ಶಾಶ್ವತದೆಡೆ ತುಡಿಯುವವರು ಸನ್ಯಾಸಿಗಳು: ರಾಘವೇಶ್ವರ ಶ್ರೀ


Team Udayavani, Mar 23, 2018, 8:07 PM IST

4.jpg

ಸಿದ್ದಾಪುರ: ಸೀಮಿತದಿಂದ ಅಸೀಮತೆಯೆಡೆಗೆ ಸಾಗಲು ಸನ್ಯಾಸ ಮಾರ್ಗ ಕಲ್ಪಿಸುತ್ತದೆ. ಜೀವನವನ್ನು, ಸ್ವಂತವನ್ನು ಪಕ್ಕಕ್ಕಿಟ್ಟು ಸಂತನಾಗಬೇಕಾಗುತ್ತದೆ. ಸನ್ಯಾಸವು ತ್ಯಾಗದ ಅಡಿಪಾಯದ ಮೇಲೆ ಮೈದಳೆಯುತ್ತದೆ. ಅಶಾಶ್ವತವಾದುದನ್ನೆಲ್ಲಾ ಬಿಟ್ಟು ಶಾಶ್ವತದೆಡೆಗೆ ತುಡಿಯುವವರು ಸನ್ಯಾಸಿಗಳಾಗುತ್ತಾರೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು
ಹೇಳಿದರು.

ಪಟ್ಟಣದ ಗೌತಮದಲ್ಲಿ ತಮ್ಮ ಸನ್ಯಾಸಗ್ರಹಣದ 25ನೇ ವರ್ಷದ ಪಾದಾರ್ಪಣೆ ದಿನದಂದು ದುರ್ಬಲ ಕುಟುಂಬವೊಂದನ್ನು ದತ್ತು ಪಡೆದು ಆ ಕುಟುಂಬವನ್ನು ಜೀವದಾನದ ಮೂಲಕ ಪೋಷಿಸುವ ವಾತ್ಸಲ್ಯ ದಿನವನ್ನಾಗಿ ಸನ್ಯಾಸಗ್ರಹಣ ದಿನಾಚರಣೆ ನಡೆಸಿದ ಶ್ರೀಗಳು ಮಠದ ಜೀವನದಾನ ಟ್ರಸ್ಟ್‌ ಮೂಲಕ ಉಪ್ಪಿನಂಗಡಿ ವಲಯ ಕಾಸರಗೋಡ ಮುಳಿಯಾಲದ ಧರ್ಮಸ್ಥಳ ನಿವಾಸಿಯಾಗಿದ್ದು ಕಿಡ್ನಿ ವೈಫಲ್ಯದಿಂದ ಕಳೆದ ಆರು ವರ್ಷಗಳಿಂದ ಬಳಲುತ್ತಿರುವ ಗೋಪಾಲಕೃಷ್ಣ ಭಟ್‌ ರಿಗೆ ಜೀವನದಾನವನ್ನು ಅನುಗ್ರಹಿಸಿ
ಆಶೀರ್ವಚನ ನೀಡುತ್ತಿದ್ದರು.

ಸನ್ಯಾಸ ಹುಲಿಯ ಸವಾರಿಯಂತೆ ಅದನ್ನು ನಡೆಸಲು ಸಾಕಷ್ಟು ಶಕ್ತಿಬೇಕು, ಪತನವಾದರೆ ಹುಲಿಯೇ ತಿನ್ನಬಹುದು ಎಂದು ನಮಗೆ ಸನ್ಯಾಸದೀಕ್ಷೆ ನೀಡಿದ ಹಿರಿಯ ಶ್ರೀಗಳು ಹೇಳುತ್ತಿದ್ದರು. ಪೂರ್ವಾಶ್ರಮದಲ್ಲಿರುವಾಗ ಸನ್ಯಾಸ ಮುಳ್ಳಿನ ಕಿರೀಟವೆಂದೂ ಅನೇಕರು
ಎಚ್ಚರಿಸಿದ್ದರು. ಆದರೆ ನಾವು ಯಾವುದೇ ಅಡೆತಡೆಯನ್ನೂ ಮೀರಿ ಇಷ್ಟು ದೂರ ಬರಲು ಸಾಧ್ಯವಾಯಿತು. ನಮಗೆ ಸನ್ಯಾಸವೇನೂ ಮುಳ್ಳಿನ ಕಿರೀಟವೆನಿಸಲಿಲ್ಲ. ನಾವು ಅನೇಕ ವಿಧಾಯಕ ಕಾರ್ಯಕ್ರಮಗಳ ಮೂಲಕ ಅರ್ಧಮಂಡಲ (24 ವರ್ಷ) ಪೂರೈಸಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ಜೀವನದಾನ ಟ್ರಸ್ಟಿನ ಅಧ್ಯಕ್ಷ, ಶ್ರೀಮಠದ ಕಾರ್ಯನಿರ್ವಹಣಾ ಅಧಿಕಾರಿ ಕೆ.ಜಿ.ಭಟ್ಟ ಮಾತನಾಡಿದರು. ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ರಾಮಪ್ಪ ಹಾಗೂ ಪ್ರಧಾನ ಅರ್ಚಕ ವೇ.ಶೇಷಗಿರಿ ಭಟ್ಟ ಉಪಸ್ಥಿತರಿದ್ದರು. ಜೀವನದಾನ ಅನುಗ್ರಹ ಪಡೆದ
ಗೋಪಾಲಕೃಷ್ಣ ಭಟ್ಟರ ಧರ್ಮಪತ್ನಿ ಮೀನಾಕ್ಷಿ, ಮಕ್ಕಳಾದ ಅನುರಾಧಾ, ಚೈತ್ರಾ ಹಾಗೂ ಅಳಿಯ ಸುರೇಶ ಪಾಲ್ಗೊಂಡಿದ್ದರು. ಆರ್‌.ಎಸ್‌.ಹೆಗಡೆ ಹರಗಿ ಪ್ರಾಸ್ತಾವಿಕ ಮಾತನಾಡಿದರು. ಗುರುಭಿಕ್ಷಾ ಸೇವೆ ನಡೆಸಿದ ಅನಂತ ರಾಮಯ್ಯ ಹೆಗಡೆ, ಪಾರ್ವತಿ
ಹೆಗಡೆ ದಂಪತಿ ಸಭಾಪೂಜೆ ನೆರವೇರಿಸಿದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.