ಅಪಾರ ಔಷಧೀಯ ಗುಣ ಹೊಂದಿರುವ ಸಂಬಾರ ಬಳ್ಳಿ


Team Udayavani, Mar 26, 2018, 9:40 AM IST

Sambrani-25-3.jpg

ಮನೆ ಅಂಗಳದ ಹೂಗಿಡಗಳ ಮಧ್ಯೆ ಅಗಲ ಎಲೆಯ ಹಚ್ಚ ಹಸುರಿನಿಂದ ಬೆಳೆಯುವ ಗಿಡ ಸಂಬಾರ ಬಳ್ಳಿ ಅಥವಾ ಸಾಂಬ್ರಾಣಿ ಅಥವಾ ದೊಡ್ಡ ಪತ್ರೆ ಗಿಡ. ಸಾಂಬ್ರಾಣಿ ಪರಿಮಳದಿಂದ ಕೂಡಿದ್ದು, ರಸಭರಿತ ದಪ್ಪ ಎಲೆಗಳುಳ್ಳ ಅಪಾರ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯ. ಕಫ‌, ಕೆಮ್ಮು, ಶೀತದಿಂದ ಬಳಲುವ ಚಿಕ್ಕ ಮಕ್ಕಳಿಗೆ ನಾಲ್ಕಾರು ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ರಸ ಹಿಂಡಿ ಜೇನು ಬೆರೆಸಿ ಕುಡಿಸಿದರೆ ಆರಾಮ ಸಿಗುತ್ತದೆ. ಇದರ ಸೊಪ್ಪಿನ ಹೊಗೆಯನ್ನು ಕೆಲವು ಸೆಕೆಂಡುಗಳ ಕಾಲ ಮಕ್ಕಳಿಗೆ ನೀಡುವುದರಿಂದ ಶೀತ ಕಡಿಮೆಯಾಗುತ್ತದೆ. ಶೀತದಿಂದ ಮೂಗು ಕಟ್ಟುತ್ತಿದ್ದರೆ 1- 2 ಹನಿ ರಸವನ್ನು ಮೂಗಿಗೆ ಹಾಕಿದರೆ ಸಾಕು. ಎಲೆಗಳನ್ನು ಅರೆದು ಹಣೆಗೆ ಲೇಪಿಸುವುದರಿಂದ ತಲೆನೋವು ಗುಣವಾಗುತ್ತದೆ.

ಸೌಂದರ್ಯ ವೃದ್ಧಿ
ಮುಖ, ಮೈಯಲ್ಲಿ  ತುರಿಕೆ ಕಜ್ಜಿ ಅಥವಾ ಬೆವರುಸಾಲೆ ಎದ್ದಾಗ ಆ ಜಾಗಕ್ಕೆ ಸಾಂಬ್ರಾಣಿ ಎಲೆಗಳನ್ನು ಹಸಿಯಾಗಿಯೇ ಚೆನ್ನಾಗಿ ಉಜ್ಜಬೇಕು. ಇದರಿಂದ ಕೇವಲ ಐದು- ಹತ್ತು ನಿಮಿಷಗಳಲ್ಲಿ ದಡಿಕೆಗಳು ಮಾಯವಾಗುತ್ತವೆ. ಬೇಕಿದ್ದರೆ ಮತ್ತೆರಡು ಬಾರಿ ಉಜ್ಜಬಹುದು. ಪತ್ರೆಯ ರಸವನ್ನು ಮೊಸರಿನಲ್ಲಿ ಬೆರೆಸಿ ದೇಹಕ್ಕೆ ಲೇಪಿಸುವುದರಿಂದ ಚರ್ಮವು ಮೃದುವಾಗಿ ಕಾಂತಿಯುಕ್ತವಾಗುತ್ತದೆ. ಇದರಿಂದ ಹಲವು ವಿಧದ ಚರ್ಮವ್ಯಾಧಿಗಳು ಗುಣಮುಖವಾಗುತ್ತವೆ ಎನ್ನುತ್ತಾರೆ ಸೌಂದರ್ಯ ತಜ್ಞರು.

ಇದರ ಎಲೆಗಳಿಂದ ತಯಾರಿಸುವ ಸೂಪ್‌ ಬಾಣಂತಿಯರಿಗೆ ಎದೆಹಾಲಿನ ಕೊರತೆ ನೀಗುತ್ತದೆ. ಋತುಸ್ರಾವದ ಸಮಸ್ಯೆಗಳು, ಸ್ತ್ರೀ, ಪುರುಷರ ಬಂಜೆತನದ ನಿವಾರಣೆಯಲ್ಲೂ ಇದರ ಪತ್ರೆಗಳು ಪರಿಣಾಮಕಾರಿಯಾಗಿದೆ. ಚೇಳಿನ ಕಡಿತಕ್ಕೂ ಇದರ ರಸ ದಿವ್ಯ ಔಷಧವಾಗಿದೆ. ಕಿವಿನೋವಿಗೆ ಎಲೆಗಳ ರಸವನ್ನು ಬಿಸಿ ಮಾಡಿ ಕಿವಿಗೆ ಹಾಕಬೇಕು. ಇದರಿಂದ ಕಿವಿ ನೋವು ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲೂ ಸ್ಥಾನ
ಜೀರ್ಣಕಾರಕ ಗುಣ ಹೊಂದಿರುವ ಸಾಂಬ್ರಾಣಿ ಅಡುಗೆಯಲ್ಲೂ ಬಳಸಬಹುದು. ಎಲೆಗಳನ್ನು ಬಿಡಿಸಿ/ ಬೇಯಿಸಿ ತೆಂಗಿನ ಹೂವಿನೊಂದಿಗೆ ಅರೆದು, ಮಜ್ಜಿಗೆ ಸೇರಿಸಿ ತಂಬುಳಿಯಾಗಿ ಉಪಯೋಗಿಸಬಹುದು. ಅಲ್ಲದೆ ಈರುಳ್ಳಿಯೊಂದಿಗೆ ಸಣ್ಣಗೆ ಕೊಚ್ಚಿ ಸಲಾಡ್‌ ಮಾಡಬಹುದು. ಇದು ಬೇಸಗೆಯಲ್ಲಿ ದೇಹವನ್ನು ತಂಪಾಗಿರಿಸುತ್ತದೆ. ನಾರಿನ ಅಂಶ, ಜೀವಸತ್ವ  ಹಾಗೂ ಕಬ್ಬಿಣಾಂಶಗಳ ಆಗರವಾಗಿರುವ ಸಾಂಬ್ರಾಣಿ ಸೊಪ್ಪನ್ನು ಹಾಗೆಯೇ ಜಗಿದು ತಿನ್ನಬಹುದು. ಗ್ರೀನ್‌ ಟೀ ತಯಾರಿಯಲ್ಲಿ ಇದರ ಸೊಪ್ಪನ್ನು ಬಳಸಿದರೆ ಚಹಾಕ್ಕೆ ವಿಶಿಷ್ಟ ಸ್ವಾದ ಬರುತ್ತದೆ.

