ನಮಗೊಂದು ಅವಕಾಶ ಕೊಡಿ: ಎಚ್‌ಡಿಕೆ


Team Udayavani, Mar 16, 2018, 6:05 PM IST

1.jpg

ಸಿದ್ದಾಪುರ: ಈವರೆಗೆ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಮತದಾರರು ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ. ನಮಗೂ ಈ ಬಾರಿ ಅವಕಾಶ ಕೊಡಿ. ರಾಜ್ಯವನ್ನು ಕತ್ತಲೆಯಿಂದ ಬೆಳಕಿನತ್ತ ಕರೆದೊಯ್ಯಲು ಅನುವು  ಮಾಡಿಕೊಡಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ವಿನಂತಿಸಿದರು.

ಅವರು ಪಟ್ಟಣದ ನೆಹರೂ ಮೈದಾನದಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮಾತನಾಡಿದರು. ಮುಖ್ಯಮಂತ್ರಿಯಾಗಬೇಕು ಎನ್ನುವ ಆಸೆಯಿಂದ ನಾನು ಶ್ರಮಿಸುತ್ತಿಲ್ಲ. ಈಗ ಎರಡನೇ ಜನ್ಮ ಪಡೆದು ಬಂದಿದ್ದೇನೆ. ಹೃದಯ ಚಿಕಿತ್ಸೆ ನಂತರವೂ ರಾಜ್ಯದೆಲ್ಲೆಡೆ ಓಡಾಡುತ್ತಿದ್ದೇನೆ. ಪಕ್ಷವನ್ನು ಅಧಿ ಕಾರಕ್ಕೆ ತರಬೇಕು ಎನ್ನುವುದು ಮಾತ್ರವಲ್ಲ. ಆಡಳಿತ ನಡೆಸಲು ಅವಕಾಶ ಕೊಟ್ಟು ಲಕ್ಷಾಂತರ ಜನರ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಎನ್ನುವುದು ಮುಖ್ಯ ಕಾರಣ ಎಂದರು.

ನಾವು ಅಧಿ ಕಾರಕ್ಕೆ ಬಂದರೆ ಜನರ ನಡುವೆ ಇದ್ದು ಕೆಲಸ ಮಾಡುತ್ತೇವೆ. ಮುಂದೆ ನಮ್ಮದು ಜನರ ಸರಕಾರವಾಗಿರುತ್ತದೆ. 
ಸಿದ್ದರಾಮಯ್ಯ ಹೇಳುವಂತೆ ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಿಲ್ಲ. ಎಲ್ಲಿಯವರೆಗೆ ದುಡಿವ ಕೈಗಳಿಗೆ ಕೆಲಸ
ದೊರೆಯುವದಿಲ್ಲವೋ, ನಾಲ್ಕು ಮಂದಿ ಕುಟುಂಬದ ಆದಾಯ ಕನಿಷ್ಠ 15 ಸಾವಿರ ರೂ.ಗಳಿಗಿಂತ ಹೆಚ್ಚು ಆಗಲ್ಲವೋ
ಅಲ್ಲಿಯ ತನಕ ಪರಿಸ್ಥಿತಿ ಬದಲಾಗುವುದಿಲ್ಲ. ಕಡಿಮೆ ಬೆಲೆಗೆ ಅಕ್ಕಿ ಕೊಡೋದನ್ನ ಜಾರಿಗೆ ತಂದವರು ರಾಮಕೃಷ್ಣ ಹೆಗಡೆ.
ಕಾಂಗ್ರೆಸ್‌ ಸರಕಾರ ಕಡಿಮೆ ಬೆಲೆಗೆ ಅಕ್ಕಿ ಕೊಟ್ಟು ಸಾರಾಯಿ ಬೆಲೆ ಹೆಚ್ಚಿಸಿ ಜನರನ್ನು ವಂಚಿಸುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಈ ಜಿಲ್ಲೆಯ ಜ್ವಲಂತ ಅರಣ್ಯ ಅತಿಕ್ರಮಣ ಸಮಸ್ಯೆಯನ್ನು ಒಂದು ವಾರ ಜಿಲ್ಲೆಯಲ್ಲೇ ಇದ್ದು ಬಗೆಹರಿಸುತ್ತೇನೆ. 24 ಗಂಟೆಯಲ್ಲಿ ಸಾಲಮನ್ನಾ ಮಾಡುತ್ತೇವೆ ಎಂದರು.

