ಎಂಇಎಸ್ ಅಭ್ಯರ್ಥಿಗೆ ಮರಾಠಿಗರಿಂದ ತರಾಟೆ
Team Udayavani, May 3, 2018, 7:40 AM IST
ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಮತ ಯಾಚಿಸಲು ಬಂದ ಮಹಾರಾಷ್ಟ್ರ ಏಕೀಕರಣ ಸಮಿತಿ ಅಭ್ಯರ್ಥಿಯನ್ನು ಮರಾಠಿ ಭಾಷಿಕರೇ ತರಾಟೆಗೆ ತೆಗೆದುಕೊಂಡು ವಾಪಸ್ ಕಳುಹಿಸಿದ ಘಟನೆ ಬುಧವಾರ ನಡೆದಿದೆ.
ಉತ್ತರ ಕ್ಷೇತ್ರದ ಶಿವಾಜಿ ನಗರದಲ್ಲಿ ಬುಧವಾರ ಮಧ್ಯಾಹ್ನ ಮತ ಕೇಳಲು ಬಂದ ಎಂಇಎಸ್ ಅಭ್ಯರ್ಥಿ ಬಾಳಾ ಸಾಹೇಬ ಕಾಕತಕರಗೆ ಭಾರೀ ಮುಖ ಭಂಗವಾಗಿದೆ. ಮರಾಠಿ ಭಾಷಿಕರೇ ಹೆಚ್ಚಾಗಿ ಇರುವ ಶಿವಾಜಿ ನಗರಕ್ಕೆ ಬಂದ ಅಭ್ಯರ್ಥಿಯನ್ನು ಜನ ತಡೆದು ಪ್ರಚಾರಕ್ಕೆ ಬರದಂತೆ ತರಾಟೆಗೆ ತೆಗೆದುಕೊಂಡು ಅಲ್ಲಿಂದ ಚಲೇಜಾವ್, ಚಲೇಜಾವ್ ಎಂದು ಘೋಷಣೆ ಕೂಗಿ ವಾಪಸ್ ಕಳುಹಿಸಿದರು.
ಎಂಇಎಸ್ ಅಭ್ಯರ್ಥಿ ಎಂದು ಗಡಿ ವಿಷಯ ತೆಗೆದುಕೊಂಡು ಬಂದು ಜನ ರನ್ನು ಮೂರ್ಖರನ್ನಾಗಿ ಮಾಡುತ್ತಿದ್ದೀರಿ. ಬೆಳಗಾವಿ ನಗರದಲ್ಲಿ ಹಿಂದೂ-ಮುಸ್ಲಿಂ ಗಲಭೆ ನಡೆದಾಗ ನೀವು ಮಲಗಿಕೊಂಡಿ ದ್ದೀರಾ? ಆ ಶಾಸಕ ಸಂಭಾಜಿ ಪಾಟೀಲ ಒಂದು ಸಲವೂ ಹಿಂದೂ ಯುವಕರ ಪರ ಬಂದು ನಿಂತಿಲ್ಲ. ಈಗ ಓಟ್ ಕೇಳ್ಳೋಕೆ ಬಂದಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.
ಬೆಳಗಾವಿಯ ಶಿವಾಜಿ ನಗರಕ್ಕೆ ಮತಯಾಚಿಸಲು ಬಂದ ಎಂಇಎಸ್ ಅಭ್ಯರ್ಥಿಯನ್ನು ಮರಾಠಿ ಭಾಷಿಕರು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