ಕನ್ನಡ ಮಾಧ್ಯಮ ನಿರ್ಲಕ್ಷ್ಯ ಬೇಡ
Team Udayavani, Jan 4, 2018, 3:17 PM IST
ಸಿದ್ದಾಪುರ: ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಈಗ ಕೀಳರಿಮೆಯಿಂದ ಬಳಲುತ್ತಿದ್ದಾರೆ. ಇನ್ನು ನೂರು ವರ್ಷಗಳ ನಂತರ ಕನ್ನಡ ಭಾಷೆಯೇ ಉಳಿಯುವುದಿಲ್ಲ ಎಂದು ಹಿರಿಯ ಸಾಹಿತಿ ಆರ್.ಡಿ. ಹೆಗಡೆ ಆಲಮನೆ ಹೇಳಿದರು.
ತಾಲೂಕಿನ ಹಲಗೇರಿ ಸರಕಾರಿ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕನ್ನಡ ಇಂದು ಸಾಯುತ್ತಿರುವ ಭಾಷೆಗಳ ಪಟ್ಟಿಯಲ್ಲಿದೆ. ಜೊತೆಯಲ್ಲಿ ಸಹ ಭಾಷೆಗಳಾದ ತುಳು, ಕೊಡವ ಭಾಷೆಗಳು ಇವೆ. ಹಿಂದೆ ಬುದ್ಧ, ಮಹಾವೀರರ ಕಾಲದಲ್ಲಿ ಜನಸಾಮಾನ್ಯರ ಭಾಷೆಯಾಗಿದ್ದ ಪಾಲಿ, ಪ್ರಾಕೃತ ಭಾಷೆ ಇಂದು ಉಳಿದಿಲ್ಲ. ನಾವಿಂದು ಕನ್ನಡವನ್ನು ಉಪೇಕ್ಷೆ ಮಾಡುತ್ತ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮಕ್ಕೆ ಒತ್ತಾಯದಿಂದ ಕಳಿಸುತ್ತಿದ್ದೇವೆ. ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮದವರ ಮಧ್ಯೆ ತಾರತಮ್ಯ ಹೆಚ್ಚಾಗಿದೆ. ಇದರಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕೀಳರಿಮೆಯಿಂದ ಬಳಲುತ್ತಿದ್ದಾರೆ ಎಂದರು.
ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಕ್ರೀಡಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ತೆರಳುತ್ತಿರುವ ಮಂಜುನಾಥ ಸ್ವಾಮಿ ಯವರನ್ನು
ಸನ್ಮಾನಿಸಿ ಬೀಳ್ಕೊಡಲಾಯಿತು. ಪ್ರಾಚಾರ್ಯ ಟಿ.ಜಿ. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ನಾಯ್ಕ ವೇದಿಕೆಯಲ್ಲಿದ್ದರು. ರೋಹಿಣಿ ಮಡಿವಾಳ ಸ್ವಾಗತಿಸಿದರು. ವಿನುತಾ ವರದಿ ವಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!