ಜಿಲ್ಲೆಯಲ್ಲಿ ನಡೆದ ಗಲಭೆಗೆ ಕಾಂಗ್ರೆಸ್‌, ಬಿಜೆಪಿ ಎರಡೂ ಕಾರಣ. ನಾನು ಇಲ್ಲಿಗೆ ಸಮಾಜ ಒಡೆಯಲು ಬಂದಿಲ್ಲ. ಬೆಂಕಿ ಹಚ್ಚಲು ಬಂದಿಲ್ಲ ಎಂದರು. ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ, ಶಾಸಕ ಮಧು ಬಂಗಾರಪ್ಪ ಮಾತನಾಡಿ ಕಾಂಗ್ರೆಸ್‌ ಸರಕಾರ ಸಾಲಮನ್ನಾ ಮಾಡಿದೆ ಅನ್ನುತ್ತಾರೆ. ಈವರೆಗೆ ಯಾವುದೇ ಸೊಸೈಟಿಗೆ ಸಾಲಮನ್ನಾ ಹಣ ಹೋಗಿಲ್ಲ. ಜೂನ್‌ ನಲ್ಲಿ ಹಣಸಂದಾಯ ಮಾಡ್ತೀವಿ ಅನ್ನುತ್ತಾರೆ. ಆಗ ಸಿದ್ಧರಾಮಯ್ಯ ಇರುತ್ತಾರಾ? ಎಂದು ಪ್ರಶ್ನಿಸಿದರು. ಜೆಡಿಎಸ್‌ ಮುಖಂಡರಾದ ಬಸವರಾಜ ಹೊರಟ್ಟಿ,
ಮರಿತಿಬ್ಬೇಗೌಡ, ನಿಯೋಜಿತ ಅಭ್ಯರ್ಥಿಗಳಾದ ಶಶಿಭೂಷಣ ಹೆಗಡೆ, ಆನಂದ ಅಸ್ನೋಟಿಕರ್‌, ಬಿಎಸ್ಪಿ ಜಿಲ್ಲಾಧ್ಯಕ್ಷ ಸಂತೋಷ ಜೋಗಳೇಕರ್‌ ಮಾತನಾಡಿದರು. ಇನಾಯತುಲ್ಲಾ ಶಾಬಂದ್ರಿ, ಸೈಯದ್‌ ಅಲ್ತಾಪ್‌, ತಿಮ್ಮಪ್ಪ ಎಂ.ಕೆ. ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾಧ್ಯಕ್ಷ ಬಿ.ಆರ್‌. ನಾಯ್ಕ ಸ್ವಾಗತಿಸಿದರು. ತಾಲೂಕಾಧ್ಯಕ್ಷ ಎಸ್‌.ಕೆ. ನಾಯ್ಕ ವಂದಿಸಿದರು.

ಅನಂತಕುಮಾರ ಮಾತಿಗೆ ಟೀಕೆ
ಇಲ್ಲಿಯ ಸಂಸದ ಅನಂತಕುಮಾರ ಹೆಗಡೆಯವರಿಗೆ ಭಗವಂತ ಅವಕಾಶ ಕೊಟ್ಟಿದ್ದಾನೆ. ಕೇಂದ್ರ ಸಚಿವರಾಗಿ ಜಿಲ್ಲೆಯ ಸಮಸ್ಯೆಯಾದ ಅರಣ್ಯ ಅತಿಕ್ರಮಣ ಸಮಸ್ಯೆಗೆ ಪರಿಹಾರ ನೀಡಲು ಅವರಿಗೆ ಸಾಧ್ಯವಾಗಿಲ್ಲವೇ? ಕೆಲಸಕ್ಕೆ ಬಾರದ ಕೆಟ್ಟ ಭಾಷೆಯಲ್ಲಿ ಮಾತನಾಡಿದರೆ
ಮತ ದೊರೆಯುತ್ತದೆಯೇ? ಅವರ ನಾಲಗೆಯಿಂದ ಹೊರಡುವ ಪದಗಳೇ ಕೇಳಲಾಗದ್ದು. ನಾನೂ ಹಳ್ಳಿಯಿಂದ ಬಂದವನು. ಮನಸ್ಸು ಮಾಡಿದರೆ 2 ತಾಸು ಕೆಟ್ಟಪದಗಳಲ್ಲಿ ಬೈಯಬಲ್ಲೆ. ಆದರೆ ಅದರ ಅಗತ್ಯವಿಲ್ಲ. ರಾಜ್ಯದ ಬಿಜೆಪಿ ಮುಖಂಡರು ಭೋಗಿಗಳಾಗಿರೋದಕ್ಕೆ ಉತ್ತರ ಪ್ರದೇಶದಿಂದ ಯೋಗಿಯನ್ನ ಕರೆಸುತ್ತಿದ್ದಾರೆ. ನಮ್ಮ ಪಕ್ಷದ ಪ್ರಚಾರಕ್ಕೆ ದಿಲ್ಲಿಯಿಂದ ವರ್ಚಸ್ವಿ ನಾಯಕರು ಬರುತ್ತಿಲ್ಲ.
ನಾವೇ ಜನರ ಬಳಿಗೆ ಹೋಗುತ್ತೇವೆ ಎಂದರು. 

