ಗ್ರಾಮದೇವಿ ಜಾತ್ರೆಗೆ ಸಿದ್ಧತೆ


Team Udayavani, Jan 4, 2018, 3:06 PM IST

Kadba-Blast-16-5.jpg

ಯಲ್ಲಾಪುರ: ಜಾತ್ರೆ ಸಂದರ್ಭದಲ್ಲಿ ಕುಡಿವ ನೀರು, ಸ್ವತ್ಛತೆ, ದಾರಿದೀಪ ಹಾಗೂ ರಕ್ಷಣೆ ಬಗೆಗೆ ಹೆಚ್ಚಿನ ಒತ್ತು ನೀಡಿ ಕಾರ್ಯನಿರ್ವಹಿಸಬೇಕು. ಯಾವುದೇ ಮೂಲ ಸೌಲಭ್ಯಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಆರಕ್ಷಕರು ತಾಳ್ಮೆ ಮತ್ತು ಜಾಣ್ಮೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಶಿವರಾಮ ಹೆಬ್ಟಾರ ಹೇಳಿದರು.

ಬುಧವಾರ ಪಟ್ಟಣದ ತಾ.ಪಂ ಸಭಾಭವನದಲ್ಲಿ ಗ್ರಾಮದೇವಿ ಜಾತ್ರೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್‌  ಕಚೇರಿ ಬಳಿ, ಶಿರಸಿ ಅರ್ಬನ್‌ ಬ್ಯಾಂಕ್‌ ಎದುರು ಸಾರ್ವಜನಿಕ ಶೌಚಾಲಯ ಹಾಗೂ ಐಬಿ ರಸ್ತೆ ಬಳಿ ಸಾರ್ವಜನಿಕ ಮೂತ್ರಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಮೊಬೈಲ್‌ ಶೌಚಾಲಯ ಬಳಸಿಕೊಂಡು ಜಾತ್ರಾರ್ಥಿಗಳಿಗೆ ಅನುಕೂಲತೆ ಕಲ್ಪಿಸಿ ಕೊಡಲಾಗುವುದು ಎಂದು ಪ.ಪಂ.ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾನಿ ಮಾಹಿತಿ ನೀಡಿದರು.

ಜಾತ್ರೆಯಲ್ಲಿ ಪಿಕ್‌ ಪಾಕೇಟ್‌ 
ಆಗದಂತೆ ಸೂಕ್ತ ರಕ್ಷಣೆ ನೀಡಲಾಗುತ್ತದೆ. ಹಾವೇರಿ, ಬೆಳಗಾವಿ, ಧಾರವಾಡ ಇತ್ಯಾದಿಗಳಿಂದ ಮೂರು ಪೊಲೀಸ್‌ ಸ್ಕ್ವಾಡ್‌ ನಿಯೋಜಿಸಲಾಗುತ್ತದೆ. ಹೆಚ್ಚುವರಿಯಾಗಿ ಸುಮಾರು 40 ಕಡೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು ಎಂದು ಸಿಪಿಐ ಮಂಜುನಾಥ ನಾಯಕ ತಿಳಿಸಿದರು. ಜಾತ್ರಾ ಸಂದರ್ಭದಲ್ಲಿ ಬರುವ ವಾಹನಗಳ ಸಮರ್ಪಕ ಪಾರ್ಕಿಂಗ್‌ ವ್ಯವಸ್ಥೆ, 24 ಗಂಟೆಗಳ ಕಾಲ ನಿರಂತರ ವಿದ್ಯುತ್‌ ಪೂರೈಕೆ, ಹೆಚ್ಚುವರಿ ಬಸ್‌, ಮೊಬೈಲ್‌ ದೂರವಾಣಿ ಸೇವೆ, ಉಚಿತ ಆರೋಗ್ಯ ಸೇವೆ ಬಗ್ಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಾತ್ರಾ ನಿರ್ವಹಣೆಗೆ ಅನುಭವಿ ಅಧಿಕಾರಿಗಳ ಮಾರ್ಗದರ್ಶನ ಪಡೆದು, ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಸೂಚಿಸಿದರು. ಪಾರ್ಕಿಂಗ್‌, ಬೀದಿ ದೀಪ, ಸಾರಿಗೆ ಮೂಲ ಸೌಕರ್ಯಗಳ ಬಗ್ಗೆ ಮುತುವರ್ಜಿ ವಹಿಸಬೇಕೆಂದು ಸಂಕಲ್ಪ ಅಧ್ಯಕ್ಷ ಪ್ರಮೋದ ಹಗಡೆ ಸೂಚಿಸಿದರು. 

ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಮಹೇಶ್‌ ನಾಯ್ಕ, ಮಹಮ್ಮದ್‌ ಗೌಸ್‌, ಜಗದೀಶ್‌ ನಾಯ್ಕ, ಶೋಭಾ ಹುಲಮನಿ, ಯೋಗೇಶ ಹಿರೇಮಠ, ಸೂರಜ್‌ ಹೆಗಡೆ, ಕೇಬಲ್‌ ನಾಗೇಶ್‌ ಮುಂತಾದವರು ಸಲಹೆ ಸೂಚನೆ ನೀಡಿದರು. ಪ.ಪಂ. ಅಧ್ಯಕ್ಷ
ಶಿರೀಷ್‌ ಪ್ರಭು, ಉಪಾಧ್ಯಕ್ಷೆ ಬಶೀರಾ ಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷೆ ಪುಷ್ಪಾ ನಾಯ್ಕ, ತಹಶೀಲ್ದಾರ ಡಿ.ಜಿ. ಹೆಗಡೆ, ಗ್ರಾಮದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜೇಂದ್ರ ಪ್ರಸಾದ ಭಟ್ಟ ಮುಂತಾದವರು ಇದ್ದರು.

ಮಾಧ್ಯಮದವರಿಗೂ ಪಾಠ:
ಜಾತ್ರೆ ಸಂದರ್ಭದಲ್ಲಿ ಆಗುವ ಸಣ್ಣಪುಟ್ಟ ಲೋಪದೋಷಗಳನ್ನೇ ಮಾಧ್ಯಮದವರು ವೈಭವೀಕರಿಸುವ ತಮ್ಮ ದೊಡ್ಡಸ್ಥಿಕೆಯೊಂದನ್ನೇ
ತೊರಿಸದೇ ಯಲ್ಲಾಪುರದ ಹೆಸರು ಹಾಳಾಗದಂತೆ ಎಚ್ಚರ ವಹಿಸಿ ಎಂದು ಮಾಧ್ಯಮದವರಿಗೆ ಶಾಸಕರು ಪಾಠ ಮಾಡಿದರು.

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.