ಚಿಹ್ನೆ ಬದಲಾಗಿದ್ದಕ್ಕೆ ಬೇಸತ್ತು ಅಭ್ಯರ್ಥಿ ಆತ್ಮಹತ್ಯೆ ಯತ್ನ
Team Udayavani, May 1, 2018, 6:50 AM IST
ಹಾವೇರಿ: ಚುನಾವಣೆ ಚಿಹ್ನೆ ಬದಲಾಗಿದ್ದಕ್ಕೆ ಬೇಸರಗೊಂಡು ಅಭ್ಯರ್ಥಿಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯ ಹಿರೇಕೆರೂರಲ್ಲಿ ನಡೆದಿದೆ.
ಇಲ್ಲಿನ ಕೆಜೆಪಿ ಅಭ್ಯರ್ಥಿ ಹರೀಶ ಇಂಗಳಗೊಂಡಿ ಅವರಿಗೆ “ತೆಂಗಿನಕಾಯಿ’ ಬದಲಿಗೆ “ತೆಂಗಿನಮರದ’ ಚಿಹ್ನೆ ನೀಡಲಾಗಿತ್ತು. ಒಂದು ತಿಂಗಳಿಂದಲೂ ಇವರು “ತೆಂಗಿನಕಾಯಿ’ ಚಿಹ್ನೆಯನ್ನೇ ಪ್ರಚಾರ ಮಾಡಿದ್ದರು. ಈಗ ಏಕಾಏಕಿ ಚಿಹ್ನೆ ಬದಲಾಗಿದ್ದರಿಂದ ಕಂಗಾಲಾಗಿ ನಗರದ ಕೆಜೆಪಿ ಕಚೇರಿಯಲ್ಲಿ ಎಂಟಕ್ಕೂ ಹೆಚ್ಚು ಮಾತ್ರೆಗಳನ್ನು ಸೇವಿಸಿದ್ದಾರೆ. ತಕ್ಷಣ ಸ್ನೇಹಿತರು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಜೀವ ಉಳಿಸಿದ್ದಾರೆ.
ಕೆಜೆಪಿ ಅಭ್ಯರ್ಥಿಗಳಿಗೆ ದಿಢೀರ್ ಆಗಿ “ತೆಂಗಿನಕಾಯಿ’ ಚಿಹ್ನೆ ಬದಲಾಗಿ ಬೇರೆ ಚಿಹ್ನೆ ನೀಡಲಾಗಿದೆ. ಚಿಹ್ನೆ ಕೈ ತಪ್ಪುವಲ್ಲಿ ರಾಷ್ಟ್ರೀಯ ಪಕ್ಷಗಳ ಕುತಂತ್ರ ಇರುವ ಸಂಶಯವಿದೆ ಎಂದು ಹಾವೇರಿ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಬಸವರಾಜ ಟೀಕಿಹಳ್ಳಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ
ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ
LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