ಆರ್‌ಎಸ್‌ಎಸ್‌ ನಾಯಕರ ಜತೆ ಶಾ ಸಮಾಲೋಚನೆ


Team Udayavani, May 1, 2018, 6:25 AM IST

Amit-Shah-800-A.jpg

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೋಮವಾರ ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ, ಟಿಕೆಟ್‌ ಹಂಚಿಕೆಯಲ್ಲಿನ ಲೋಪ ಹಾಗೂ ಕಳಂಕಿತರಿಗೆ ಮಣೆ ಹಾಕಿರುವುದರ ಬಗ್ಗೆ ಅಸಮಾಧಾನ ಹೊಂದಿದ್ದ ಆರ್‌ಎಸ್‌ಎಸ್‌ ನಾಯಕರನ್ನು ಸಮಾಧಾನಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್‌ ನಿಗದಿಪಡಿಸಿದ್ದ ಮಾನದಂಡದಡಿ ಟಿಕೆಟ್‌ ನೀಡದಿರುವುದು. ಪಕ್ಷದ ನಿಷ್ಠಾವಂತರು, ಯುವಕರು ಹಾಗೂ ಮಹಿಳೆಯರಿಗೆ ಹೆಚ್ಚಿನ ಟಿಕೆಟ್‌ ನೀಡದಿರುವುದು. ಕಳಂಕಿತರಿಗೆ ಮತ್ತೆ ಅವಕಾಶ ಕೊಟ್ಟಿರುವುದರಿಂದ 40 ಕ್ಷೇತ್ರಗಳಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದ ಆರ್‌ಎಸ್‌ಎಸ್‌ ತಳಮಟ್ಟದ ಕಾರ್ಯಕರ್ತರು ಬೇಸರಗೊಂಡು ತಟಸ್ಥರಾಗಿದ್ದರು. ಹೀಗಾಗಿ,  ಶಾ ನಗರದಲ್ಲಿರುವ ಆರ್‌ಎಸ್‌ಎಸ್‌ ಕಚೇರಿ “ಕೇಶವ ಕೃಪ’ಗೆ ಭೇಟಿ ನೀಡಿ ಮುಖಂಡರಾದ ವಿ.ನಾಗರಾಜ್‌, ಮುಕುಂದ್‌ ಅವರ ಜತೆ ಚರ್ಚಿಸಿದರು ಎಂದು ಹೇಳಲಾಗಿದೆ.

ಮುಂದೆ ತಪ್ಪು ಸರಿಪಡಿಸಲಾಗುವುದು. ಸರ್ಕಾರ ಬಂದರೆ ಮತ್ತೆ ತಪ್ಪುಗಳಾಗದಂತೆ ಎಚ್ಚರವಹಿಸಲಾಗುವುದು ಎಂದು ಆರ್‌ಎಸ್‌ಎಸ್‌ ನಾಯಕರಿಗೆ ಭರವಸೆ ನೀಡಿದರು ಎನ್ನಲಾಗಿದೆ.ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್‌ ಉಪಸ್ಥಿತರಿದ್ದರು.

ಸಮಾಲೋಚನೆ: ಇದಕ್ಕೂ ಮುನ್ನ  ಶಾ ಬೆಂಗಳೂರಿನ ನಿವಾಸದಲ್ಲಿ ಕೇಂದ್ರ ಸಚಿವ ಅನಂತಕುಮಾರ್‌, ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌, ರಾಜ್ಯ ಉಸ್ತುವಾರಿ ಮುರಳೀಧರ್‌ರಾವ್‌, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್‌ ಜತೆ ಚುನಾವಣಾ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಿದರು.

ಅತೃಪ್ತಿ: ರಾಜ್ಯ ಬಿಜೆಪಿ ನಾಯಕರ ಕಾರ್ಯವೈಖರಿ ಬಗ್ಗೆಯೂ ಆರ್‌ಎಸ್‌ಎಸ್‌ ನಾಯಕರು  ಶಾ ಬಳಿ ಅತೃಪ್ತಿ ವ್ಯಕ್ತಪಡಿಸಿದ್ದು, ಸಾಮೂಹಿಕ ನಾಯಕತ್ವದಡಿ ಸಮನ್ವಯತೆಯಿಂದ ಕೆಲಸ ಮಾಡುತ್ತಿಲ್ಲ. ಹೊಂದಾಣಿಕೆ ರಾಜಕಾರಣದಿಂದ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ನಿರೀಕ್ಷಿತ ಸೀಟು ಬರುವುದು ಅನುಮಾನ ಎಂದು ಹೇಳಿದರು ಎನ್ನಲಾಗಿದೆ.

ಇಂದು ಶೃಂಗೇರಿಗೆ ಶಾ: ಅಮಿತ್‌ ಶಾ ಅವರು ಮಂಗಳವಾರ ಶೃಂಗೇರಿಗೆ ಭೇಟಿ ನೀಡಲಿದ್ದು ಶೃಂಗೇರಿ ಜಗದ್ಗುರುಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಸಾರ್ವಜನಿಕ ಸಭೆ ಮುಗಿಸಿ ಸಂಜೆ ಬಾಳೆ ಹೊನ್ನೂರು ಮಠದ ಶ್ರೀ ರಂಭಾಪುರಿ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಅಲ್ಲೇ ಭೋಜನ ಸ್ವೀಕರಿಸಲಿದ್ದಾರೆ.  ಮೂಡಿಗೆರೆಯಲ್ಲಿ ಕಾಫಿ ಬೆಳೆಗಾರರೊಂದಿಗೆ ಸಂವಾದ ಸಹ ನಡೆಸುವರು.

ಪ್ರಣಾಳಿಕೆ ಮೇ 4?
ಪ್ರಣಾಳಿಕೆ ಮೂಲಕ ಭರ್ಜರಿ ಘೋಷಣೆಗಳನ್ನು ಮಾಡಲು ಬಿಜೆಪಿ ಸಿದ್ಧತೆ ನಡೆಸಿದ್ದು, 1 ಲಕ್ಷ ರೂ. ವರೆಗಿನ ರೈತರ ಸಾಲ ಮನ್ನಾ, ಮೂಲಸೌಕರ್ಯ ಅಭಿವೃದ್ಧಿಯ ಹೊಸ ಯೋಜನೆಗಳನ್ನು  ಘೋಷಿಸಲು ಮುಂದಾಗಿದೆ. ಮೇ 2 ರಂದು ಪ್ರಣಾಳಿಕೆ ಬಿಡುಗಡೆಗೆ ನಿರ್ಧರಿಸಲಾಗಿತ್ತಾದರೂ ಇದೀಗ ಮೇ 4 ರಂದು ಬಿಡುಗಡೆಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.