ಅಪಾರ ಔಷಧೀಯ ಗುಣ ಹೊಂದಿರುವ ಸಂಬಾರ ಬಳ್ಳಿ


Team Udayavani, Mar 26, 2018, 9:40 AM IST

Sambrani-25-3.jpg

ಮನೆ ಅಂಗಳದ ಹೂಗಿಡಗಳ ಮಧ್ಯೆ ಅಗಲ ಎಲೆಯ ಹಚ್ಚ ಹಸುರಿನಿಂದ ಬೆಳೆಯುವ ಗಿಡ ಸಂಬಾರ ಬಳ್ಳಿ ಅಥವಾ ಸಾಂಬ್ರಾಣಿ ಅಥವಾ ದೊಡ್ಡ ಪತ್ರೆ ಗಿಡ. ಸಾಂಬ್ರಾಣಿ ಪರಿಮಳದಿಂದ ಕೂಡಿದ್ದು, ರಸಭರಿತ ದಪ್ಪ ಎಲೆಗಳುಳ್ಳ ಅಪಾರ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯ. ಕಫ‌, ಕೆಮ್ಮು, ಶೀತದಿಂದ ಬಳಲುವ ಚಿಕ್ಕ ಮಕ್ಕಳಿಗೆ ನಾಲ್ಕಾರು ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ರಸ ಹಿಂಡಿ ಜೇನು ಬೆರೆಸಿ ಕುಡಿಸಿದರೆ ಆರಾಮ ಸಿಗುತ್ತದೆ. ಇದರ ಸೊಪ್ಪಿನ ಹೊಗೆಯನ್ನು ಕೆಲವು ಸೆಕೆಂಡುಗಳ ಕಾಲ ಮಕ್ಕಳಿಗೆ ನೀಡುವುದರಿಂದ ಶೀತ ಕಡಿಮೆಯಾಗುತ್ತದೆ. ಶೀತದಿಂದ ಮೂಗು ಕಟ್ಟುತ್ತಿದ್ದರೆ 1- 2 ಹನಿ ರಸವನ್ನು ಮೂಗಿಗೆ ಹಾಕಿದರೆ ಸಾಕು. ಎಲೆಗಳನ್ನು ಅರೆದು ಹಣೆಗೆ ಲೇಪಿಸುವುದರಿಂದ ತಲೆನೋವು ಗುಣವಾಗುತ್ತದೆ.

ಸೌಂದರ್ಯ ವೃದ್ಧಿ
ಮುಖ, ಮೈಯಲ್ಲಿ  ತುರಿಕೆ ಕಜ್ಜಿ ಅಥವಾ ಬೆವರುಸಾಲೆ ಎದ್ದಾಗ ಆ ಜಾಗಕ್ಕೆ ಸಾಂಬ್ರಾಣಿ ಎಲೆಗಳನ್ನು ಹಸಿಯಾಗಿಯೇ ಚೆನ್ನಾಗಿ ಉಜ್ಜಬೇಕು. ಇದರಿಂದ ಕೇವಲ ಐದು- ಹತ್ತು ನಿಮಿಷಗಳಲ್ಲಿ ದಡಿಕೆಗಳು ಮಾಯವಾಗುತ್ತವೆ. ಬೇಕಿದ್ದರೆ ಮತ್ತೆರಡು ಬಾರಿ ಉಜ್ಜಬಹುದು. ಪತ್ರೆಯ ರಸವನ್ನು ಮೊಸರಿನಲ್ಲಿ ಬೆರೆಸಿ ದೇಹಕ್ಕೆ ಲೇಪಿಸುವುದರಿಂದ ಚರ್ಮವು ಮೃದುವಾಗಿ ಕಾಂತಿಯುಕ್ತವಾಗುತ್ತದೆ. ಇದರಿಂದ ಹಲವು ವಿಧದ ಚರ್ಮವ್ಯಾಧಿಗಳು ಗುಣಮುಖವಾಗುತ್ತವೆ ಎನ್ನುತ್ತಾರೆ ಸೌಂದರ್ಯ ತಜ್ಞರು.

ಇದರ ಎಲೆಗಳಿಂದ ತಯಾರಿಸುವ ಸೂಪ್‌ ಬಾಣಂತಿಯರಿಗೆ ಎದೆಹಾಲಿನ ಕೊರತೆ ನೀಗುತ್ತದೆ. ಋತುಸ್ರಾವದ ಸಮಸ್ಯೆಗಳು, ಸ್ತ್ರೀ, ಪುರುಷರ ಬಂಜೆತನದ ನಿವಾರಣೆಯಲ್ಲೂ ಇದರ ಪತ್ರೆಗಳು ಪರಿಣಾಮಕಾರಿಯಾಗಿದೆ. ಚೇಳಿನ ಕಡಿತಕ್ಕೂ ಇದರ ರಸ ದಿವ್ಯ ಔಷಧವಾಗಿದೆ. ಕಿವಿನೋವಿಗೆ ಎಲೆಗಳ ರಸವನ್ನು ಬಿಸಿ ಮಾಡಿ ಕಿವಿಗೆ ಹಾಕಬೇಕು. ಇದರಿಂದ ಕಿವಿ ನೋವು ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲೂ ಸ್ಥಾನ
ಜೀರ್ಣಕಾರಕ ಗುಣ ಹೊಂದಿರುವ ಸಾಂಬ್ರಾಣಿ ಅಡುಗೆಯಲ್ಲೂ ಬಳಸಬಹುದು. ಎಲೆಗಳನ್ನು ಬಿಡಿಸಿ/ ಬೇಯಿಸಿ ತೆಂಗಿನ ಹೂವಿನೊಂದಿಗೆ ಅರೆದು, ಮಜ್ಜಿಗೆ ಸೇರಿಸಿ ತಂಬುಳಿಯಾಗಿ ಉಪಯೋಗಿಸಬಹುದು. ಅಲ್ಲದೆ ಈರುಳ್ಳಿಯೊಂದಿಗೆ ಸಣ್ಣಗೆ ಕೊಚ್ಚಿ ಸಲಾಡ್‌ ಮಾಡಬಹುದು. ಇದು ಬೇಸಗೆಯಲ್ಲಿ ದೇಹವನ್ನು ತಂಪಾಗಿರಿಸುತ್ತದೆ. ನಾರಿನ ಅಂಶ, ಜೀವಸತ್ವ  ಹಾಗೂ ಕಬ್ಬಿಣಾಂಶಗಳ ಆಗರವಾಗಿರುವ ಸಾಂಬ್ರಾಣಿ ಸೊಪ್ಪನ್ನು ಹಾಗೆಯೇ ಜಗಿದು ತಿನ್ನಬಹುದು. ಗ್ರೀನ್‌ ಟೀ ತಯಾರಿಯಲ್ಲಿ ಇದರ ಸೊಪ್ಪನ್ನು ಬಳಸಿದರೆ ಚಹಾಕ್ಕೆ ವಿಶಿಷ್ಟ ಸ್ವಾದ ಬರುತ್ತದೆ.

