ಅಮಿತ್‌ ಶಾ ಭರ್ಜರಿ ರೋಡ್‌ ಶೋ


Team Udayavani, Apr 30, 2018, 6:40 AM IST

Amit-Shah,-Davanagere.jpg

ತುಮಕೂರು/ದಾವಣಗೆರೆ: ಕರ್ನಾಟಕದಲ್ಲಿ ಶತಾಯ ಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಬಿಜೆಪಿ, ಭಾನುವಾರ ಬೆಣ್ಣೆನಗರಿ, ದಾವಣಗೆರೆ ಹಾಗೂ ಕಲ್ಪತರು ನಾಡು, ತುಮಕೂರಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ಭರ್ಜರಿ ರೋಡ್‌ ಶೋ ನಡೆಸಿತು.

ದಾವಣಗೆರೆಯಲ್ಲಿ ಅಮಿತ್‌ ಶಾ ಅವರು ಬಿರು ಬಿಸಿಲಿನಲ್ಲೂ ಕರ್ನಾಟಕ ನವ ನಿರ್ಮಾಣ ಯಾತ್ರೆಯ ರಥವೇರಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ್‌, ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಶವಂತರಾವ್‌ ಜಾಧವ್‌ ಪರ ಸುಮಾರು 2 ಕಿಲೋ ಮೀಟರ್‌ ಉದ್ದಕ್ಕೂ ಮತಯಾಚಿಸಿದರು. ವೀರಮದಕರಿ(ಹೊಂಡದ) ವೃತ್ತದಿಂದ ತೆರೆದ ಬಸ್‌ನಲ್ಲಿ ರೋಡ್‌ ಶೋ ಆರಂಭಿಸಿದ ಶಾಗೆ ಸಂಸದ ಜಿ.ಎಂ. ಸಿದ್ದೇಶ್ವರ್‌ ಸಾಥ್‌ ನೀಡಿದರು. ಹಿಂದೆ ಶಾ ಜನರತ್ತ ಕೈ ಬೀಸಿ ಬರುತ್ತಿದ್ದರೆ, ಮುಂದೆ ಡೊಳ್ಳು, ಡ್ರಂ ವಾದ್ಯಗಳು ಮೊಳಗುತ್ತಿದ್ದವು. ನಂದಿಕೋಲು ಗಮನ ಸೆಳೆಯಿತು. ರಸ್ತೆಯ ಅಕ್ಕಪಕ್ಕದ ಕಟ್ಟಡಗಳ ಮೇಲೆ ನಿಂತ ಜನರು ಹೂವಿನ ಮಳೆ ಸುರಿಸುವ ಮೂಲಕ ಅಮಿತ್‌ ಶಾಗೆ ಭರ್ಜರಿ ಸ್ವಾಗತ ಕೋರಿದರು.

ಬಳಿಕ, ಸಂಜೆ 4.30ಕ್ಕೆ ತುಮಕೂರಿಗೆ ಆಗಮಿಸಿದ ಶಾ, ನಗರದ ಮುಖ್ಯರಸ್ತೆಗಳಲ್ಲಿ ಸುಮಾರು 1.5 ಕಿ.ಮೀ ದೂರ ರೋಡ್‌ ಶೋ ನಡೆಸಿದರು. ಗ್ರಾಮಾಂತರ ಶಾಸಕ ಬಿ.ಸುರೇಶ್‌ ಗೌಡ ಸೇರಿ ಹಲವು ಮುಖಂಡರು ಸಾಥ್‌ ನೀಡಿದರು. ರೋಡ್‌ ಶೋ ನಂತರ ಶ್ರೀದೇವಿ ಕಾಲೇಜು ಸಭಾಂಗಣದಲ್ಲಿ ವಿಭಾಗೀಯ ಮಟ್ಟದ ಪ್ರಮುಖ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿತ್ತು. ಆದರೆ, ಸಭೆ ರದ್ದಾಯಿತು. ರ್ಯಾಲಿ ಮುಗಿದ ನಂತರ ಶಾ ನೇರವಾಗಿ ಬೆಂಗಳೂರಿಗೆ ತೆರಳಿದರು.

ಸೊಗಡು ಶಿವಣ್ಣ ಗೈರು :
ಬಿಜೆಪಿಯಿಂದ ಟಿಕೆಟ್‌ ವಂಚಿತರಾಗಿರುವ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ ತುಮಕೂರಿನ ರ್ಯಾಲಿಯಲ್ಲಿ ಭಾಗವಹಿಸಿರಲಿಲ್ಲ. ಆದರೆ ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡರಿಗೆ ಜೈಕಾರ ಹಾಕುವಾಗ ಶಿವಣ್ಣನವರಿಗೂ ಜೈಕಾರ ಹಾಕುತ್ತಿದ್ದುದು ಕಂಡು ಬಂತು.

ಶ್ರೀಶೈಲ ಶ್ರೀ ಭೇಟಿ ನಡೆಯಲೇ ಇಲ್ಲ!
ದಾವಣಗೆರೆ:
ಅಮಿತ್‌ ಶಾಗೆ ದಾವಣಗೆರೆಯಲ್ಲಿ ಮಠಾಧೀಶರ ಭೇಟಿ, ಆಶೀರ್ವಾದ ಪಡೆಯುವ ಭಾಗ್ಯ ಕೂಡಿ ಬರಲಿಲ್ಲ. ರೋಡ್‌ ಶೋ ಬಳಿಕ ಅಮಿತ್‌ ಶಾ ಅವರು ಇಲ್ಲಿನ ಹಳೆ ಪಿಬಿ ರಸ್ತೆಯಲ್ಲಿರುವ ಶ್ರೀಶೈಲ ಮಠದಲ್ಲಿ ಶ್ರೀಶೈಲ ಜಗದ್ಗುರು ಡಾ|ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವರು ಎಂಬುದಾಗಿ ಬಿಜೆಪಿ ಮೂಲಗಳು ತಿಳಿಸಿದ್ದವು. ಆದರೆ, ಅಮಿತ್‌ ಶಾ ಮತ್ತು ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ ಭೇಟಿ ನಡೆಯಲೇ ಇಲ್ಲ. ಶ್ರೀಶೈಲ ಜಗದ್ಗುರುಗಳು ಪೂರ್ವ ನಿರ್ಧರಿತ ಕಾರ್ಯಕ್ರಮದಂತೆ ಹರಪನಹಳ್ಳಿ ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಏರ್ಪಡಿಸಿದ್ದ ಶ್ರೀ ಮಂಜುನಾಥಸ್ವಾಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ನೂತನ ಶಿಲಾಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಮಿತ್‌ ಶಾ ಶ್ರೀಶೈಲ ಮಠಕ್ಕೆ ಬರುವ ಬಗ್ಗೆ, ಜಗದ್ಗುರುಗಳ ಭೇಟಿ ಮಾಡುವ ಬಗ್ಗೆ ಮಠದವರಿಗೆ ಮಾಹಿತಿ ಇರಲಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.