ಬಂಡಾಯ ಲಾಭದ ಗೆಲುವಿನ ಲೆಕ್ಕಾಚಾರ 


Team Udayavani, May 6, 2018, 6:25 AM IST

Belgaum-rural-assembly-cons.jpg

ಪುರುಷ ಪ್ರಧಾನ ಕ್ಷೇತ್ರದಲ್ಲಿ ಮಹಿಳೆಯ ಫೈಟ್‌. ಅದೂ ಅಂತಿಂಥ ಫೈಟ್‌ ಅಲ್ಲ. ಕುತೂಹಲ ಕೆರಳಿಸುವ ಸೆಣಸಾಟ. ಇದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಈ ಬಾರಿಯ ವಿಶೇಷ.

ರಾಜ್ಯದ ಜಿದ್ದಾಜಿದ್ದಿನ ಕ್ಷೇತ್ರದಲ್ಲಿ ಇದೂ ಸಹ ಪ್ರಮುಖವಾದದ್ದು. ಇಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪೈಪೋಟಿ ಒಂದು ಕಡೆಯಾದರೆ ಇನ್ನೊಂದು ಕಡೆ ಸ್ವತಃ ಕಾಂಗ್ರೆಸ್‌ನ ಒಂದು ಗುಂಪು ಹೆಬ್ಟಾಳಕರ ಅವರನ್ನು ಸೋಲಿಸಲು ತಂತ್ರ ಹೂಡಿದೆ. ಇದೇ ಕಾರಣದಿಂದ ಇದು ಈ ಬಾರಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಎಲ್ಲಕ್ಕಿಂತ ಈ ಕ್ಷೇತ್ರದಲ್ಲಿ ಹೆಚ್ಚು ಸುದ್ದಿ ಮಾಡಿದ್ದು ಕಾಣಿಕೆಗಳ ಭರಾಟೆ. ಕಳೆದ ಒಂದು ವರ್ಷದಿಂದ ಮತದಾರರಿಗೆ ಕಾಣಿಕೆಗಳ ವಿತರಣೆ ನಡೆದೇ ಇದೆ. ಟೀ ಶರ್ಟ್‌, ಸೀರೆಯಿಂದ ಆರಂಭವಾದ ಕಾಣಿಕೆ ಸಂಸ್ಕೃತಿ ಕೊನೆಗೆ ಗ್ಯಾಸ್‌ಸ್ಟೌವ್‌ವರೆಗೆ ಬಂದಿತು. 

ಬಿಜೆಪಿ ಹಾಗೂ ಜೆಡಿಎಸ್‌ಗೆ ನೇರವಾಗಿ ಸೆಡ್ಡು ಹೊಡೆದಿರುವ ಕಾಂಗ್ರೆಸ್‌ ಅಭ್ಯರ್ಥಿ ಹೆಬ್ಟಾಳಕರ ಈ ಕ್ಷೇತ್ರದ ಸ್ಟಾರ್‌ ಅಭ್ಯರ್ಥಿ. ಇವರಿಗೆ ಬಿಜೆಪಿಯಿಂದ ಹಾಲಿ ಶಾಸಕ ಸಂಜಯ ಪಾಟೀಲ ಹಾಗೂ ಜೆಡಿಎಸ್‌ನಿಂದ ಶಿವನಗೌಡ ಪಾಟೀಲ ಪ್ರತಿಸ್ಪರ್ಧಿಗಳು. ಕಳೆದ ಚುನಾವಣೆಯ ಕಾದಾಟವೇ ಮತ್ತೆ ಮರುಕಳಿಸಿದ್ದು, ಜೆಡಿಎಸ್‌ ಇದಕ್ಕೆ ಸೇರ್ಪಡೆಯಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌,ಬಿಜೆಪಿ, ಜೆಡಿಎಸ್‌ ಹಾಗೂ ಎಂಇಎಸ್‌ ಮಧ್ಯೆ ಪೈಪೋಟಿಯಿದೆ. ಶಾಸಕರಾಗಲು ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಲಕ್ಷ್ಮೀ ಹೆಬ್ಟಾಳಕರ ಕಳೆದ ಐದು ವರ್ಷಗಳಿಂದ ಇದಕ್ಕಾಗಿ ನಿರಂತರ ತಾಲೀಮು ನಡೆಸಿದ್ದಾರೆ. ಅಧಿಕಾರ ಇರದಿದ್ದರೂ ಸರಕಾರದಲ್ಲಿ ತಮ್ಮ ಪ್ರಭಾವ ಬಳಸಿ ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿರುವುದು ಅವರ ಸಾಮರ್ಥ್ಯಕ್ಕೆ ಸಾಕ್ಷಿ.

