ಆರ್‌ಟಿಇ “ಗಡಿ’ ತಾರತಮ್ಯ ಸಲ್ಲ


Team Udayavani, Mar 16, 2018, 6:18 PM IST

4.jpg

ಶಿರಸಿ: ಸರ್ವರಿಗೂ ಗುಣಮಟ್ಟದ ಶಿಕ್ಷಣ, ಅನುಕೂಲ ಇರದವರಿಗೂ ಖಾಸಗಿ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ಅನುಷ್ಠಾನಕ್ಕೆ ತರಲಾದ ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆದರೆ, ಈ ಬಾರಿಯಿಂದ ಆರ್‌ಟಿಇ ಕಾಯಿದೆಯಲ್ಲಿ ಪೇಟೆಗೊಂದು ಹಳ್ಳಿಗೊಂದು ನೀತಿ ಅನುಷ್ಠಾನಕ್ಕೆ ತಂದು ಗೊಂದಲ, ಅಸಮಾಧಾನ ಸೃಷ್ಟಿಸಿದೆ. ಆರ್‌ಟಿಇ ಮೂಲಕ ಪ್ರವೇಶ ಪಡೆದು ಪೇಟೆ ಮಕ್ಕಳು ಇನ್ನಷ್ಟು ಗುಣಮಟ್ಟದ ಶಾಲೆಗೆ ಹೋಗಬಹುದು. ಆದರೆ, ಹಳ್ಳಿ ಮಕ್ಕಳಿಗೆ ಪಕ್ಕದಲ್ಲೇ ಮನೆಯ ಸಮೀಪವೇ ಖಾಸಗಿ ಶಾಲೆ ಇದ್ದರೂ ಅವಕಾಶ ವಂಚಿತರಾಗುವಂತೆ ಆಗಿದೆ. ಸರಕಾರವೇ ದ್ವಂದ್ವ ನೀತಿಯ ಮೂಲಕ ಆರ್‌ಟಿಇ ಕಾಯಿದೆಯ ಮೂಲ ಆಶಯಕ್ಕೇ ಕೊಡಲಿ ಏಟು ನೀಡುವಂತೆ ಮಾಡಿದೆ. 

ಏನಿದು ಗಡಿ ವಿವಾದ?
ಸಾರ್ವಜನಿಕ ಶಿಕ್ಷಣ ಇಲಾಖೆ ಕಾಯಿದೆ ಅನುಷ್ಠಾನ ಇನ್ನಷ್ಟು ಬಲಗೊಳಿಸಲು ಮಾರ್ಗಸೂಚಿ ಹೊರಡಿಸಿ ಇಲಾಖೆ ಆಯುಕ್ತರು ಆದೇಶ ಮಾಡಿದ್ದಾರೆ. ಕಳೆದ ಜನವರಿ 23ಕ್ಕೆ ರಕಾರವು ಇಡೀ 36 ಪಿಜಿಸಿ 2018 ಆದೇಶ ಮಾಡಿ ಹೊಸ ಸುತ್ತೋಲೆ ಹೊರಡಿಸಿದೆ. ಯಾವ ಶಾಲೆಗಳಿಗೆ ಮಕ್ಕಳನ್ನು ಆರ್‌ಟಿಇ ಶಿಕ್ಷಣದ ಮೂಲಕ ಸೇರ್ಪಡೆ ಮಾಡಬೇಕು ಎಂಬುದಕ್ಕೆ “ಗಡಿ’ ನಿರ್ಧರಿಸಿದೆ. ನಗರ ವ್ಯಾಪ್ತಿಯಲ್ಲಿ ಪಟ್ಟಣ ಗಡಿಯಾದರೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾರ್ಡ್‌ ಗಡಿಯಾಗಿದೆ. ಪ್ರಥಮ, ದ್ವಿತೀಯ, ತೃತೀಯ ಅಂತ ಆಯ್ಕೆ
ಮಾಡಿ ಆರ್‌ಟಿಇ ಮೂಲಕ ಶೇ.25 ಸಿಟು ಕಾಯ್ದಿರಿಸುವಲ್ಲಿ ಅರ್ಜಿ ಹಾಕಿಕೊಳ್ಳಬಹುದು.

