ಹಿರಿಯರ ಕೊಡುಗೆಯಿಂದ ಎತ್ತರಕ್ಕೇರಿದ ಯಕ್ಷರಂಗ


Team Udayavani, Mar 16, 2018, 6:09 PM IST

2.jpg

ಶಿರಸಿ: ಯಕ್ಷರಂಗ ಇಂದು ಇಷ್ಟು ಎತ್ತರದಲ್ಲಿ ಇರಲು, ನಾವು ಯಕ್ಷರಂಗದಿಂದ ಗೌರವ ಪಡೆಯಲು ಹಿರಿಯರು ಕೊಟ್ಟ ಅನನ್ಯ ಕೊಡುಗೆ ಕಾರಣ. ಅವರು ಅಷ್ಟು ಶ್ರಮಿಸಿದ್ದರ ಪರಿಣಾಮವೇ ಇಂದು ನಾವು ಈ ಕ್ಷೇತ್ರದಲ್ಲಿ  ಗುರುತಿಸಿಕೊಳ್ಳಲು ಕಾರಣ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಕೂರು ಕೃಷ್ಣಯಾಜಿ ಅಭಿಮತ ವ್ಯಕ್ತಪಡಿಸಿದರು.

ಅವರು ಉದಯವಾಣಿ ಜೊತೆ ಮಾತನಾಡಿ, ಹಿರಿಯರು ಕೊಟ್ಟ ಕೊಡುಗೆ ನೆನಪಿಡಬೇಕು. ಇದೇ ಕಾರಣಕ್ಕೆ ಯಾಜಿ ಯಕ್ಷ ಮಿತ್ರ ಮಂಡಳಿ ಪ್ರತೀವರ್ಷ ಪ್ರಶಸ್ತಿ ಜೊತೆ ಆರ್ಥಿಕ ನೆರವನ್ನೂ ನೀಡುತ್ತಿದೆ. ಕಳೆದ 13 ವರ್ಷದಿಂದ ನಿರಂತರವಾಗಿ ಬಡ ಅಶಕ್ತ ಕಲಾವಿದರಿಗೆ ನೀಡುವ ಮೂಲಕ ನಾನು ಸಾರ್ಥಕ್ಯ ಕಾಣುತ್ತಿದ್ದೇನೆ. ವಿಶೇಷ ಎಂದರೆ ಈವರೆಗೆ ಈ ಯಾಜಿ ಒಂದು ರೂ. ನೀಡಿಲ್ಲ. ಕಲಾಭಿಮಾನಿಗಳೇ ಈ ಪುರಸ್ಕಾರ ಸಮಾರಂಭ ನಡೆಸಿಕೊಡುತ್ತಿದ್ದಾರೆ ಎಂದು ಹೇಳಿದರು.

ಯಕ್ಷಗಾನದಲ್ಲಿ ಮುಂದಿನ ತಲೆಮಾರಿನಲ್ಲಿ ಹೊಸಬರ ಜೊತೆಗೆ ಅಧ್ಯಯನ, ಅಧ್ಯಾಪನ ಮಾಡುವುದನ್ನೂ ರೂಢಿಸಿಕೊಳ್ಳಬೇಕು ಎನ್ನುವ ಯಾಜಿ, ಈ ಪ್ರಶಸ್ತಿ ಪ್ರದಾನ ನನ್ನ ನಂತರವೂ ಮುಂದುವರಿಯಬೇಕು. ನನಗೆ ಗಂಡು ಮಕ್ಕಳಿಲ್ಲ. ಮಗಳ ಮಗ ಅಭಿಷೇಕ ಹಾಗೂ ಅವರ ತಂದೆ ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ ಎಂದೂ ಹೇಳಿದರು.

ಪ್ರಶಸ್ತಿ ಪ್ರದಾನ: ಬಡಗುತಿಟ್ಟಿನ ರಂಗಸ್ಥಳದಲ್ಲಿ ಐದು ದಶಕಗಳ ಕಾಲ ಎರಡನೇ ಪ್ರಧಾನ ವೇಷಧಾರಿಯಾಗಿ ರಂಗಸ್ಥಳ ಆಳಿದ ಕೊಪ್ಪಾಟೆ ಮುತ್ತು ಗೌಡರಿಗೆ ಯಾಜಿ ಯಕ್ಷಮಿತ್ರ ಪ್ರಶಸ್ತಿ ಹಾಗೂ 25 ಸಾವಿರ ರೂ. ಅರ್ಪಿಸುವ ಯಕ್ಷ ಯುಗಾದಿ ಸಮಾರಂಭ ಮಾ.18ರಂದು ಸಂಜೆ 4ಕ್ಕೆ ನಗರದ ತೋಟಗಾರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ವಿ.ಉಮಾಕಾಂತ ಭಟ್ಟ ಮೇಲುಕೋಟೆ, ಶಾಂತಾರಾಂ ಹೆಗಡೆ ಶೀಗೇಹಳ್ಳಿ, ಪ್ರೊ| ಎಂ.ಎ.ಹೆಗಡೆ ದಂಟಕಲ್‌, ಭೀಮಣ್ಣ ನಾಯ್ಕ, ಉಪೇಂದ್ರ ಪೈ
ಇತರರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ. ಬಳಿಕ ಶ್ರೀಕೃಷ್ಣ ಸಂಧಾನ ಯಕ್ಷಗಾನ ಪ್ರದರ್ಶನ ಕೂಡ ಹಮ್ಮಿಕೊಳ್ಳಲಾಗಿದೆ.

ಯಕ್ಷಗಾನ: ಶ್ರೀ ಕೃಷ್ಣ ಸಂಧಾನ ಆಟದ ಹಿಮ್ಮೇಳದಲ್ಲಿ ಬಡಗಿನ ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ್‌ ಯಲ್ಲಾಪುರ, ಗಣೇಶ ಗಾಂವಕರ್‌ ಸಹಕಾರ ನೀಡಲಿದ್ದಾರೆ. ಮುಮ್ಮೇಳದಲ್ಲಿ ಕೃಷ್ಣಯಾಜಿ ಬಳಕೂರು, ರಾಮಚಂದ್ರ ಹೆಗಡೆ ಕೊಂಡದಕುಳಿ, ಪ್ರದೀಪ ಸಾಮಗ, ಶ್ರೀಪಾದ ಹೆಗಡೆ ಹಡಿನಬಾಳ, ಅಶೋಕ ಭಟ್ಟ ಸಿದ್ದಾಪುರ, ಶ್ರೀಧರ ಹೆಗಡೆ ಚಪ್ಪರಮನೆ, ಹಮ್ಮಣ್ಣ ಗಾಂವಕರ್‌, ವೆಂಕಟೇಶ ಹೆಗಡೆ,  ಸಂತೋಷ ಹೆಗಡೆ, ಅಭಿಷೇಕ ಅಡಿ ಹಾಗೂ ಇತರ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.