ಆನೆ ಹಾವಳಿ ತಡೆಯಲು ಅರಣ್ಯ ಇಲಾಖೆಯ ಹೊಸ ಚಿಂತನೆ


Team Udayavani, Jun 11, 2018, 11:38 AM IST

11-june-4.jpg

ಮಹಾನಗರ: ಕೃಷಿ ಭೂಮಿಗೆ ಆನೆಗಳು ನುಗ್ಗುವುದನ್ನು ತಡೆಯಲು ಅರಣ್ಯ ಇಲಾಖೆಯು ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ‘ವಿಶೇಷ ತಡೆ’ (ಸ್ಪೆಷಲ್‌ ಸ್ಟ್ರಕ್ಚರ್) ನಿರ್ಮಿಸಲು ಯೋಜನೆ ರೂಪಿಸಿದೆ. ನೀರು ಹರಿಯುವ ತೋಡುಗಳಿಗೆ ಅಡ್ಡಲಾಗಿ ಇವನ್ನು ನಿರ್ಮಿಸಿ ಆನೆಗಳ ಪ್ರವೇಶ ತಡೆಯುವುದು ಇದರ ಸ್ಥೂಲ ಚಿತ್ರಣ.

ಆನೆಗಳಿಂದ ಬೆಳೆ ನಾಶ ತಡೆಯಲು ಈ ಹಿಂದೆ ಸೋಲಾರ್‌ ಬೇಲಿ, ಆನೆ ಕಂದಕ ನಿರ್ಮಿಸಲಾಗಿತ್ತು. ಆದರೆ ಸಂಪೂರ್ಣ ಪರಿಹಾರ ಸಿಕ್ಕಿರಲಿಲ್ಲ. ಜನ ಸಂಚಾರವಿರುವಲ್ಲಿ ಸೋಲಾರ್‌ ಬೇಲಿ ಅಳವಡಿಸಲು, ನೀರು ಹರಿಯುವ ನದಿ- ತೋಡುಗಳಲ್ಲಿ ಆನೆ ಕಂದಕ ನಿರ್ಮಿಸಲು ಅಸಾಧ್ಯ ಎಂಬುದೇ ಇದಕ್ಕೆ ಕಾರಣ. ಹೀಗಾಗಿ ಜಿಲ್ಲೆಯ ಕಾಡಿನಂಚಿನ ನದಿ, ತೋಡುಗಳಲ್ಲಿ ವಿಶೇಷ ತಡೆ ನಿರ್ಮಿಸಿ ಆನೆಗಳ ಪ್ರವೇಶಕ್ಕೆ ತಡೆ ಹಾಕಲು ಇಲಾಖೆ ಗಮನಹರಿಸಿದೆ.

ವಿಶೇಷ ತಡೆ ರಚನೆ ಹೇಗಿರುತ್ತದೆ ?
ಸಿಮೆಂಟ್‌ ಹಾಗೂ ಕಬ್ಬಿಣದ ಬೀಮ್‌ಗಳನ್ನು ತಯಾರಿಸಿ, ನೀರು ಹರಿಯುವ ತೋಡುಗಳಲ್ಲಿ ಪ್ರತಿ 80 ಸೆಂ.ಮೀ. ಅಥವಾ 1 ಮೀ. ಅಂತರದಲ್ಲಿ ಸುಮಾರು 2 ಮೀ. ಎತ್ತರಕ್ಕೆ ಕಂಬಗಳನ್ನಾಗಿ ನಿಲ್ಲಿಸಲಾಗುತ್ತದೆ. ಅನಂತರ ಅವುಗಳಿಗೆ ಕಬ್ಬಿಣದ ಮುಳ್ಳುಗಳನ್ನು ಜೋಡಿಸಲಾಗುತ್ತದೆ. ಕಂಬಗಳ ನಡುವೆ ಅವಕಾಶ ಕಿರಿದಾಗಿರುವುದರಿಂದ ಆನೆಗಳಿಗೆ ಇದನ್ನು ದಾಟಿ ಒಳಬರುವುದಕ್ಕೆ ಸಾಧ್ಯವಾಗುವುದಿಲ್ಲ. ಒಂದು ವೇಳೆ ದಾಟಲು ಪ್ರಯತ್ನಪಟ್ಟರೂ ಮುಳ್ಳು ಚುಚ್ಚುವ ಕಾರಣ ಆನೆಗಳು ಹಿಂಜರಿಯುತ್ತವೆ.