ಲಕ್ಷ್ಮೀ ಹೆಬ್ಟಾಳಕರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದವರ ಕುತಂತ್ರದಿಂದ ಗೆಲ್ಲುವ ಅವಕಾಶ ಕಳೆದುಕೊಂಡರು. ಬಂಡಾಯ ಕಾಂಗ್ರೆಸ್‌ ಅಭ್ಯರ್ಥಿಯಿಂದ ಹೆಬ್ಟಾಳಕರ ಸೋತರು. ನಂತರ ನಡೆದ ಲೋಕಸಭೆ ಚುನಾವಣೆಯಲ್ಲೂ ಅವರಿಗೆ ಅದೃಷ್ಟ
ಒಲಿಯಲಿಲ್ಲ. ಈಗ ಮತ್ತೆ ತಮ್ಮ ಪ್ರತಿಷ್ಠೆ ಹಾಗೂ ಸಾಮರ್ಥ್ಯ ಪಣಕ್ಕಿಟ್ಟಿದ್ದಾರೆ.

ಇಬ್ಬರ ಜಗಳ ಮೂರನೆಯವರಿಗೆ ಲಾಭ ಎನ್ನುವಂತೆ ಕಳೆದ ಬಾರಿ ಸಾಕಷ್ಟು ಆತಂಕ ಎದುರಿಸಿ ಕೊನೆಗೆ ಜಯಗಳಿಸುವಲ್ಲಿ
ಯಶಸ್ವಿಯಾದ ಸಂಜಯ ಪಾಟೀಲ ಈಗ ಮತ್ತೆ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಳೆದ ಸಲದಂತೆ ಕಾಂಗ್ರೆಸ್‌ನ ಒಳಜಗಳದ ಲಾಭ ತಮಗೆ ವರವಾಗಬಹುದು ಎಂಬ ವಿಶ್ವಾಸದಲ್ಲಿದ್ದಾರೆ. ಚುನಾವಣೆಗೆ ಮೊದಲು ಕಾಂಗ್ರೆಸ್‌ನಲ್ಲಿದ್ದ ಶಿವನಗೌಡ ಪಾಟೀಲ ಅವರು ಅಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂಬುದು ಖಾತ್ರಿಯಾದ ನಂತರ ಜೆಡಿಎಸ್‌ಗೆ ಜಿಗಿದರು. ಸತೀಶ ಜಾರಕಿಹೊಳಿಗೆ ಆಪ್ತರಾಗಿರುವುದರಿಂದ ಅವರೇ ಜೆಡಿಎಸ್‌ ಟಿಕೆಟ್‌ ಕೊಡಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ತಾವು ಗೆಲ್ಲಲಾಗದಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸುವುದು ಇವರ ಮುಖ್ಯ ಗುರಿ.

