ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ


Team Udayavani, Nov 23, 2017, 2:38 PM IST

23-22.jpg

ಯಲ್ಲಾಪುರ: ರೈತರ ಭತ್ತದ ಗದ್ದೆ ಮತ್ತು ತೋಟಗಳಲ್ಲಿ ಬಹುಪಾಲು ಫಸಲು ಆನೆ, ಮಂಗ ಹಾಗೂ ಹಂದಿಗಳ ಕಾಟಕ್ಕೆ ತುತ್ತಾಗಿ ಅಪಾರ ನಷ್ಟವುಂಟಾಗುತ್ತಿದೆ. ಇಷ್ಟೊಂದು ಹಾನಿ ಅನುಭವಿಸುತಿದ್ದರೂ ಅನ್ನದಾತನ ಬಗ್ಗೆ ಮಾತನಾಡುವವರ ಗಂಟಲಲ್ಲಿ ಬೊಂತೆ ಸಿಕ್ಕಿಕೊಂಡಿದೆ. ಅವ್ಯಹತವಾಗಿ ನಗರವ್ಯಾಪ್ತಿಯ ರಾಮಾಪುರ ಮತ್ತು ಕಣ್ಣಿಗೇರಿ ಭಾಗಗಳಲ್ಲಿ ನಡೆಯುತ್ತಿರುವ ಅರಣ್ಯನಾಶ, ಹೊಸ ಅತಿಕ್ರಮಣವನ್ನೇ ತಡೆಯಲಾಗದ ನಿಸ್ಸಾಹಾಯಕ ಅರಣ್ಯ ಇಲಾಖೆ ಬಳಿ ರೈತರು ಬೆಳೆಹಾನಿಯ ಬಗ್ಗೆ ದೂರಿ ಪ್ರಯೋಜನವೇ ಇಲ್ಲವಾಗುತ್ತಿದೆ. ಪಟ್ಟಣದಂಚಿನ ಪ್ರದೇಶವಾದ ಸಬಗೇರಿ (ಜಡ್ಡಿ), ಹುತ್ಕಂಡ ಹಾಗೂ ತಾಲೂಕಿನ ಕಳಚೆ, ಮಾಗೋಡ ಮುಂತಾದ ಗ್ರಾಮೀಣ ಪ್ರದೇಶದ ಭತ್ತ, ಅಡಕೆ ಕಾಡು ಪ್ರಾಣಿಗಳ ಹಾವಳಿಯಿಂದ ಬಹುಪಾಲು ಬೆಳೆ ನಾಶವಾಗುತ್ತಿರುವುದು ಅನ್ನದಾತನ
ನಿದ್ದೆಗೆಡಿಸಿದೆ. ಮೊನ್ನೆಯ ಅಕಾಲಿಕ ಮಳೆಯಿಂದ ಭತ್ತ ನಾಶವಾಗೊದ್ದಕ್ಕೆ ರೈತರು ಆತಂಕಪಡಬೇಕಾಗಿದೆ.

ಈ ಬಗ್ಗೆ ಅರಣ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅನ್ನದಾತರು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಹಗಲು ವಿವಿಧ ಜಾತಿಯ (ಕೆಂಪು, ಕರಿ ಮೂತಿ)ಯ ಮಂಗಳು ಭತ್ತದ ತೆನೆ ತಿಂದು ರೈತರಿಗೆ ನಷ್ಟವನ್ನುಂಟು ಮಾಡುತ್ತಿವೆ ಹಾಗೂ ಅಡಕೆ, ಎಳೆಯ ತೆಂಗಿನ ಕಾಯಿಯನ್ನು ತಿಂದು ಬೀಸಾಡುತ್ತವೆ. ರಾತ್ರಿಯಾದ ನಂತರ ಆನೆ ಹಿಂಡು,  ಕಾಡು ಹಾಗೂ ನಾಡ ಹಂದಿಗಳಿಂದ ಗದ್ದೆ ಹಾಗೂ ತೋಟಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿವೆ. ಇದರಿಂದ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆದ ಬೆಳೆ  ರಕ್ಷಿಸಿಕೊಳ್ಳುವುದು ರೈತರ ಪಾಲಿಗೆ ಸವಾಲಾಗಿ ಪರಿಣಮಿಸಿದೆ. 

ಈ ಬಗ್ಗೆ ಪಪಂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ವ್ಯಾಪ್ತಿಯ  ಸಬಗೇರಿ ಗ್ರಾಮಸ್ಥರು ಪತ್ರದ ಮೂಲಕ ಆಗ್ರಹಿಸಿದ್ದರು. ಹಂದಿಗಳಿಂದ ಪಟ್ಟಣದ ಸ್ವತ್ಛತೆಯನ್ನು ಹಾಳು  ಮಾಡುತ್ತಿವೆ. ಪ.ಪಂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಂದಿ ಸಾಕಾಣಿಕೆದಾರರಿಂದ ಹಣ ಪಡೆದು ಬೇಕಾಬಿಟ್ಟಿಯಾಗಿ ಪಟ್ಟಣದಲ್ಲಿ ಹಂದಿಗಳನ್ನು ಬಿಡುವಂತೆ ಅನುಮೋದಿಸಿದ್ದಾರೆ. ಹಂದಿಗಳ ನಿರ್ಮೂಲನೆ ಮಾಡುತ್ತೇವೆ ಎಂದು ಎರಡು ಬಾರಿ ಹಣ ಖರ್ಚು ಹಾಕಿದ್ದಾರೆ. ಆದರೆ ಹಂದಿಗಳ ನಿರ್ಮೂಲನೆ ಆಗಲಿಲ್ಲ. ಈ ಬಗ್ಗೆ ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಜಡ್ಡಿಯ ರೈತ ಕಿಸಾನ್‌ ಸಂಘದ ಸದಸ್ಯ ಗಜಾನನ ಭಟ್ಟ ದೂರಿದ್ದಾರೆ.

ನರಸಿಂಹ ಸಾತೊಡ್ಡಿ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.