ಆರ್‌ಟಿಇ “ಗಡಿ’ ತಾರತಮ್ಯ ಸಲ್ಲ


Team Udayavani, Mar 16, 2018, 6:18 PM IST

4.jpg

ಶಿರಸಿ: ಸರ್ವರಿಗೂ ಗುಣಮಟ್ಟದ ಶಿಕ್ಷಣ, ಅನುಕೂಲ ಇರದವರಿಗೂ ಖಾಸಗಿ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ಅನುಷ್ಠಾನಕ್ಕೆ ತರಲಾದ ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆದರೆ, ಈ ಬಾರಿಯಿಂದ ಆರ್‌ಟಿಇ ಕಾಯಿದೆಯಲ್ಲಿ ಪೇಟೆಗೊಂದು ಹಳ್ಳಿಗೊಂದು ನೀತಿ ಅನುಷ್ಠಾನಕ್ಕೆ ತಂದು ಗೊಂದಲ, ಅಸಮಾಧಾನ ಸೃಷ್ಟಿಸಿದೆ. ಆರ್‌ಟಿಇ ಮೂಲಕ ಪ್ರವೇಶ ಪಡೆದು ಪೇಟೆ ಮಕ್ಕಳು ಇನ್ನಷ್ಟು ಗುಣಮಟ್ಟದ ಶಾಲೆಗೆ ಹೋಗಬಹುದು. ಆದರೆ, ಹಳ್ಳಿ ಮಕ್ಕಳಿಗೆ ಪಕ್ಕದಲ್ಲೇ ಮನೆಯ ಸಮೀಪವೇ ಖಾಸಗಿ ಶಾಲೆ ಇದ್ದರೂ ಅವಕಾಶ ವಂಚಿತರಾಗುವಂತೆ ಆಗಿದೆ. ಸರಕಾರವೇ ದ್ವಂದ್ವ ನೀತಿಯ ಮೂಲಕ ಆರ್‌ಟಿಇ ಕಾಯಿದೆಯ ಮೂಲ ಆಶಯಕ್ಕೇ ಕೊಡಲಿ ಏಟು ನೀಡುವಂತೆ ಮಾಡಿದೆ. 

ಏನಿದು ಗಡಿ ವಿವಾದ?
ಸಾರ್ವಜನಿಕ ಶಿಕ್ಷಣ ಇಲಾಖೆ ಕಾಯಿದೆ ಅನುಷ್ಠಾನ ಇನ್ನಷ್ಟು ಬಲಗೊಳಿಸಲು ಮಾರ್ಗಸೂಚಿ ಹೊರಡಿಸಿ ಇಲಾಖೆ ಆಯುಕ್ತರು ಆದೇಶ ಮಾಡಿದ್ದಾರೆ. ಕಳೆದ ಜನವರಿ 23ಕ್ಕೆ ರಕಾರವು ಇಡೀ 36 ಪಿಜಿಸಿ 2018 ಆದೇಶ ಮಾಡಿ ಹೊಸ ಸುತ್ತೋಲೆ ಹೊರಡಿಸಿದೆ. ಯಾವ ಶಾಲೆಗಳಿಗೆ ಮಕ್ಕಳನ್ನು ಆರ್‌ಟಿಇ ಶಿಕ್ಷಣದ ಮೂಲಕ ಸೇರ್ಪಡೆ ಮಾಡಬೇಕು ಎಂಬುದಕ್ಕೆ “ಗಡಿ’ ನಿರ್ಧರಿಸಿದೆ. ನಗರ ವ್ಯಾಪ್ತಿಯಲ್ಲಿ ಪಟ್ಟಣ ಗಡಿಯಾದರೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾರ್ಡ್‌ ಗಡಿಯಾಗಿದೆ. ಪ್ರಥಮ, ದ್ವಿತೀಯ, ತೃತೀಯ ಅಂತ ಆಯ್ಕೆ
ಮಾಡಿ ಆರ್‌ಟಿಇ ಮೂಲಕ ಶೇ.25 ಸಿಟು ಕಾಯ್ದಿರಿಸುವಲ್ಲಿ ಅರ್ಜಿ ಹಾಕಿಕೊಳ್ಳಬಹುದು.

