ದಲಿತ ಸಿಎಂ ವಿಚಾರ: ಖರ್ಗೆ ಸಭೆ ಅರ್ಧಕ್ಕೆ ಮೊಟಕು​​​​​​​


Team Udayavani, May 7, 2018, 6:25 AM IST

Ban07051806.jpg

ಮೈಸೂರು: ದಲಿತ ಮುಖ್ಯಮಂತ್ರಿ ವಿಚಾರವಾಗಿ ಆಕ್ರೋಶ ವ್ಯಕ್ತವಾದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಾಗಮಿಸಿದ್ದ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಚಾರ ಅರ್ಧಕ್ಕೆ ಮೊಟಕುಗೊಳಿಸಿದ ಪ್ರಸಂಗ ನಗರದ ಅಶೋಕಪುರಂನಲ್ಲಿ ನಡೆಯಿತು.

ಪ್ರಚಾರಕ್ಕೆಂದು ನಗರಕ್ಕಾಗಮಿಸಿದ್ದ ಖರ್ಗೆ ರೋಡ್‌ ಶೋ ಆರಂಭಿಸುವ ವೇಳೆ ಸ್ಥಳದಲ್ಲಿದ್ದ ಹಲವರು ಮುಂದಿನ ಸಿಎಂ ಖರ್ಗೆ ಎಂದು ಘೋಷಣೆ ಕೂಗಲಾರಂಭಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಖರ್ಗೆ, ಘೋಷಣೆ ಕೂಗುವ ಸಂದರ್ಭ ಕೂಗಬೇಕಾಗಿತ್ತು. ಈಗ ಕೂಗಿ ಏನು ಪ್ರಯೋಜನ ಎಂದು ಹೇಳಿದರು.

ನಿಲ್ಲದ ದಲಿತ ಸಿಎಂ ಕೂಗು: ಅಶೋಕಪುರಂನಲ್ಲಿ ರೋಡ್‌ ಶೋ ನಡೆಸುತ್ತಿದ್ದಾಗ ಎದುರಾದ ಯುವಕರ ಗುಂಪೊಂದು ಈ ಬಾರಿ ದಲಿತರಿಗೆ ಸಿಎಂ ಸ್ಥಾನ ದೊರೆಯುತ್ತದೆಯೇ? ಶ್ರೀನಿವಾಸ ಪ್ರಸಾದ್‌ ಅವರನ್ನು ಸಂಪುಟದಿಂದ ಕೈ ಬಿಟ್ಟಿದ್ದು ಸರಿಯೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.

ಆದರೆ ಯುವಕರ ಪ್ರಶ್ನೆಗಳಿಗೆ ಯಾವುದೇ ಉತ್ತರ ನೀಡದ ಖರ್ಗೆ ರೋಡ್‌ ಶೋ ಮುಂದುವರಿಸಿದರು. ಬಳಿಕ ಸಿಲ್ಕ್ ಫ್ಯಾಕ್ಟರಿ ವೃತ್ತದಲ್ಲಿ ರೋಡ್‌ ಶೋ ಮುಕ್ತಾಯಗೊಂಡ ಸಂದರ್ಭ ಸಾರ್ವಜನಿಕ ಭಾಷಣ ನಡೆಸಲು ಖರ್ಗೆ ಮುಂದಾದ ವೇಳೆ ಕೆಲವರು ಅವರ ಮಾತಿಗೆ ಅಡ್ಡಿಪಡಿಸಿದರು. ಅಲ್ಲದೆ ಈ ಬಾರಿ ದಲಿತರು ಮುಖ್ಯಮಂತ್ರಿ ಆಗುತ್ತಾರಾ?ನೀವು ಸಿಎಂ ಆಗುತ್ತೀರಾ ಎಂಬುದನ್ನು ಮೊದಲು ಸ್ಪಷ್ಟಪಡಿಸಿ? ಶ್ರೀನಿವಾಸ ಪ್ರಸಾದ್‌ರನ್ನು ಸಂಪುಟದಿಂದ ವಜಾ ಮಾಡಿದ್ದು ಸರಿಯೇ?, ಕಳೆದ ಬಾರಿ ಪರಮೇಶ್ವರ್‌ ಅವರನ್ನು ಸೋಲಿಸಲಾಯಿತು. ಇಲ್ಲಿ ನಾವು ಕುರುಬ ಸಮುದಾಯದವರನ್ನು ಗೆಲ್ಲಿಸಬೇಕೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.

ಈ ವೇಳೆ ಮಾತನಾಡಿದ ಖರ್ಗೆ, ದಲಿತ ಸಿಎಂ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಿಸಲಿದೆ.ಆದರೆ ದಲಿತರ ಅಭಿವೃದಿಟಛಿಗೆ ಕಾಂಗ್ರೆಸ್‌ ನೀಡಿರುವ ಯೋಜನೆ, ಕೊಡುಗೆಗಳನ್ನು ಮರೆಯಬಾರದು ಎಂದರು.

ಈ ಸಂದರ್ಭದಲ್ಲೂ ದಲಿತ ಸಿಎಂ ವಿಚಾರವಾಗಿ ಖರ್ಗೆ ಅವರಿಂದ ಸ್ಪಷ್ಟ ಉತ್ತರ ಸಿಗದಿದ್ದಾಗ, ನೀವು ಉತ್ತರಿಸದಿದ್ದಲ್ಲಿ, ಬೇರೆ ಪಕ್ಷಕ್ಕೆ ಮತ ನೀಡುವುದಾಗಿ ಎಚ್ಚರಿಸಿದರು.

ಯಾರಿಗಾದರೂ ಹಾಕಿ: ಚುನಾವಣೆಯಲ್ಲಿ ನೀವು ಯಾರಿಗೆ ಬೇಕಾದರೂ ಮತ ಹಾಕಬಹುದಾಗಿದ್ದು,ಅಂಬೇಡ್ಕರ್‌ ನಿಮಗೆ ಅಂತಹ ಅಧಿಕಾರ ನೀಡಿದ್ದಾರೆ. ಆದರೆ ದೇಶದಲ್ಲಿಂದು ಕೋಮುವಾದ ಮತ್ತು ಜಾತ್ಯತೀತವಾದದ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ. ಯೋಚಿಸಿ ಮತ ಚಲಾಯಿಸದಿದ್ದರೆ ಮುಂದೆ ನಿಮಗೆ ನಷ್ಟವಾಗಲಿದೆ ಎಂದು ಖರ್ಗೆ ಹೇಳಿದರು. ಇದರಿಂದ ಸಮಾಧಾನ ಗೊಳ್ಳದ ಜನರು, ಮತ್ತೂಮ್ಮೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದರು.

ಇದರಿಂದ ಅಸಮಾಧಾನಗೊಂಡ ಖರ್ಗೆ, ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದರು. ಈ ಹಂತದಲ್ಲೂ ಖರ್ಗೆ ಅವರನ್ನು ಅಡ್ಡಗಟ್ಟಿದ ಸ್ಥಳೀಯರು, ದಲಿತ ಸಿಎಂ ವಿಚಾರವಾಗಿ ಸರಿಯಾದ ಉತ್ತರ ನೀಡಬೇಕಿದ್ದು, ಇಲ್ಲದಿದ್ದರೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುತ್ತೇವೆಂದು ಎಚ್ಚರಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.