ಲಿ ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವರೆಂಬ ಕಾರಣಕ್ಕೆ ಮಂಜು ಅವರನ್ನು ಕುರುಬ ಸಮುದಾಯ ಬೆಂಬಲಿಸಿತ್ತು. 

ಈ ಬಾರಿ ಕುರುಬ ಮುಖಂಡರು ಮಂಜು ವಿರುದ್ಧ ತಿರುಗಿ ಬಿದ್ದಿದ್ದಾರೆ. ಸಮುದಾಯದ ಯುವ ಮುಖಂಡ ಹಳ್ಳಿಮೈಸೂರಿನ ಎಂ.ಕೆ.ಶೇಷೇಗೌಡ ಅವರನ್ನು ಎ.ಮಂಜು ಅವರ ವಿರುದ್ಧ  ಸ್ಪರ್ಧೆಗಿಳಿಸುತ್ತಿದ್ದಾರೆ. ಅನೇಕ ಪ್ರಭಾವಿ ಕುರುಬ ಮುಖಂಡರು ಜೆಡಿಎಸ್‌‌ ಸೇರಿರುವುದು ಅವರಿಗೆ ತಲೆನೋವು. ಜೆಡಿಎಸ್‌ನ ಹಿರಿಯ ಮುಖಂಡ ದೊಡ್ಡಮಗ್ಗೆ ರಂಗಸ್ವಾಮಿ ಅವರು ಕೆಲ ದಿನಗಳಿಂದ ಪಕ್ಷದ ವೇದಿಕೆಗಳಲ್ಲಿ ಕಾಣಿಸಿಕೊಳ್ಳದೆ ಪಕ್ಷ ಸಂಘಟನೆಯಿಂದ ದೂರ ಉಳಿದಿದ್ದರು. ಅವರ ಸಹೋದರ ನಿವೃತ್ತ ಐಎಎಸ್‌ ಅಧಿಕಾರಿ ರಾಮೇಗೌಡ  ಬಿಜೆಪಿಯಿಂದ ಸ್ಪರ್ಧಿಸುವ ಪ್ರಯತ್ನ ನಡೆಸಿದ್ದರು. ಆದರೆ ಅವರಿಗೆ ಬಿಜೆಪಿ ಟಿಕೆಟ್‌ ಸಿಗಲಿಲ್ಲ. ಯೋಗಾರಮೇಶ್‌ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ದೊಡ್ಡಮಗ್ಗೆ ರಂಗಸ್ವಾಮಿ ಕುಟುಂಬದವರೂ ಈಗ ಜೆಡಿಎಸ್‌ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಎ.ಮಂಜು ಅವರಿಗೆ ಹಿಡಿದ ಕೆಲಸ ಮಾಡಿಯೇ ತೀರುವ ಬದ್ಧತೆ ಇಲ್ಲ. ಎರಡೂವರೆ ವರ್ಷ ಅಧಿಕಾರದಲ್ಲಿದ್ದರೂ ಗುರುತಿಸುವಂಥ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಆಗಿಲ್ಲ ಎಂಬ ಆರೋಪವಿದೆ. ಎದುರಾಳಿ ಎ.ಟಿ.ರಾಮಸ್ವಾಮಿ ಅವರು ಪ್ರಾಮಾಣಿಕ, ಬದ್ಧತೆಯಿರುವ ರಾಜಕಾರಣಿ ಎಂಬ ಭಾವನೆಯಿದೆ. 

ಕ್ಷೇತ್ರದಲ್ಲಿ  ಬಿಜೆಪಿಗೆ ಭದ್ರ ನೆಲೆ ಇಲ್ಲ. ಯೋಗಾರಮೇಶ್‌ ಅವರು ಸ್ವಂತ ವರ್ಚಸ್ಸಿನಿಂದ ಮತ ಸೆಳೆಯಬೇಕಾಗಿದೆ. ಮತ ಸೆಳೆಯಬಹುದಾದ ವರ್ಚಸ್ವೀ ಬಿಜೆಪಿ ನಾಯಕರೂ ಈ ಕ್ಷೇತ್ರದಲ್ಲಿ ಯಾರೂ ಇಲ್ಲ. ಈ ಎಲ್ಲಾ ಬೆಳವಣಿಗೆಗಳಿಂದ ಎ.ಟಿ.ರಾಮಸ್ವಾಮಿ ಅವರು ಸದ್ಯದ ಮಟ್ಟಿಗೆ ಪ್ರಬಲರಾಗಿ ಕಾಣುತ್ತಿದ್ದಾರೆ. ಅವರ ವೇಗವನ್ನು ಎ.ಮಂಜು ಹಾಗೂ ಯೋಗಾರಮೇಶ್‌ ಯಾವ ಮಟ್ಟಿಗೆ ತಡೆಯುವರೆಂಬ ಕುತೂಹಲ ಕ್ಷೇತ್ರದಲ್ಲಿದೆ.

ಮಂಜು ಚಿಂತೆ
ಕ್ಷೇತ್ರದ ಪ್ರಮುಖ ಮುಖಂಡರ ಪಡೆ ಎ.ಟಿ.ರಾಮಸ್ವಾಮಿ  ಜೊತೆಗಿದೆ. ಎಚ್‌.ಡಿ.ದೇವೇಗೌಡ, ಎಚ್‌.ಡಿ.ರೇವಣ್ಣ ಪ್ರಭಾವ ದಟ್ಟವಾಗಿದೆ. ಈ ಬೆಳವಣಿಗೆಗಳಿಂದ ಎ.ಟಿ.ರಾಮಸ್ವಾಮಿ ದಿನೇ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಶಿವರಾಂ ಸೇರಿ ಜಿಲ್ಲೆಯ ಯಾವ ಕಾಂಗ್ರೆಸ್‌ ಮುಖಂಡರೂ ಎ.ಮಂಜು ಪರವಾಗಿ ಪ್ರಚಾರ ಮಾಡಿ ಮತದಾರರನ್ನು ಸೆಳೆಯುವ ಪರಿಸ್ಥಿತಿ ಇಲ್ಲ. ಇದು ಎ.ಮಂಜು ಅವರನ್ನು ಚಿಂತೆಗೀಡು ಮಾಡಿವೆ.

2500 ಕೋಟಿ  ರೂ.ಗಳ ಅನುದಾನ ತಂದಿ ರುವೆ. ಇಲ್ಲಿ ಅಭಿವೃದ್ಧಿ ಶಕೆ ಆರಂಭವಾಗಿದೆ. ಇದು ಈ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆ.
– ಎ.ಮಂಜು, ಸಚಿವ, ಕಾಂಗ್ರೆಸ್‌ ಅಭ್ಯರ್ಥಿ

ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಲೂಟಿ ಮಾಡಿದ್ದಾರೆ. ಹಣಬಲದ ಹಿಂದೆ ಮತದಾರರು ಹೋಗುವುದಿಲ್ಲ.
– ಎ.ಟಿ.ರಾಮಸ್ವಾಮಿ, ಜೆಡಿಎಸ್‌ ಅಭ್ಯರ್ಥಿ

ಕ್ಷೇತ್ರದ ಜನರು ಹೊಸ ಮುಖದ ಕಾತುರ ದಲ್ಲಿದ್ದಾರೆ. ನನ್ನ ಎದುರಾಳಿ ಗಳಾಗಿರುವವರು ಮೂರು ಬಾರಿ ಶಾಸಕರಾಗಿದ್ದಾರೆ. 
– ಎಚ್‌.ಯೋಗಾರಮೇಶ್‌, ಬಿಜೆಪಿ ಅಭ್ಯರ್ಥಿ

– ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.