ಹಳ್ಳಿಗೆ ಅನ್ಯಾಯ: ಆದರೆ, ಅನ್ಯಾಯ ಆಗುತ್ತಿರುವ ಗ್ರಾಮೀಣ ಭಾಗಕ್ಕೆ. ನಿಜಕ್ಕೂ ಶೈಕ್ಷಣಿಕ ಗುಣಮಟ್ಟದ ಕೊರತೆ
ಅನುಭವಿಸುತ್ತಿರುವ, ಕಿ.ಮೀ. ದೂರ ನಡೆದು ಓದು ಮಾಡಬೇಕಾದ ಹಳ್ಳಿ ಮಕ್ಕಳಿಗೆ ಶಿಕ್ಷಣ ಇಲಾಖೆ ನಿಗದಿಪಡಿಸಿದ ಗಡಿ ಬಿಸಿ ಮುಟ್ಟಿಸಿದೆ. ಈ ಮೊದಲಿದ್ದ 3 ಕಿಮೀ ಗಡಿಯ ವ್ಯಾಪ್ತಿಯನ್ನು ಸಡಿಲಿಸಿ, ಮಗು ಇದ್ದಲ್ಲೇ ಶಿಕ್ಷಣ ಎಂಬ ಹೊಸ ಆದೇಶ ಮಾಡಿದೆ. ಸರಕಾರದ ಈ ಆದೇಶದ ಪ್ರಕಾರ ಹಳ್ಳಿ ಶಾಲೆ ಮಕ್ಕಳಿಗೆ ಆರ್‌ಟಿಇ ಅರ್ಜಿಗೆ ಕಂದಾಯ ಗ್ರಾಮ ಗಡಿ ನಿಗದಿಯಾಗಿದೆ. ಒಂದು ಗ್ರಾಮದ ವ್ಯಾಪ್ತಿಯಲ್ಲಿ ಇದ್ದ ಗಡಿ ಮೀರಿ ಮನೆಯ ಪಕ್ಕವೇ ಇನ್ನೊಂದು ಕಂದಾಯ ಗ್ರಾಮದಲ್ಲಿ ಗುಣಮಟ್ಟದ ಶಿಕ್ಷಣ ಕೊಡುವ ಖಾಸಗಿ ಶಾಲೆ ಇದ್ದರೆ ಅಲ್ಲಿ ಅರ್ಜಿ ಹಾಕುವಂತಿಲ್ಲ. ಅರ್ಜಿ ಹಾಕಿದರೂ ಕಂಪ್ಯೂಟರ್‌ ಒಪ್ಪಿಗೆ ಕೊಡಲ್ಲ. ಇದನ್ನು ಈ ಬಾರಿಯಿಂದ ಕಡ್ಡಾಯವಾಗಿ ಕೊಡಬೇಕಾದ ಮಗುವಿನ ಆಧಾರ ಕಾರ್ಡ್‌ ಸಲ್ಲಿಕೆ ಮೂಲಕ ಗುರುತು ಮಾಡಲಾಗುತ್ತದೆ. ಮಗು ವಾಸಿಸುವ ಕಂದಾಯ
ಗ್ರಾಮದಲ್ಲಿ ಖಾಸಗಿ ಶಾಲೆ ಇರದೇ ಇದ್ದರೆ ಸರಕಾರಿ ಶಾಲೆಗೆ ಬನ್ನಿ ಇಲ್ಲೇ ಗುಣಮಟ್ಟದ ಶಿಕ್ಷಣ ಕೊಡುತ್ತೇವೆ ಎನ್ನುತ್ತದೆ ಸರಕಾರ.

ಸರಕಾರ ಹೋಬಳಿ ಅಥವಾ ಗ್ರಾಮ ಪಂಚಾಯ್ತಿ ಮಟ್ಟಕ್ಕಾದರೂ ಗಡಿ ನಿಗದಿ ಮಾಡಬೇಕು. ಅಥವಾ ಮೊದಲಿದ್ದ 3 ಕಿಮೀಯೇ ಉಳಿಯಲಿ.
ಚಂದ್ರ ಎಸಳೆ, ತಾಪಂ ಉಪಾಧ್ಯಕ್ಷ, ಶಿರಸಿ

ಆಧಾರ್‌ ಕಾರ್ಡ್‌ನಲ್ಲಿ ಇರುವ ವಿಳಾಸ ಹಾಗೂ ಆ ಕಂದಾಯ ಗ್ರಾಮವೇ ಆರ್‌ಟಿಇ ಅರ್ಜಿ ಸಲ್ಲಿಸಲು ಗಡಿ ಎಂದು ಸರಕಾರ ಆದೇಶ
ಮಾಡಿದೆ. ಇದರಿಂದ ಕೆಲವು ಕಡೆ ಸಮಸ್ಯೆ ಆಗಿದ್ದು ನಮ್ಮ ಗಮನಕ್ಕೂ ಬಂದಿದೆ. ಸರಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಇದೆ. ಅಲ್ಲೇ ಬರ್ಲಿ ಮಗು. 

 ಹೆಸರು ಹೇಳದ ಅಧಿಕಾರಿ, ಶಿಕ್ಷಣ ಇಲಾಖೆ

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.