ಪ್ರಧಾನಿ ಮೋದಿ ಸುಳ್ಳಿನ ಸರದಾರ: ಖರ್ಗೆ
Team Udayavani, May 10, 2018, 7:00 AM IST
ಯಾದಗಿರಿ: “ಈ ಚುನಾವಣೆ ಸಂವಿಧಾನ ರಕ್ಷಣೆ ಮಾಡುವವರ ಹಾಗೂ ಸಂವಿಧಾನ ತಿರುಚುವವರ ನಡುವಿನ ಚುನಾವಣೆ ಯಾಗಿದ್ದು, ಸಂವಿಧಾನ ರಕ್ಷಣೆ ಮಾಡುವ ಕಾಂಗ್ರೆಸ್ಗೆ ಮತ ನೀಡಿ’ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪ್ರಧಾನಿ ಮೋದಿ ಸುಳ್ಳಿನ ಸರದಾರ. ವಿದೇಶದಲ್ಲಿರುವ ಕಪ್ಪು ಹಣ ವಶಪಡಿಸಿಕೊಂಡು ಪ್ರತಿಯೊಬ್ಬರ ಖಾತೆಗೆ ಹಣ ಹಾಕುವುದಾಗಿ ಹೇಳಿದ್ದರು. ಆದರೆ ನಯಾ ಪೈಸೆ ಕೂಡ ಹಾಕಿಲ್ಲ ಎಂದರು. ಮೋದಿ ಅವರಿಗೆ ಹೇಗೆ ಮಾತನಾಡಬೇಕು ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ನವರನ್ನು ಮುಧೋಳ ನಾಯಿಗೆ ಹೋಲಿಕೆ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿ ಪ್ರಾಣ ವನ್ನು ನೀಡಿದ್ದಾರೆ. ಆದರೆ ಈ ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ, ಆರ್ಎಸ್ಎಸ್ ನಾಯಕರು ಜೈಲಿಗೆ ಹೋಗಿಲ್ಲ. ಅವರ ಮನೆಯ ನಾಯಿಯೂ ಸತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