ಹಳ್ಳಿಗೆ ಅನ್ಯಾಯ: ಆದರೆ, ಅನ್ಯಾಯ ಆಗುತ್ತಿರುವ ಗ್ರಾಮೀಣ ಭಾಗಕ್ಕೆ. ನಿಜಕ್ಕೂ ಶೈಕ್ಷಣಿಕ ಗುಣಮಟ್ಟದ ಕೊರತೆ
ಅನುಭವಿಸುತ್ತಿರುವ, ಕಿ.ಮೀ. ದೂರ ನಡೆದು ಓದು ಮಾಡಬೇಕಾದ ಹಳ್ಳಿ ಮಕ್ಕಳಿಗೆ ಶಿಕ್ಷಣ ಇಲಾಖೆ ನಿಗದಿಪಡಿಸಿದ ಗಡಿ ಬಿಸಿ ಮುಟ್ಟಿಸಿದೆ. ಈ ಮೊದಲಿದ್ದ 3 ಕಿಮೀ ಗಡಿಯ ವ್ಯಾಪ್ತಿಯನ್ನು ಸಡಿಲಿಸಿ, ಮಗು ಇದ್ದಲ್ಲೇ ಶಿಕ್ಷಣ ಎಂಬ ಹೊಸ ಆದೇಶ ಮಾಡಿದೆ. ಸರಕಾರದ ಈ ಆದೇಶದ ಪ್ರಕಾರ ಹಳ್ಳಿ ಶಾಲೆ ಮಕ್ಕಳಿಗೆ ಆರ್‌ಟಿಇ ಅರ್ಜಿಗೆ ಕಂದಾಯ ಗ್ರಾಮ ಗಡಿ ನಿಗದಿಯಾಗಿದೆ. ಒಂದು ಗ್ರಾಮದ ವ್ಯಾಪ್ತಿಯಲ್ಲಿ ಇದ್ದ ಗಡಿ ಮೀರಿ ಮನೆಯ ಪಕ್ಕವೇ ಇನ್ನೊಂದು ಕಂದಾಯ ಗ್ರಾಮದಲ್ಲಿ ಗುಣಮಟ್ಟದ ಶಿಕ್ಷಣ ಕೊಡುವ ಖಾಸಗಿ ಶಾಲೆ ಇದ್ದರೆ ಅಲ್ಲಿ ಅರ್ಜಿ ಹಾಕುವಂತಿಲ್ಲ. ಅರ್ಜಿ ಹಾಕಿದರೂ ಕಂಪ್ಯೂಟರ್‌ ಒಪ್ಪಿಗೆ ಕೊಡಲ್ಲ. ಇದನ್ನು ಈ ಬಾರಿಯಿಂದ ಕಡ್ಡಾಯವಾಗಿ ಕೊಡಬೇಕಾದ ಮಗುವಿನ ಆಧಾರ ಕಾರ್ಡ್‌ ಸಲ್ಲಿಕೆ ಮೂಲಕ ಗುರುತು ಮಾಡಲಾಗುತ್ತದೆ. ಮಗು ವಾಸಿಸುವ ಕಂದಾಯ
ಗ್ರಾಮದಲ್ಲಿ ಖಾಸಗಿ ಶಾಲೆ ಇರದೇ ಇದ್ದರೆ ಸರಕಾರಿ ಶಾಲೆಗೆ ಬನ್ನಿ ಇಲ್ಲೇ ಗುಣಮಟ್ಟದ ಶಿಕ್ಷಣ ಕೊಡುತ್ತೇವೆ ಎನ್ನುತ್ತದೆ ಸರಕಾರ.

ಸರಕಾರ ಹೋಬಳಿ ಅಥವಾ ಗ್ರಾಮ ಪಂಚಾಯ್ತಿ ಮಟ್ಟಕ್ಕಾದರೂ ಗಡಿ ನಿಗದಿ ಮಾಡಬೇಕು. ಅಥವಾ ಮೊದಲಿದ್ದ 3 ಕಿಮೀಯೇ ಉಳಿಯಲಿ.
ಚಂದ್ರ ಎಸಳೆ, ತಾಪಂ ಉಪಾಧ್ಯಕ್ಷ, ಶಿರಸಿ

ಆಧಾರ್‌ ಕಾರ್ಡ್‌ನಲ್ಲಿ ಇರುವ ವಿಳಾಸ ಹಾಗೂ ಆ ಕಂದಾಯ ಗ್ರಾಮವೇ ಆರ್‌ಟಿಇ ಅರ್ಜಿ ಸಲ್ಲಿಸಲು ಗಡಿ ಎಂದು ಸರಕಾರ ಆದೇಶ
ಮಾಡಿದೆ. ಇದರಿಂದ ಕೆಲವು ಕಡೆ ಸಮಸ್ಯೆ ಆಗಿದ್ದು ನಮ್ಮ ಗಮನಕ್ಕೂ ಬಂದಿದೆ. ಸರಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಇದೆ. ಅಲ್ಲೇ ಬರ್ಲಿ ಮಗು. 

 ಹೆಸರು ಹೇಳದ ಅಧಿಕಾರಿ, ಶಿಕ್ಷಣ ಇಲಾಖೆ

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.