ಯತಿಗಳಿಂದ ಆತ್ಮಲಿಂಗ ದರುಶನಕ್ಕೀಗ ವರ್ಷ ಪೂರ್ಣ


Team Udayavani, Jan 9, 2018, 3:02 PM IST

09-39.jpg

ಗೋಕರ್ಣ: ಮಂಡಲಾಧೀಶ್ವರ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಲೋಕಕಲ್ಯಾಣಾರ್ಥ ನಾಡಿನ ವಿವಿಧ ಸಂತರಿಂದ ಆತ್ಮಲಿಂಗ ಪೂಜೆ ಹಾಗೂ ಸಂತ ಸಮರ್ಪಣಾ ಕಾರ್ಯಕ್ರಮ ಇಂದಿಗೆ 365 ದಿನಗಳನ್ನು ಪೂರೈಸಿದಂತಾಗಿದೆ. ಕಳೆದ 2017ರ ಜನವರಿ 9ರಿಂದ ಆರಂಭಗೊಂಡ ಪ್ರತಿದಿನ ನಾಡಿನ ವಿವಿಧ ಮಠದ ಮಠಾಧೀಶರು ಇಲ್ಲಿಗೆ ಬಂದು ಆತ್ಮಲಿಂಗ ಪೂಜೆ ನಡೆಸುವ ಕಾರ್ಯಕ್ರಮ ಜ.8 ಸೋಮವಾರ ಒಂದು ವರ್ಷ ಪೂರೈಸಿದೆ.

ಅಂದು ಆಂಧ್ರ ಪ್ರದೇಶ ಶ್ರೀಶೈಲದ ಸೂರ್ಯಸಿಂಹಾಸನಾ ಮಠಾಧೀಶ ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಈ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಇಂದು 365ನೇ ದಿನ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಗೋಕರ್ಣ
ಗೌರವ ಕಾರ್ಯಕ್ರಮವು ಬಸವಕಲ್ಯಾಣದ ಶಾಂತಲಿಂಗೇಶ್ವರ ಮಠದ ಶಾಂತಲಿಂಗ ಸ್ವಾಮಿಗಳ ಸಾನ್ನಿಧ್ಯದಲ್ಲಿ ಮಹಾಬಲೇಶ್ವರ ದೇವಾಲಯದ ಆತ್ಮಲಿಂಗಕ್ಕೆ ಪೂಜೆ ನೆರವೇರಿಸಿದರು.

ದೇವಾಲಯದ ಪ್ರಧಾನ ಅರ್ಚಕ ಹಾಗೂ ಉಪಾಧಿವಂತ ಪುರೋಹಿತ ವೇ.ಶಿತಿಕಂಠ ಹಿರೇ ದೇವಾಲಯದ ವತಿಯಿಂದ ಪೂಜ್ಯರಿಗೆ ಫಲ ಸಮರ್ಪಿಸಿ, ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆನೀಡಿ, ಗೌರವಿಸಿದರು. ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಗೋಳಗೋಡ, ಸಂತಸೇವಕ ಸಮಿತಿ ವಿ.ಡಿ. ಭಟ್ಟ್ ಹಾಗೂ ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು. 

ಉಪಾಧಿವಂತ ವೇ.ವಿಶ್ವನಾಥ ಬಾಳೇಹಿತ್ತಲು ಪೂಜಾಕಾರ್ಯ ನೆರವೇರಿಸಿದರು, ಆಗಮಿಸಿದ ಎಲ್ಲ ಸಂತರೂ ತಮ್ಮ ಶಿಷ್ಯ ಜನತೆಯ ಒಳಿತು ಹಾಗೂ ಲೋಕಕಲ್ಯಾಣ ಸಂಕಲ್ಪಿಸಿ, ಪ್ರಾತಃ ಕಾಲದಲ್ಲಿ ಆತ್ಮಲಿಂಗಕ್ಕೆ ಕ್ಷೀರಾಭಿಷೇಕ, ಪಂಚಾಮೃತ, ನವಧಾನ್ಯ, ರುದ್ರಾಭಿಷೇಕ ಬಿಲ್ವಾರ್ಚನೆ, ಮಂಗಳಾರತಿ ಹಾಗೂ ಸುವರ್ಣ ನಾಗಾಭರಣ ವಿಶೇಷ ಪೂಜೆ ಸಲ್ಲಿಸಿ, ಶಿವ ಸಂಪ್ರೀತಿ ಪಡೆದು, ಈ ವಿಶೇಷ ಕಾರ್ಯಕ್ರಮವನ್ನು ಮೆಚ್ಚಿ, ಹಾಡಿ ಹೊಗಳಿ, ಆಶೀರ್ವದಿಸುತ್ತಿದ್ದರು. ಪೂಜೆಯ ನಂತರ ವಿವಿಧ ಸಮಾಜದ ಮುಖಂಡರಿಂದ ಪ್ರತಿದಿನದ ಗೌರವಾರ್ಪಣೆ ನಡೆಸಿಕೊಡಲಾಗುತ್ತಿತ್ತು.

ಇನ್ನು ಮುಂದೆಯೂ ಆತ್ಮಲಿಂಗ ಸನ್ನಿಧಿ ಗೋಕರ್ಣದ ಮಹಾಬಲೇಶ್ವರ ದೇವಾಲಯವು ಸಂತರ ಕೇಂದ್ರವಾಗಲಿದೆ. ರಾಜ್ಯದಲ್ಲಿರುವ ಸುಮಾರು 5ಸಾವಿರಕ್ಕೂ ಹೆಚ್ಚು ಮಠಗಳಿದ್ದು, ಎಲ್ಲ ಮಠಾಧೀಶರನ್ನು ಸಂಪರ್ಕಿಸಿ, ಗೋಕರ್ಣಕ್ಕೆ ಆಹ್ವಾನಿಸಿ, ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಊರಿನ ಉಪಾಧಿವಂತ ಅರ್ಚಕರು ಹಾಗೂ ವಿವಿಧ ಸಮಾಜದ ಮುಖಂಡರ ಸಹಯೋಗದಿಂದ ವ್ಯವಸ್ಥೆ ಮಾಡಲಾಗುವುದು ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ತಿಳಿಸಿದ್ದಾರೆ.

ಈ ನಡುವೆ ದೇವಾಲಯದ ಉಪಾಧಿವಂತ ಮಂಡಳ ಹಾಗೂ ಜನಸಮುದಾಯ ಸಂತರುಗಳಿಂದ ನೆರವೇರುವ ಸಾರ್ವಭೌಮ ಮಹಾಬಲೇಶ್ವರ ದೇವರ ಪೂಜಾಕಾರ್ಯ ಅದ್ವಿತೀಯ ಕಾರ್ಯಕ್ರಮವಾಗಿದ್ದು, ಶ್ರೀಗಳ ಸಂಕಲ್ಪದಂತೆ ಮುಂದಿನ ದಿನಗಳಲ್ಲಿಯೂ ಆಗಮಿಸಿ, ಸಂತರು ಆಶೀರ್ವದಿಸಿ
ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಗೋಳಗೋಡ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.