ಸಾಂಬ್ರಾಣಿ ಎಣ್ಣೆ
ಸಾಂಬ್ರಾಣಿ ಎಣ್ಣೆಯು ಮಾನಸಿಕ ಉದ್ವೇಗವನ್ನು ನಿಯಂತ್ರಿಸುತ್ತದೆ. ನರವ್ಯೂಹದ ಬಿಗಿತವನ್ನು ಕಡಿಮೆ ಮಾಡುತ್ತದೆ. ಗ್ಯಾಸ್‌ಟ್ರಿಕ್‌ನಿಂದ ಮುಕ್ತಿ ನೀಡಿ ಜೀರ್ಣಕ್ರಿಯೆ ಸುಗಮವಾಗುವಂತೆ ಮಾಡುತ್ತದೆ. ರೋಗ ನಿರೋಧಕದಂತೆ ಕೆಲಸ ಮಾಡುವ ಇದರಲ್ಲಿ ಬೆನ್ಫೋಯೇಟ್‌, ಬೆನಾ#ಯಿಕ್‌ ಆಮ್ಲ ಮತ್ತು ಬೆನÛಲ್‌ ಡಿಹೈಡ್ರೇಟ್‌ ಇದ್ದು, ಇದು ಫ‌ಂಗಸ್‌ ಮತ್ತು ಬ್ಯಾಕ್ಟ್ರೀರಿಯಾ ನಿರೋಧಕದಂತೆ ಕೆಲಸ ಮಾಡುತ್ತದೆ. ಗಾಯಕ್ಕೆ ಸಾಂಬ್ರಾಣಿ ಎಣ್ಣೆಯನ್ನು ಹಚ್ಚಿದರೆ ಸೋಂಕು ಬೇಗನೆ ನಿವಾರಣೆಯಾಗುತ್ತದೆ.

ಸಾಂಬ್ರಾಣಿ ಎಲೆಗಳು ಔಷಧೀಯ ಗುಣಗಳನ್ನು ಮಾತ್ರವಲ್ಲ ಅಪಾರ ಪೋಷಕಾಂಶಗಳನ್ನು ಹೊಂದಿವೆ. ಪ್ರೋಟಿನ್‌, ದೇಹಕ್ಕೆ ಬೇಕಾಗುವ ಪ್ರಮುಖ ಜೀವಸತ್ವಗಳು, ಕಬ್ಬಿಣ, ತಾಮ್ರ ಮುಂತಾದ ಖನಿಜಗಳು, ಸೋಡಿಯಂ, ಮೆಗ್ನೇಷಿಯಂ, ನಾರು, ಸತು ಹೀಗೆ ಅನೇಕ ಪೋಷಕಾಂಶಗಳಿಂದ ಕೂಡಿದ ಕಾರಣ ನಿತ್ಯ ಆಹಾರದ ಜತೆಗೆ ಇದನ್ನು ಬಳಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ಸಾಂಬ್ರಾಣಿ ಕಷಾಯ
ಸಾಂಬ್ರಾಣಿ ಎಲೆಯ ಕಷಾಯದಿಂದ ಜ್ವರ ನಿಯಂತ್ರಣವಾಗುತ್ತದೆ. ಮಲೇರಿಯಾ ಜ್ವರಕ್ಕೆ ಸಾಂಬ್ರಾಣಿ ದೊಡ್ಡ ಪತ್ರೆ ಎಲೆಗಳು, ಕಾಳುಮೆಣಸು, ಶುಂಠಿ, ಕಿರಾತಕಡ್ಡಿ ಸೇರಿಸಿ ತಯಾರಿಸುವ ಕಷಾಯ ಸೇವನೆಯಿಂದ ಶೀಘ್ರ ಉಪಶಮನವಾಗುತ್ತದೆ. ಉದರಶೂಲೆ, ಮಾನಸಿಕ ಒತ್ತಡ, ನಿದ್ರಾಹೀನತೆಗೆ ಈ ಕಷಾಯ ಸೇವನೆಯಿಂದ ಪರಿಹಾರ ಸಿಗುತ್ತದೆ.

— ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.