ಹಿರಿಯರ ಕೊಡುಗೆಯಿಂದ ಎತ್ತರಕ್ಕೇರಿದ ಯಕ್ಷರಂಗ


Team Udayavani, Mar 16, 2018, 6:09 PM IST

2.jpg

ಶಿರಸಿ: ಯಕ್ಷರಂಗ ಇಂದು ಇಷ್ಟು ಎತ್ತರದಲ್ಲಿ ಇರಲು, ನಾವು ಯಕ್ಷರಂಗದಿಂದ ಗೌರವ ಪಡೆಯಲು ಹಿರಿಯರು ಕೊಟ್ಟ ಅನನ್ಯ ಕೊಡುಗೆ ಕಾರಣ. ಅವರು ಅಷ್ಟು ಶ್ರಮಿಸಿದ್ದರ ಪರಿಣಾಮವೇ ಇಂದು ನಾವು ಈ ಕ್ಷೇತ್ರದಲ್ಲಿ  ಗುರುತಿಸಿಕೊಳ್ಳಲು ಕಾರಣ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಕೂರು ಕೃಷ್ಣಯಾಜಿ ಅಭಿಮತ ವ್ಯಕ್ತಪಡಿಸಿದರು.

ಅವರು ಉದಯವಾಣಿ ಜೊತೆ ಮಾತನಾಡಿ, ಹಿರಿಯರು ಕೊಟ್ಟ ಕೊಡುಗೆ ನೆನಪಿಡಬೇಕು. ಇದೇ ಕಾರಣಕ್ಕೆ ಯಾಜಿ ಯಕ್ಷ ಮಿತ್ರ ಮಂಡಳಿ ಪ್ರತೀವರ್ಷ ಪ್ರಶಸ್ತಿ ಜೊತೆ ಆರ್ಥಿಕ ನೆರವನ್ನೂ ನೀಡುತ್ತಿದೆ. ಕಳೆದ 13 ವರ್ಷದಿಂದ ನಿರಂತರವಾಗಿ ಬಡ ಅಶಕ್ತ ಕಲಾವಿದರಿಗೆ ನೀಡುವ ಮೂಲಕ ನಾನು ಸಾರ್ಥಕ್ಯ ಕಾಣುತ್ತಿದ್ದೇನೆ. ವಿಶೇಷ ಎಂದರೆ ಈವರೆಗೆ ಈ ಯಾಜಿ ಒಂದು ರೂ. ನೀಡಿಲ್ಲ. ಕಲಾಭಿಮಾನಿಗಳೇ ಈ ಪುರಸ್ಕಾರ ಸಮಾರಂಭ ನಡೆಸಿಕೊಡುತ್ತಿದ್ದಾರೆ ಎಂದು ಹೇಳಿದರು.

ಯಕ್ಷಗಾನದಲ್ಲಿ ಮುಂದಿನ ತಲೆಮಾರಿನಲ್ಲಿ ಹೊಸಬರ ಜೊತೆಗೆ ಅಧ್ಯಯನ, ಅಧ್ಯಾಪನ ಮಾಡುವುದನ್ನೂ ರೂಢಿಸಿಕೊಳ್ಳಬೇಕು ಎನ್ನುವ ಯಾಜಿ, ಈ ಪ್ರಶಸ್ತಿ ಪ್ರದಾನ ನನ್ನ ನಂತರವೂ ಮುಂದುವರಿಯಬೇಕು. ನನಗೆ ಗಂಡು ಮಕ್ಕಳಿಲ್ಲ. ಮಗಳ ಮಗ ಅಭಿಷೇಕ ಹಾಗೂ ಅವರ ತಂದೆ ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ ಎಂದೂ ಹೇಳಿದರು.

ಪ್ರಶಸ್ತಿ ಪ್ರದಾನ: ಬಡಗುತಿಟ್ಟಿನ ರಂಗಸ್ಥಳದಲ್ಲಿ ಐದು ದಶಕಗಳ ಕಾಲ ಎರಡನೇ ಪ್ರಧಾನ ವೇಷಧಾರಿಯಾಗಿ ರಂಗಸ್ಥಳ ಆಳಿದ ಕೊಪ್ಪಾಟೆ ಮುತ್ತು ಗೌಡರಿಗೆ ಯಾಜಿ ಯಕ್ಷಮಿತ್ರ ಪ್ರಶಸ್ತಿ ಹಾಗೂ 25 ಸಾವಿರ ರೂ. ಅರ್ಪಿಸುವ ಯಕ್ಷ ಯುಗಾದಿ ಸಮಾರಂಭ ಮಾ.18ರಂದು ಸಂಜೆ 4ಕ್ಕೆ ನಗರದ ತೋಟಗಾರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ವಿ.ಉಮಾಕಾಂತ ಭಟ್ಟ ಮೇಲುಕೋಟೆ, ಶಾಂತಾರಾಂ ಹೆಗಡೆ ಶೀಗೇಹಳ್ಳಿ, ಪ್ರೊ| ಎಂ.ಎ.ಹೆಗಡೆ ದಂಟಕಲ್‌, ಭೀಮಣ್ಣ ನಾಯ್ಕ, ಉಪೇಂದ್ರ ಪೈ
ಇತರರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ಬಳಿಕ ಶ್ರೀಕೃಷ್ಣ ಸಂಧಾನ ಯಕ್ಷಗಾನ ಪ್ರದರ್ಶನ ಕೂಡ ಹಮ್ಮಿಕೊಳ್ಳಲಾಗಿದೆ.

ಯಕ್ಷಗಾನ: ಶ್ರೀ ಕೃಷ್ಣ ಸಂಧಾನ ಆಟದ ಹಿಮ್ಮೇಳದಲ್ಲಿ ಬಡಗಿನ ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ್‌ ಯಲ್ಲಾಪುರ, ಗಣೇಶ ಗಾಂವಕರ್‌ ಸಹಕಾರ ನೀಡಲಿದ್ದಾರೆ. ಮುಮ್ಮೇಳದಲ್ಲಿ ಕೃಷ್ಣಯಾಜಿ ಬಳಕೂರು, ರಾಮಚಂದ್ರ ಹೆಗಡೆ ಕೊಂಡದಕುಳಿ, ಪ್ರದೀಪ ಸಾಮಗ, ಶ್ರೀಪಾದ ಹೆಗಡೆ ಹಡಿನಬಾಳ, ಅಶೋಕ ಭಟ್ಟ ಸಿದ್ದಾಪುರ, ಶ್ರೀಧರ ಹೆಗಡೆ ಚಪ್ಪರಮನೆ, ಹಮ್ಮಣ್ಣ ಗಾಂವಕರ್‌, ವೆಂಕಟೇಶ ಹೆಗಡೆ,  ಸಂತೋಷ ಹೆಗಡೆ, ಅಭಿಷೇಕ ಅಡಿ ಹಾಗೂ ಇತರ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.