ಬಂಡೀಪುರ, ನಾಗರಹೊಳೆ ಉದಾಹರಣೆ
ಈ ವಿಶೇಷ ತಡೆ ರಚನೆ ಅಳವಡಿಕೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ. ಆದರೆ ಆನೆಗಳು ಅತೀ ಹೆಚ್ಚಿರುವ ಬಂಡೀಪುರ ಹಾಗೂ ನಾಗರಹೊಳೆಯಂತಹ ಅರಣ್ಯ ಪ್ರದೇಶಗಳಲ್ಲಿ ಈಗಾಗಲೇ ನಿರ್ಮಿಸಲಾಗಿದೆ; ಆನೆಗಳ ಹಾವಳಿ ತಡೆಯುವಲ್ಲಿ ಗಣನೀಯ ಯಶಸನ್ನನ್ನೂ ಸಾಧಿಸಿದೆ. ಹೀಗಾಗಿ ಈ ಪ್ರಯೋಗವನ್ನು ಜಿಲ್ಲೆಯಲ್ಲೂ ನಡೆಸಲು ಜಿಲ್ಲಾ ಅರಣ್ಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಆನೆ ಹಾವಳಿ ಹೆಚ್ಚಿರುವ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಇದರ ಅಳವಡಿಕೆ ಯಶಸ್ವಿಯಾಗಬಹುದು ಎನ್ನುವ ಲೆಕ್ಕಾಚಾರ ಅವರದು.

ಈ ಬಗ್ಗೆ ‘ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ| ವಿ. ಕರಿಕಳನ್‌, ವಿಶೇಷ ತಡೆಗಳನ್ನು ಎಲ್ಲಿ ನಿರ್ಮಿಸಬಹುದೆನ್ನು ವುದಕ್ಕಾಗಿ ಸರ್ವೆ ನಡೆಸುವಂತೆ ಸೂಚನೆನೀಡಲಾಗಿದೆ. ವರದಿ ಬಂದ ಬಳಿಕ ಮೇಲಧಿಕಾರಿಗಳ ಅಂಗೀಕಾರ ಪಡೆದು ನಿರ್ಮಿಸಲಾಗುವುದು ಎಂದಿದ್ದಾರೆ. 

ಕಾಡಾನೆ ದಾಂಧಲೆ ಇಳಿಕೆ
ಜಿಲ್ಲೆಯಲ್ಲಿ ಕಾಡಾನೆಗಳು ಕೃಷಿ ಭೂಮಿಗೆ ನುಗ್ಗಿದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಕೆ ಆಗಿರುವುದು ದಾಖಲೆಗಳಿಂದ ಸ್ಪಷ್ಟವಾಗುತ್ತದೆ. ಇದಕ್ಕೆ ಇಲಾಖೆ ನಿರ್ಮಿಸಿರುವ ಆನೆ ಕಂದಕಗಳೂ ಕಾರಣ ಎನ್ನಬಹುದು. ಹಾಗಿದ್ದರೂ ಆನೆ ದಾಳಿ ಸಂಪೂರ್ಣ ನಿಲ್ಲದ ಕಾರಣ ಈಗ ಈ ವಿಶೇಷ ತಡೆ ರಚನೆಯ ಮೊರೆ ಹೊಗಲು ಇಲಾಖೆ ನಿರ್ಧರಿಸಿರುವುದು ಗಮನಾರ್ಹ.

ಗಣೇಶ್‌ ಮಾವಂಜಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.