ಪ್ರಚಾರಕ್ಕೆ ಕಾಂಗ್ರೆಸ್, ಬಿಜೆಪಿಯಿಂದ ಮಕ್ಕಳ ಬಳಕೆ
Team Udayavani, May 4, 2018, 7:20 AM IST
ಹನುಮಸಾಗರ: ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪೈಪೋಟಿಗೆ ಬಿದ್ದು ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಹನುಮಸಾಗರದಲ್ಲಿ ಗುರುವಾರ ಕಂಡು ಬಂತು.
ಎರಡೂ ಪಕ್ಷಗಳು ಮನೆಮನೆಗೆ ತೆರಳಿ ಬಿರುಸಿನ ಪ್ರಚಾರ ಕೈಗೊಂಡಿದ್ದು, ಬಿಸಿಲಿನ ಹೊಡೆತಕ್ಕೆ ದೊಡ್ಡವರು, ಕೂಲಿ ಕಾರ್ಮಿಕರು ಸಿಗದ ಕಾರಣ ಮಕ್ಕಳನ್ನು ಪೋಸ್ಟರ್, ಪಾಂಪ್ಲೆಂಟ್ ಹಂಚುವುದು, ಬ್ಯಾನರ್ ಕಟ್ಟಲು, ಮನೆಮನೆಗೆ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂತು.
ಗ್ರಾಮದಲ್ಲಿ 40 ಡಿಗ್ರಿಯಷ್ಟು ಬಿಸಿಲಿದೆ. ಇದರಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಬೆಳಗ್ಗೆ 6ಕ್ಕೆ ಪ್ರಚಾರ ಕೈಗೊಂಡು 11 ಗಂಟೆಯಾಗುವಷ್ಟರಲ್ಲಿ ಬಿಸಿಲಿನ ಝಳಕ್ಕೆ ಸುಸ್ತಾಗುತ್ತಿದ್ದಾರೆ. ಕಾರ್ಯಕರ್ತರು ಬಿಸಿಲಿಗೆ ಬೆದರಿ ಪ್ರಚಾರದಲ್ಲಿ ಅಷ್ಟಕ್ಕಷ್ಟೆ ಎಂಬಂತಾಗಿದೆ. ಹೀಗಾಗಿ ಮಕ್ಕಳನ್ನು ಕಡಿಮೆ ಕೂಲಿಗೆ ಕರೆದುಕೊಂಡು ತಾವು ಮಾಡುವ ಕೆಲಸವನ್ನು ಮಕ್ಕಳಿಂದ ಮಾಡಿಸುತ್ತಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್