ಹಿರಿಯರ ಕೊಡುಗೆಯಿಂದ ಎತ್ತರಕ್ಕೇರಿದ ಯಕ್ಷರಂಗ


Team Udayavani, Mar 16, 2018, 6:09 PM IST

2.jpg

ಶಿರಸಿ: ಯಕ್ಷರಂಗ ಇಂದು ಇಷ್ಟು ಎತ್ತರದಲ್ಲಿ ಇರಲು, ನಾವು ಯಕ್ಷರಂಗದಿಂದ ಗೌರವ ಪಡೆಯಲು ಹಿರಿಯರು ಕೊಟ್ಟ ಅನನ್ಯ ಕೊಡುಗೆ ಕಾರಣ. ಅವರು ಅಷ್ಟು ಶ್ರಮಿಸಿದ್ದರ ಪರಿಣಾಮವೇ ಇಂದು ನಾವು ಈ ಕ್ಷೇತ್ರದಲ್ಲಿ  ಗುರುತಿಸಿಕೊಳ್ಳಲು ಕಾರಣ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಕೂರು ಕೃಷ್ಣಯಾಜಿ ಅಭಿಮತ ವ್ಯಕ್ತಪಡಿಸಿದರು.

ಅವರು ಉದಯವಾಣಿ ಜೊತೆ ಮಾತನಾಡಿ, ಹಿರಿಯರು ಕೊಟ್ಟ ಕೊಡುಗೆ ನೆನಪಿಡಬೇಕು. ಇದೇ ಕಾರಣಕ್ಕೆ ಯಾಜಿ ಯಕ್ಷ ಮಿತ್ರ ಮಂಡಳಿ ಪ್ರತೀವರ್ಷ ಪ್ರಶಸ್ತಿ ಜೊತೆ ಆರ್ಥಿಕ ನೆರವನ್ನೂ ನೀಡುತ್ತಿದೆ. ಕಳೆದ 13 ವರ್ಷದಿಂದ ನಿರಂತರವಾಗಿ ಬಡ ಅಶಕ್ತ ಕಲಾವಿದರಿಗೆ ನೀಡುವ ಮೂಲಕ ನಾನು ಸಾರ್ಥಕ್ಯ ಕಾಣುತ್ತಿದ್ದೇನೆ. ವಿಶೇಷ ಎಂದರೆ ಈವರೆಗೆ ಈ ಯಾಜಿ ಒಂದು ರೂ. ನೀಡಿಲ್ಲ. ಕಲಾಭಿಮಾನಿಗಳೇ ಈ ಪುರಸ್ಕಾರ ಸಮಾರಂಭ ನಡೆಸಿಕೊಡುತ್ತಿದ್ದಾರೆ ಎಂದು ಹೇಳಿದರು.

ಯಕ್ಷಗಾನದಲ್ಲಿ ಮುಂದಿನ ತಲೆಮಾರಿನಲ್ಲಿ ಹೊಸಬರ ಜೊತೆಗೆ ಅಧ್ಯಯನ, ಅಧ್ಯಾಪನ ಮಾಡುವುದನ್ನೂ ರೂಢಿಸಿಕೊಳ್ಳಬೇಕು ಎನ್ನುವ ಯಾಜಿ, ಈ ಪ್ರಶಸ್ತಿ ಪ್ರದಾನ ನನ್ನ ನಂತರವೂ ಮುಂದುವರಿಯಬೇಕು. ನನಗೆ ಗಂಡು ಮಕ್ಕಳಿಲ್ಲ. ಮಗಳ ಮಗ ಅಭಿಷೇಕ ಹಾಗೂ ಅವರ ತಂದೆ ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ ಎಂದೂ ಹೇಳಿದರು.

ಪ್ರಶಸ್ತಿ ಪ್ರದಾನ: ಬಡಗುತಿಟ್ಟಿನ ರಂಗಸ್ಥಳದಲ್ಲಿ ಐದು ದಶಕಗಳ ಕಾಲ ಎರಡನೇ ಪ್ರಧಾನ ವೇಷಧಾರಿಯಾಗಿ ರಂಗಸ್ಥಳ ಆಳಿದ ಕೊಪ್ಪಾಟೆ ಮುತ್ತು ಗೌಡರಿಗೆ ಯಾಜಿ ಯಕ್ಷಮಿತ್ರ ಪ್ರಶಸ್ತಿ ಹಾಗೂ 25 ಸಾವಿರ ರೂ. ಅರ್ಪಿಸುವ ಯಕ್ಷ ಯುಗಾದಿ ಸಮಾರಂಭ ಮಾ.18ರಂದು ಸಂಜೆ 4ಕ್ಕೆ ನಗರದ ತೋಟಗಾರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ವಿ.ಉಮಾಕಾಂತ ಭಟ್ಟ ಮೇಲುಕೋಟೆ, ಶಾಂತಾರಾಂ ಹೆಗಡೆ ಶೀಗೇಹಳ್ಳಿ, ಪ್ರೊ| ಎಂ.ಎ.ಹೆಗಡೆ ದಂಟಕಲ್‌, ಭೀಮಣ್ಣ ನಾಯ್ಕ, ಉಪೇಂದ್ರ ಪೈ
ಇತರರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ಬಳಿಕ ಶ್ರೀಕೃಷ್ಣ ಸಂಧಾನ ಯಕ್ಷಗಾನ ಪ್ರದರ್ಶನ ಕೂಡ ಹಮ್ಮಿಕೊಳ್ಳಲಾಗಿದೆ.

ಯಕ್ಷಗಾನ: ಶ್ರೀ ಕೃಷ್ಣ ಸಂಧಾನ ಆಟದ ಹಿಮ್ಮೇಳದಲ್ಲಿ ಬಡಗಿನ ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ್‌ ಯಲ್ಲಾಪುರ, ಗಣೇಶ ಗಾಂವಕರ್‌ ಸಹಕಾರ ನೀಡಲಿದ್ದಾರೆ. ಮುಮ್ಮೇಳದಲ್ಲಿ ಕೃಷ್ಣಯಾಜಿ ಬಳಕೂರು, ರಾಮಚಂದ್ರ ಹೆಗಡೆ ಕೊಂಡದಕುಳಿ, ಪ್ರದೀಪ ಸಾಮಗ, ಶ್ರೀಪಾದ ಹೆಗಡೆ ಹಡಿನಬಾಳ, ಅಶೋಕ ಭಟ್ಟ ಸಿದ್ದಾಪುರ, ಶ್ರೀಧರ ಹೆಗಡೆ ಚಪ್ಪರಮನೆ, ಹಮ್ಮಣ್ಣ ಗಾಂವಕರ್‌, ವೆಂಕಟೇಶ ಹೆಗಡೆ,  ಸಂತೋಷ ಹೆಗಡೆ, ಅಭಿಷೇಕ ಅಡಿ ಹಾಗೂ ಇತರ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.