ನಿರ್ಣಾಯಕ ಅಂಶವೇನು? ಬೆಳಗಾವಿ ಗ್ರಾಮೀಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸಲೇಬೇಕೆಂಬ ರಾಜಕೀಯದ ಆಟ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಭಾಷಿಕ ಅಭ್ಯರ್ಥಿಗಳನ್ನು ನಿಲ್ಲಿಸಿ ಕಾಂಗ್ರೆಸ್‌ ಪರವಾಗಿರುವ ಮರಾಠಿ ಭಾಷಿಕ ಮತಗಳನ್ನು ಸೆಳೆಯುವುದು ಈ ರಾಜಕೀಯ ಲೆಕ್ಕಾಚಾರದ ಒಂದು ಭಾಗ. ಇದು ತಮಗೆ ಟರ್ನಿಂಗ್‌ ಪಾಯಿಂಟ್‌ ಆಗಬಹುದು ಎಂಬುದು ಬಿಜೆಪಿ ಹಾಗೂ ಎಂಇಎಸ್‌ ಲೆಕ್ಕಾಚಾರ. ಆದರೆ ಈ ಲೆಕ್ಕಾಚಾರ ಬುಡಮೇಲು ಮಾಡಲು ಕಾಂಗ್ರೆಸ್‌ ಅಭ್ಯರ್ಥಿ ತಮ್ಮದೇ ಆದ ತಂತ್ರಗಾರಿಕೆ ಹೆಣೆಸಿದ್ದಾರೆ ಎಂಬುದು ಅವರ ಬೆಂಬಲಿಗರ ವಿಶ್ವಾಸ. ಇದೇ ವೇಳೆ ಎಂಇಎಸ್‌ನಲ್ಲಿ ಭಿನ್ನಮತ ಬಂದಿರುವುದರಿಂದ ಅದರ ಅನುಕೂಲ ತಮಗೆ ಆಗಲಿದೆ ಎಂಬುದು ಹೆಬ್ಟಾಳಕರ ನಂಬಿಕೆ.

ನನ್ನ ಕ್ಷೇತ್ರದಿಂದ ಕೊರತೆ ಇದೆ ಎಂಬ ಮಾತು ಬರಬಾರದು. ಸಮಗ್ರ ಅಭಿವೃದಿಟಛಿ ಮಾಡಬೇಕು ಎಂಬುದು ನನ್ನ ಮೊದಲ ಗುರಿ. ಅಧಿಕಾರ ಇಲ್ಲದಿದ್ದರೂ ಸರಕಾರದಿಂದ ಕೆರೆ ತುಂಬಿಸುವುದು ಸೇರಿ ಅನೇಕ ಯೋಜನೆಗಳನ್ನು ತಂದಿದ್ದೇನೆ.
– ಲಕ್ಷ್ಮೀ ಹೆಬ್ಟಾಳಕರ ಕಾಂಗ್ರೆಸ್‌ ಅಭ್ಯರ್ಥಿ

ಐದು ವರ್ಷಗಳಲ್ಲಿ ನಾನು ಮಾಡಿದ ಕೆಲಸಗಳನ್ನು ಜನರು ನೋಡಿದ್ದಾರೆ.ಹೀಗಾಗಿ ಈ ಬಾರಿಯೂ ನನ್ನ ಗೆಲುವಿಗೆ ಯಾವುದೇ ಸಮಸ್ಯೆಯಿಲ್ಲ. ನಮ್ಮ ಸರ್ಕಾರ ಇರದ ಕಾರಣ ಸಾಕಷ್ಟು ಅನುದಾನ ಮಂಜೂರು ಆಗಲಿಲ್ಲ. ಈ ನಿರಾಸೆ ನನಗಿದೆ.
– ಸಂಜಯ ಪಾಟೀಲ ಬಿಜೆಪಿ ಅಭ್ಯರ್ಥಿ

ಜಯದ ವಿಶ್ವಾಸ ಇದೆ.ಈಗಾಗಲೇ ಒಂದು ಹಂತದ ಪ್ರಚಾರ ಮುಗಿಸಿದ್ದೇನೆ. ಜನರೂ ಬದಲಾವಣೆ ಬಯಸಿದ್ದಾರೆ. ಇದರ ಜತೆಗೆ ಬಿಎಸ್‌ಪಿ ಬೆಂಬಲ ಸಹ ಸಿಕ್ಕಿರುವುದು ಇನ್ನಷ್ಟು ಶಕ್ತಿ ನೀಡಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಸೋಲಿಸುವುದು ನನ್ನ ಮುಖ್ಯ ಗುರಿ.
– ಶಿವನಗೌಡ ಪಾಟೀಲ ಜೆಡಿಎಸ್‌ ಅಭ್ಯರ್ಥಿ

– ಕೇಶವ ಆದಿ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.