ಸಾಂಬ್ರಾಣಿ ಎಣ್ಣೆ
ಸಾಂಬ್ರಾಣಿ ಎಣ್ಣೆಯು ಮಾನಸಿಕ ಉದ್ವೇಗವನ್ನು ನಿಯಂತ್ರಿಸುತ್ತದೆ. ನರವ್ಯೂಹದ ಬಿಗಿತವನ್ನು ಕಡಿಮೆ ಮಾಡುತ್ತದೆ. ಗ್ಯಾಸ್‌ಟ್ರಿಕ್‌ನಿಂದ ಮುಕ್ತಿ ನೀಡಿ ಜೀರ್ಣಕ್ರಿಯೆ ಸುಗಮವಾಗುವಂತೆ ಮಾಡುತ್ತದೆ. ರೋಗ ನಿರೋಧಕದಂತೆ ಕೆಲಸ ಮಾಡುವ ಇದರಲ್ಲಿ ಬೆನ್ಫೋಯೇಟ್‌, ಬೆನಾ#ಯಿಕ್‌ ಆಮ್ಲ ಮತ್ತು ಬೆನÛಲ್‌ ಡಿಹೈಡ್ರೇಟ್‌ ಇದ್ದು, ಇದು ಫ‌ಂಗಸ್‌ ಮತ್ತು ಬ್ಯಾಕ್ಟ್ರೀರಿಯಾ ನಿರೋಧಕದಂತೆ ಕೆಲಸ ಮಾಡುತ್ತದೆ. ಗಾಯಕ್ಕೆ ಸಾಂಬ್ರಾಣಿ ಎಣ್ಣೆಯನ್ನು ಹಚ್ಚಿದರೆ ಸೋಂಕು ಬೇಗನೆ ನಿವಾರಣೆಯಾಗುತ್ತದೆ.

ಸಾಂಬ್ರಾಣಿ ಎಲೆಗಳು ಔಷಧೀಯ ಗುಣಗಳನ್ನು ಮಾತ್ರವಲ್ಲ ಅಪಾರ ಪೋಷಕಾಂಶಗಳನ್ನು ಹೊಂದಿವೆ. ಪ್ರೋಟಿನ್‌, ದೇಹಕ್ಕೆ ಬೇಕಾಗುವ ಪ್ರಮುಖ ಜೀವಸತ್ವಗಳು, ಕಬ್ಬಿಣ, ತಾಮ್ರ ಮುಂತಾದ ಖನಿಜಗಳು, ಸೋಡಿಯಂ, ಮೆಗ್ನೇಷಿಯಂ, ನಾರು, ಸತು ಹೀಗೆ ಅನೇಕ ಪೋಷಕಾಂಶಗಳಿಂದ ಕೂಡಿದ ಕಾರಣ ನಿತ್ಯ ಆಹಾರದ ಜತೆಗೆ ಇದನ್ನು ಬಳಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ಸಾಂಬ್ರಾಣಿ ಕಷಾಯ
ಸಾಂಬ್ರಾಣಿ ಎಲೆಯ ಕಷಾಯದಿಂದ ಜ್ವರ ನಿಯಂತ್ರಣವಾಗುತ್ತದೆ. ಮಲೇರಿಯಾ ಜ್ವರಕ್ಕೆ ಸಾಂಬ್ರಾಣಿ ದೊಡ್ಡ ಪತ್ರೆ ಎಲೆಗಳು, ಕಾಳುಮೆಣಸು, ಶುಂಠಿ, ಕಿರಾತಕಡ್ಡಿ ಸೇರಿಸಿ ತಯಾರಿಸುವ ಕಷಾಯ ಸೇವನೆಯಿಂದ ಶೀಘ್ರ ಉಪಶಮನವಾಗುತ್ತದೆ. ಉದರಶೂಲೆ, ಮಾನಸಿಕ ಒತ್ತಡ, ನಿದ್ರಾಹೀನತೆಗೆ ಈ ಕಷಾಯ ಸೇವನೆಯಿಂದ ಪರಿಹಾರ ಸಿಗುತ್ತದೆ.

— ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.