ದಲಿತ ಸಿಎಂ ವಿಚಾರ: ಖರ್ಗೆ ಸಭೆ ಅರ್ಧಕ್ಕೆ ಮೊಟಕು​​​​​​​


Team Udayavani, May 7, 2018, 6:25 AM IST

Ban07051806.jpg

ಮೈಸೂರು: ದಲಿತ ಮುಖ್ಯಮಂತ್ರಿ ವಿಚಾರವಾಗಿ ಆಕ್ರೋಶ ವ್ಯಕ್ತವಾದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಾಗಮಿಸಿದ್ದ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಚಾರ ಅರ್ಧಕ್ಕೆ ಮೊಟಕುಗೊಳಿಸಿದ ಪ್ರಸಂಗ ನಗರದ ಅಶೋಕಪುರಂನಲ್ಲಿ ನಡೆಯಿತು.

ಪ್ರಚಾರಕ್ಕೆಂದು ನಗರಕ್ಕಾಗಮಿಸಿದ್ದ ಖರ್ಗೆ ರೋಡ್‌ ಶೋ ಆರಂಭಿಸುವ ವೇಳೆ ಸ್ಥಳದಲ್ಲಿದ್ದ ಹಲವರು ಮುಂದಿನ ಸಿಎಂ ಖರ್ಗೆ ಎಂದು ಘೋಷಣೆ ಕೂಗಲಾರಂಭಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಖರ್ಗೆ, ಘೋಷಣೆ ಕೂಗುವ ಸಂದರ್ಭ ಕೂಗಬೇಕಾಗಿತ್ತು. ಈಗ ಕೂಗಿ ಏನು ಪ್ರಯೋಜನ ಎಂದು ಹೇಳಿದರು.

ನಿಲ್ಲದ ದಲಿತ ಸಿಎಂ ಕೂಗು: ಅಶೋಕಪುರಂನಲ್ಲಿ ರೋಡ್‌ ಶೋ ನಡೆಸುತ್ತಿದ್ದಾಗ ಎದುರಾದ ಯುವಕರ ಗುಂಪೊಂದು ಈ ಬಾರಿ ದಲಿತರಿಗೆ ಸಿಎಂ ಸ್ಥಾನ ದೊರೆಯುತ್ತದೆಯೇ? ಶ್ರೀನಿವಾಸ ಪ್ರಸಾದ್‌ ಅವರನ್ನು ಸಂಪುಟದಿಂದ ಕೈ ಬಿಟ್ಟಿದ್ದು ಸರಿಯೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.

ಆದರೆ ಯುವಕರ ಪ್ರಶ್ನೆಗಳಿಗೆ ಯಾವುದೇ ಉತ್ತರ ನೀಡದ ಖರ್ಗೆ ರೋಡ್‌ ಶೋ ಮುಂದುವರಿಸಿದರು. ಬಳಿಕ ಸಿಲ್ಕ್ ಫ್ಯಾಕ್ಟರಿ ವೃತ್ತದಲ್ಲಿ ರೋಡ್‌ ಶೋ ಮುಕ್ತಾಯಗೊಂಡ ಸಂದರ್ಭ ಸಾರ್ವಜನಿಕ ಭಾಷಣ ನಡೆಸಲು ಖರ್ಗೆ ಮುಂದಾದ ವೇಳೆ ಕೆಲವರು ಅವರ ಮಾತಿಗೆ ಅಡ್ಡಿಪಡಿಸಿದರು. ಅಲ್ಲದೆ ಈ ಬಾರಿ ದಲಿತರು ಮುಖ್ಯಮಂತ್ರಿ ಆಗುತ್ತಾರಾ?ನೀವು ಸಿಎಂ ಆಗುತ್ತೀರಾ ಎಂಬುದನ್ನು ಮೊದಲು ಸ್ಪಷ್ಟಪಡಿಸಿ? ಶ್ರೀನಿವಾಸ ಪ್ರಸಾದ್‌ರನ್ನು ಸಂಪುಟದಿಂದ ವಜಾ ಮಾಡಿದ್ದು ಸರಿಯೇ?, ಕಳೆದ ಬಾರಿ ಪರಮೇಶ್ವರ್‌ ಅವರನ್ನು ಸೋಲಿಸಲಾಯಿತು. ಇಲ್ಲಿ ನಾವು ಕುರುಬ ಸಮುದಾಯದವರನ್ನು ಗೆಲ್ಲಿಸಬೇಕೇ ಎಂಬ ಪ್ರಶ್ನೆಗಳನ್ನು ಮುಂದಿಟ್ಟರು.

ಈ ವೇಳೆ ಮಾತನಾಡಿದ ಖರ್ಗೆ, ದಲಿತ ಸಿಎಂ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಿಸಲಿದೆ.ಆದರೆ ದಲಿತರ ಅಭಿವೃದಿಟಛಿಗೆ ಕಾಂಗ್ರೆಸ್‌ ನೀಡಿರುವ ಯೋಜನೆ, ಕೊಡುಗೆಗಳನ್ನು ಮರೆಯಬಾರದು ಎಂದರು.

ಈ ಸಂದರ್ಭದಲ್ಲೂ ದಲಿತ ಸಿಎಂ ವಿಚಾರವಾಗಿ ಖರ್ಗೆ ಅವರಿಂದ ಸ್ಪಷ್ಟ ಉತ್ತರ ಸಿಗದಿದ್ದಾಗ, ನೀವು ಉತ್ತರಿಸದಿದ್ದಲ್ಲಿ, ಬೇರೆ ಪಕ್ಷಕ್ಕೆ ಮತ ನೀಡುವುದಾಗಿ ಎಚ್ಚರಿಸಿದರು.

ಯಾರಿಗಾದರೂ ಹಾಕಿ: ಚುನಾವಣೆಯಲ್ಲಿ ನೀವು ಯಾರಿಗೆ ಬೇಕಾದರೂ ಮತ ಹಾಕಬಹುದಾಗಿದ್ದು,ಅಂಬೇಡ್ಕರ್‌ ನಿಮಗೆ ಅಂತಹ ಅಧಿಕಾರ ನೀಡಿದ್ದಾರೆ. ಆದರೆ ದೇಶದಲ್ಲಿಂದು ಕೋಮುವಾದ ಮತ್ತು ಜಾತ್ಯತೀತವಾದದ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ. ಯೋಚಿಸಿ ಮತ ಚಲಾಯಿಸದಿದ್ದರೆ ಮುಂದೆ ನಿಮಗೆ ನಷ್ಟವಾಗಲಿದೆ ಎಂದು ಖರ್ಗೆ ಹೇಳಿದರು. ಇದರಿಂದ ಸಮಾಧಾನ ಗೊಳ್ಳದ ಜನರು, ಮತ್ತೂಮ್ಮೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದರು.

ಇದರಿಂದ ಅಸಮಾಧಾನಗೊಂಡ ಖರ್ಗೆ, ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದರು. ಈ ಹಂತದಲ್ಲೂ ಖರ್ಗೆ ಅವರನ್ನು ಅಡ್ಡಗಟ್ಟಿದ ಸ್ಥಳೀಯರು, ದಲಿತ ಸಿಎಂ ವಿಚಾರವಾಗಿ ಸರಿಯಾದ ಉತ್ತರ ನೀಡಬೇಕಿದ್ದು, ಇಲ್ಲದಿದ್ದರೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುತ್ತೇವೆಂದು ಎಚ್ಚರಿಸಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.