ವರ್ಷದ ಸರ್ವಶ್ರೇಷ್ಠ ವಿದ್ಯಾರ್ಥಿ ಪುರಸ್ಕಾರ


Team Udayavani, Mar 23, 2018, 8:09 PM IST

5.jpg

ಕುಮಟಾ: ಇಲ್ಲಿನ ಕೆನರಾ ಕಾಲೇಜು ಸೊಸೈಟಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಏಳು ವಿದ್ಯಾರ್ಥಿಗಳನ್ನು ಗುರುತಿಸಿ ವರ್ಷದ
ಸರ್ವಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ಪ್ರದಾನ ಸಮಾರಂಭ ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನ ಆವರಣದಲ್ಲಿ ನಡೆಯಿತು.

ಪಿಯು ವಿಜ್ಞಾನ ವಿಭಾಗದಿಂದ ರಾಮದಾಸ ಕಮಲಾಕಾಂತ ಕಾಮತ, ಪಿಯು ವಿಭಾಗದಿಂದ ಸಿದ್ಧಾರ್ಥ ಅರುಣ ಕುಮಟಾಕರ, 
ಡಿಪ್ಲೋಮಾದಿಂದ ಸಂದೇಶ ಕೃಷ್ಣ ಶೆಟ್ಟಿ, ಬಿಬಿಎದಿಂದ ಗುರುಪ್ರಸಾದ ಮಹಾಬಲೇಶ್ವರ ಹೆಗಡೆ, ವಾಣಿಜ್ಯ ಪದವಿ ವಿಭಾಗದಿಂದ ಭಾಸ್ಕರ ಈಶ್ವರ ಮರಾಠಿ, ವಿಜ್ಞಾನ ಪದವಿ ವಿಭಾಗದಿಂದ ಅಪೂರ್ವ ಗೋಪಾಲ ಹೆಗಡೆ ಹಾಗೂ ಬಿಎಡ್‌ನಿಂದ ಮಾಝಿ°ಯಾ ಮಹಮ್ಮದ ಗೌಸ್‌ ಬೇಗ್‌ ವರ್ಷದ ಸರ್ವಶ್ರೇಷ್ಠ ವಿದ್ಯಾರ್ಥಿ ಪುರಸ್ಕಾರಕ್ಕೆ ಪಾತ್ರರಾದರು.

ಭಟ್ಕಳದ ಗುರುಸುಧೀಂದ್ರ ಕಾಲೇಜಿನ ಪ್ರಾಚಾರ್ಯ ನಾಗೇಶ ಭಟ್ಟ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿ ದೆಸೆಯಲ್ಲಿನ ನಿಮ್ಮ 
ಧ್ಯೇಯಗಳೇ ಮುಂದೆ ನಿಮ್ಮ ಬದುಕಿನ ಅಕ್ಷಾಂಶ ರೇಖಾಂಶಗಳನ್ನು ನಿರ್ಧರಿಸುತ್ತವೆ. ಆತ್ಮವಿಶ್ವಾಸದಿಂದ ಗುರಿಯೆಡೆಗೆ ಸಾಗಿದರೆ
ಸಫಲತೆ ಕಟ್ಟಿಟ್ಟ ಬುತ್ತಿ ಎಂದರು.

