ಶಿಕ್ಷಣ ಉಳ್ಳವರ ಸ್ವತ್ತಾಗದಿರಲಿ
Team Udayavani, Mar 7, 2018, 7:31 PM IST
ಯಲ್ಲಾಪುರ: ಶಿಕ್ಷಣ ಕೇವಲ ಉಳ್ಳವರ ಸೊತ್ತಾಗಬಾರದು ಎಂಬ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ದೊರಕಿಸುವ
ಉದ್ದೇಶದಿಂದ ಅನೇಕ ಉಚಿತ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಶಾಸಕ ಶಿವರಾಮ ಹೆಬ್ಟಾರ್ ಹೇಳಿದರು.
ಅವರು ತಾಲೂಕಿನ ಕಂಚಿಕೊಪ್ಪ ಸ.ಹಿ.ಪ್ರಾ ಶಾಲೆಯ ಸುವರ್ಣ ಸಂಭ್ರಮ, ಶೈಕ್ಷಣಿಕ ಉತ್ಸವ, ಇ-ಕಲಿಕಾ ಕೊಠಡಿ, ವಾರ್ಷಿಕೋತ್ಸವ ಉದ್ಘಾಟಿಸಿ ಶಾಲಾಭಿವೃದ್ಧಿ ಸಮಿತಿ ಮಾಜಿ ಮತ್ತು ಹಾಲಿ ಅಧ್ಯಕ್ಷರನ್ನು, ಶಾಲೆಯಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು. ಮಾಜಿ ಶಾಸಕ ವಿ.ಎಸ್. ಪಾಟೀಲ್ ಮಾತನಾಡಿ, ಶಿಕ್ಷಣಕ್ಕಾಗಿ ಹಿರಿಯರು ನಿರ್ಮಿಸಿದ ಭದ್ರಬುನಾದಿಯ ಪರಿಣಾಮ ನಮ್ಮೆಲ್ಲರ ಬಾಳಿಗೆ ಬೆಳಕು ನೀಡಿದೆ ಎಂದರು. ಶಾಲಾ ಸಂಸ್ಥಾಪಕ ಆರ್. ಶ್ರೀನಿವಾಸರಾವ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ ಅಧ್ಯಕ್ಷ ಪ್ರಕಾಶ ನಾಯ್ಕ, ವಲಯ ಶಿಕ್ಷಣ ಸಂಯೋಜನಾಧಿಕಾರಿ ಆನಂದ ಕೊರವರ್, ಗ್ರಾ.ಪಂ ಸದಸ್ಯ ಚಂದ್ರಶೇಖರ ಜೈನ್, ಹಿರಿಯ ನಾಗರಿಕ ಹೊನ್ನಯ್ಯ ಜೈನ್, ಎಸ್ಡಿಎಂಸಿ ಅಧ್ಯಕ್ಷ ಮಂಜಯ್ಯ ಜೈನ್ ಸನ್ಮಾನಿತರ ಪರವಾಗಿ ಶಿಕ್ಷಕಿ ಗೀತಾ ಹೆಗಡೆ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಆರ್.ಶ್ರೀನಿವಾಸ್ ರಾವ್, ರಾಜೇಶ.ಕೆ.ಜಿ, ರಮೇಶರಾವ್, ಶೇಷು ನಾಯ್ಕ, ಜಿನ್ನಪ್ಪ, ರಮೇಶ ನಾಯ್ಕ, ಭಾಸ್ಕರ ಹೆಗಡೆ, ಮಂಜುನಾಥ ನಾಯ್ಕ, ಮಂಜಯ್ಯ ಜೈನ್ ಹಾಗೂ ಶಿಕ್ಷಕರಾದ ದಿ.ಕೆ.ಬಿ.ಪಟಗಾರ್
(ಸತೀಶ ಪಟಗಾರ್), ಕೆ.ವೈ. ಪಡ್ತಿ, ವಿ.ಜಿ.ಹೆಗಡೆ, ಸುನೀಲ್.ಕೆ.ಬಿ, ಎ.ಜಿ.ಸಿನ್ನೂರ್, ರಾಘವೇಂದ್ರ ಕುಲಕರ್ಣಿ, ಜಿ.ಆರ್.ಫಾಯ್ದೆ, ಪ್ರವೀಣ ಶಿಡ್ಲಾಪುರ, ಗೀತಾ ಹೆಗಡೆ ಅವರನ್ನು ಸನ್ಮಾನಿಸಲಾಯಿತು. ರಮೇಶರಾವ್ ಸ್ವಾಗತಿಸಿದರು. ಎಸ್ಡಿಎಂಸಿ ಅಧ್ಯಕ್ಷ ಮಂಜಯ್ಯ ಜೈನ್ ವಂದಿಸಿದರು. ನಂತರ ಶಾಲೆಯ ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