ಬಡ್ತಿ ಹಿಂಪಡೆದ ಆದೇಶ ರದ್ದುಗೊಳಿಸಿ


Team Udayavani, Nov 10, 2017, 12:10 PM IST

10-21.jpg

ಕಾರವಾರ: ರಾಜ್ಯದ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಶಿಕ್ಷಕ ಹಾಗೂ ಉಪನ್ಯಾಸಕರಾಗಿ ಗುತ್ತಿಗೆ ಆಧಾರದ ಮೇಲೆ ನೇಮಕವಾಗಿ, ಕಾಯಂ ಆದ ಶಿಕ್ಷಕ, ಉಪನ್ಯಾಸಕರಿಗೆ, ತದನಂತರ ಸಕ್ರಮಗೊಂಡಿರುವ ಶಿಕ್ಷಕರಿಗೆ ಈಗಾಗಲೇ ಗುತ್ತಿಗೆ ಸೇವೆಗೆ ನೀಡಿದ 7 ವಾರ್ಷದ ವೇತನ ಬಡ್ತಿಗಳನ್ನು ಹಿಂಪಡೆಯಲು ಸರ್ಕಾರ ಇತ್ತೀಚೆಗೆ ಮಾಡಿದ ಆದೇಶ ರದ್ದುಪಡಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಸರ್ಕಾರವನ್ನು ಆಗ್ರಹಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಯಂಗೊಂಡ ಶಿಕ್ಷಕರ 7 ವರ್ಷಗಳ ವೇತನ ಬಡ್ತಿ ಹಿಂಪಡೆಯುವುದು
ಹಾಗೂ ಅದನ್ನು ಮರಳಿ ತುಂಬಿಸಿಕೊಳ್ಳುವ ಯತ್ನ ಅಮಾನವೀಯ ಎಂದರು. ಇದರ ಪರಿಣಾಮ 3 ಲಕ್ಷ ದಿಂದ 6 ಲಕ್ಷ ರೂ. ವನ್ನು ಸರ್ಕಾರಕ್ಕೆ ಶಿಕ್ಷಕರು, ಉಪನ್ಯಾಸಕರು ತುಂಬಬೇಕಾಗುತ್ತದೆ. ಅಲ್ಲದೇ ನಿವೃತ್ತಿ ವೇತನ ಫಿಕ್ಸ್‌ ಮಾಡುವಾಗ ನೇಮಕವಾದಾಗಿನ ಮೂಲ ವೇತನ ಆಧರಿಸುವ ಕಾರಣ ಅವರಿಗೆ ಪ್ರತಿ ತಿಂಗಳು ಮೂರು ಸಾವಿರ ನಿವೃತ್ತಿ ವೇತನ ಕಡಿಮೆಯಾಗಲಿದೆ. ನಿವೃತ್ತಿ ಅಂಚಿಗೆ
ಬಂದಿರುವ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಜೊತೆ ಸರ್ಕಾರ ಚೆಲ್ಲಾಟವಾಡಬಾರದು ಎಂದರು.

1984-1987ರ ಅವಧಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕವಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರು ಹಾಗೂ ಪಿಯು ಉಪನ್ಯಾಸಕರು ಈಗ ನಿವೃತ್ತಿ ಅಂಚಿನಲ್ಲಿದ್ದಾರೆ. ಕೆಲವರು ನಿವೃತ್ತಿ ಆಗಿದ್ದಾರೆ. ಅವರ 7 ವರ್ಷಗಳ ವೇತನ ಬಡ್ತಿ ವಾಪಸ್‌ ಪಡೆಯುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಈ ಸಂಬಂಧ ಶಿಕ್ಷಣ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಸಮಸ್ಯೆ ವಿವರಿಸಿದ್ದೇನೆ. ಆದರೂ ಕ್ರಮವಾಗಿಲ್ಲ ಎಂದು ಆರೋಪಿಸಿದರು.

ಗುತ್ತಿಗೆ ಆಧಾರದ ಮೇಲೆ ನೇಮಕವಾಗಿ ತದನಂತರ ಸಕ್ರಮಗೊಂಡಿರುವ ಶಿಕ್ಷಕರು ಹಾಗೂ ಉಪನ್ಯಾಸಕರು ನಿವೃತ್ತಿಯಾದ ಸಂದರ್ಭದಲ್ಲಿ ರಾಜ್ಯದ ಪ್ರಧಾನ ಅಕೌಂಟಂಟ್‌ ಜನರಲ್‌ರು 7 ವರ್ಷದ ಗುತ್ತಿಗೆ ಸೇವೆಗೆ ನೀಡಿದ ವಾರ್ಷಿಕ ವೇತನ ಬಡ್ತಿಯನ್ನು ಹಿಂಪಡೆದು ಸಕ್ರಮಗೊಂಡ ದಿನಾಂಕದಿಂದ ಮೂಲವೇತನವನ್ನು ಮರು ನಿಗದಿಪಡಿಸಿ ಸೇವಾ ಪಿಂಚಣಿ ನೀಡುವ ಆದೇಶ ಹೊರಡಿಸಿದ್ದಾರೆ. ಈ ಆದೇಶದಿಂದ ನಿವೃತ್ತಿಯಾಗಿರುವ ಶಿಕ್ಷಕ ಹಾಗೂ ಉಪನ್ಯಾಸಕರಿಗೆ ಲಕ್ಷಾಂತರ ಆರ್ಥಿಕ ನಷ್ಟ ಉಂಟಾಗುವುದು. ಅಲ್ಲದೇ ಸೇವಾ ನಿವೃತ್ತಿ ಸಂದರ್ಭದಲ್ಲಿ ಗುತ್ತಿಗೆ ಅವಧಿಯಲ್ಲಿ ನೀಡಿದ ವಾರ್ಷಿಕ ವೇತನ ಬಡ್ತಿಗಳನ್ನು ಮರು ಪಾವತಿ ಮಾಡಲು ಆದೇಶ ನೀಡಿರುವುದು ಸರಿಯಲ್ಲ ಎಂದು ವಿ.ಪ. ಸದಸ್ಯ ಸಂಕನೂರು ಟೀಕಿಸಿದರು.

ಈ ಸಮಸ್ಯೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ಮತ್ತು ತಕ್ಷಣ ಪ್ರಧಾನ ಕಾರ್ಯದರ್ಶಿಗಳಿಗೆ ತಿಳಿಸುವುದಾಗಿ
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸಚಿವರು ಭರವಸೆ ನೀಡಿದ್ದರು. ಆದರೆ ಈ ಸಂಬಂಧ ಹೋರಾಟ ರೂಪಿಸಬೇಕಾದ
ಸನ್ನಿವೇಶ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.