ವಿಪ್ರೋ, ಗೂಗಲ್‌, ಮೈಕ್ರೋಸಾಫ್ಟ, ಇನ್ಫೋಸಿಸ್‌ನಂತಹ ಅತ್ಯುತ್ತಮ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ನೀಡುವ
ಸಾಮರ್ಥ್ಯ ಹಾಗೂ ಅರ್ಹತೆ ಇಲ್ಲಿನ ಶಿಕ್ಷಣ ಸಂಸ್ಥೆಗಳಿಗಿರುವುದು ಉತ್ತರ ಕನ್ನಡ ಜಿಲ್ಲೆಯ ಸಾಧನೆ. ಬಾಳಿಗಾ ಕಾಲೇಜಿನಿಂದ
ಪಳಗಿ ಸಾವಿರಾರು ಮಂದಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಸಮಾಜ ಮತ್ತು ಬದುಕಿನಲ್ಲಿ ಪರಿಣಾಮಕಾರಿ ಬದಲಾವಣೆ ತರುವುದೇ
ಶಿಕ್ಷಣದ ಉದ್ದೇಶವಾಗಿದ್ದು ಕೇವಲ ಉದ್ಯೋಗ ಮಾಡುವಂಥ ಉತ್ಪನ್ನವಾಗಬಾರದು. ವಿದ್ಯಾರ್ಥಿಗಳಲ್ಲೇ ಶಿಕ್ಷಕರ ಅಸ್ತಿತ್ವ ಇರುತ್ತದೆ.
ವಿದ್ಯಾರ್ಥಿಗಳ ಸಫಲತೆಯಲ್ಲಿ ಶಿಕ್ಷಕರ ಧನ್ಯತೆ ಇದೆ ಎಂದರು.

ಕೆನರಾ ಕಾಲೇಜು ಸೊಸೈಟಿ ಅಧ್ಯಕ್ಷ ರಘು ಪಿಕಳೆ ಅಧ್ಯಕ್ಷತೆ ವಹಿಸಿ, ಕೆನರಾ ಕಾಲೇಜು ಸೊಸೈಟಿ ಆರಂಭಿಸಿ ಜಿಲ್ಲೆಯ ಶಿಕ್ಷಣ ಕ್ರಾಂತಿಗೆ
ಕಾರಣರಾದ ಡಾ| ಎ.ವಿ.ಬಾಳಿಗಾರವರ ಜೀವನ ವಿಶೇಷಗಳನ್ನು ವಿವರಿಸಿದರು. ಸೊಸೈಟಿ ಕಾರ್ಯಾಧ್ಯಕ್ಷ ಮುರಲೀಧರ
ಪ್ರಭು, ಉಪಾಧ್ಯಕ್ಷ ರತ್ನಾಕರ ಕಾಮತ, ಪ್ರಾಚಾರ್ಯ ಎಸ್‌.ಜಿ. ರಾಯ್ಕರ, ಎನ್‌.ಜಿ. ಹೆಗಡೆ, ಯು.ಜಿ. ಶಾಸ್ತ್ರಿ, ಜಯರಾಮ ಭಟ್ಟ,
ರತನ್‌ ಗಾಂವಕರ, ವೀಣಾ ಕಾಮತ ಮತ್ತಿತರರು ಇದ್ದರು.

ಕಾರ್ಯದರ್ಶಿ ಎಲ್‌.ವಿ. ಶಾನಭಾಗ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ವಿನೋದ ಪ್ರಭು ವಂದಿಸಿದರು. ಪ್ರೊ| ಜಿ.ಡಿ.ಭಟ್ಟ, ಪ್ರೀತಿ ಭಂಡಾರಕರ ನಿರೂಪಿಸಿದರು. ಡಾ| ಜಿ.ಎಲ್‌. ಹೆಗಡೆ, ಡಿ.ಡಿ.ಭಟ್ಟ, ಎಂ.ಕೆ. ಶಾನಭಾಗ ಮತ್ತಿತರರು ಪುರಸ್ಕೃತ
ವಿದ್ಯಾರ್ಥಿಗಳನ್ನು ಬಣ್ಣಿಸಿದರು.  ಪ್ರಮುಖರಾದ ಜೀವನ ಕವರಿ, ಸುಧಾಕರ ನಾಯಕ, ಪುರುಷೋತ್ತಮ ಹೆಗಡೆಕರ, ಅಶೋಕ
ಪಿಕಳೆ, ಡಾ| ಸಿ.ಎಸ್‌. ವೆರ್ಣೇಕರ, ಸಿರೀಸ್‌ ನಾಯ್ಕ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.