ನನಗೆ ಅಧಿಕಾರ ಮುಖ್ಯವಲ್ಲ
ಯಲ್ಲಾಪುರ: ನನಗೆ ಅಧಿಕಾರ ಮುಖ್ಯವಲ್ಲ. ನನ್ನ ಅನಾರೋಗ್ಯದ ಮಧ್ಯೆಯೂ ಜನರ ಭವಿಷ್ಯ ನಿರ್ಮಾಣ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ವೈಟಿಎಸ್‌ಎಸ್‌ ಮೈದಾನದಲ್ಲಿ ಕುಮಾರಪರ್ವ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಬಡವರ
ಕಷ್ಟಗಳನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಸಿದ್ದರಾಮಯ್ಯರ ಹಾಗೆ ಎಷ್ಟು ವರ್ಷ ಅಧಿಕಾರದಲ್ಲಿದ್ದರೂ ಪ್ರಯೋಜನವಿಲ್ಲ ಎಂದ ಅವರು, ಇಲ್ಲಿಯ ಶಾಸಕರ ದುರಾಡಳಿತದಿಂದ ಜನ ಬೇಸತ್ತ ಬಗ್ಗೆ ನನಗೆ ನೋವಿದೆ. ಉತ್ತರಕನ್ನಡದ ಜನ ರಾಜ್ಯದ ಪ್ರಗತಿಗಾಗಿ ಹಲವು ತ್ಯಾಗಗಳನ್ನು ಮಾಡಿದ್ದಾರೆ. ಆದರೆ ಜಿಲ್ಲೆಯ ಜನತೆಗೆ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಸರ್ಕಾರಗಳು ನ್ಯಾಯ
ಒದಗಿಸಿಲ್ಲ. ನಾವು ರೈತರ ಸಾಲಮನ್ನಾವಷ್ಟೇ ಅಲ್ಲ. ಬೆಳೆ ಬೆಳೆಯಲು ಸಹಾಯ ನೀಡುತ್ತಿದ್ದೇವೆ. ಉಚಿತ ಬಿತ್ತನೆ ಬೀಜ ನೀಡುತ್ತೇವೆ. ಈ ಕುಮಾರಸ್ವಾಮಿ ಹೇಳಿದ್ದನ್ನು ಮಾಡುತ್ತಾನೆ ಎಂದ ಅವರು ರವೀಂದ್ರ ನಾಯಕರಂತಹ ನಾಯಕರನ್ನು ಜಿಲ್ಲೆಯಿಂದ ಆರಿಸಿಕಳಿಸಿ ಎಂದರು.

ಮತ ಪಡೆಯಲು ಧರ್ಮದ ಹೆಸರಿನಲ್ಲಿ ಅಮಾಯಕರ ಸಾವಿಗೆ ಕಾರಣವಾಗುವ ಬಿಜೆಪಿ ನಾಯಕರಿಗೆ ಅಧಿ ಕಾರ ನೀಡಬೇಡಿ ಎಂದ ಅವರು, ರಾಜ್ಯದ ಜನತೆಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಜೆಡಿಎಸ್‌ ಬೆಂಬಲಿಸಿ ಎಂದರು. ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಮಧು ಬಂಗಾರಪ್ಪ, ವಿಧಾನ ಪರಿಷತ್‌ ಉಪಸಭಾಪತಿ ಮರಿತಿಬ್ಬೇಗೌಡ, ಕ್ಷೇತ್ರದ ಘೋಷಿತ ಅಭ್ಯರ್ಥಿ ಎ.ರವೀಂದ್ರ ನಾಯ್ಕ, ಮಾಜಿ ಸಚಿವ ಆನಂದ ಅಸ್ನೋಟಿಕರ್‌, ಶಿರಸಿಯ ಶಶಿಭೂಷಣ ಹೆಗಡೆ, ಅಲ್ಪಸಂಖ್ಯಾತ ವಿಭಾಗದ
ಅಧ್ಯಕ್ಷ ಸೈಯ್ಯದ್‌ ಅಲ್ತಾಫ್‌, ಪಿ.ಜಿ. ಭಟ್ಟ ಬರಗದ್ದೆ, ಅರುಣ ಗೊಂದಳಿ ಹಾಗೂ ವಿವಿಧ ಸ್ಥರದ ಪ್ರಮುಖರು ಉಪಸ್ಥಿತರಿದ್ದರು. ಜೆಡಿಎಸ್‌ ತಾಲೂಕು ಕಾರ್ಯಾಧ್ಯಕ್ಷ ಎನ್‌.ವಿ. ಭಟ್ಟ ದೇವಸ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಬಿ.ಆರ್‌. ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಎಸ್‌.ವಿ. ಗಾಂವಾರ ವಾಗಳ್ಳಿ ನಿರ್ವಹಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.