ತಾಲೂಕು ಕಚೇರಿಗೆ ಬಿಎಂಎಸ್‌ ಜಾಥಾ


Team Udayavani, Mar 16, 2017, 2:42 PM IST

jatha.jpg

ಕಾಸರಗೋಡು: ನಿತ್ಯೋಪ ಯೋಗಿ ಸಾಮಗ್ರಿಗಳ ಬೆಲೆಯೇರಿಕೆ ಖಂಡಿಸಿ ಹಾಗೂ ಕೇರಳ ಎಡರಂಗ ಸರಕಾರದ ದುರಾಡಳಿತದ ವಿರುದ್ಧ  ಭಾರತೀಯ ಮಜ್ದೂರ್‌ ಸಂಘ (ಬಿಎಂಎಸ್‌)ದ ನೇತೃತ್ವ ದಲ್ಲಿ ಮಾ.15ರಂದು ಬೆಳಗ್ಗೆ ಎಲ್ಲ  ತಾಲೂಕು ಕಚೇರಿಗಳಿಗೆ ಪ್ರತಿಭಟನ ಜಾಥಾ ನಡೆಯಿತು.  ಈ ಪ್ರಯುಕ್ತ  ಮಂಜೇಶ್ವರ, ಕಾಸರಗೋಡು, ಹೊಸದುರ್ಗ, ವೆಳ್ಳರಿಕುಂಡು ತಾಲೂಕು ಕಚೇರಿಗಳಿಗೆ ಪ್ರತಿಭಟನ ಮೆರವಣಿಗೆಯನ್ನು ಏರ್ಪಡಿಸಲಾಯಿತು.

ಕಾಸರಗೋಡು ತಾಲೂಕು ಕಚೇರಿಗೆ ನಡೆದ ಬಿ.ಎಂ.ಎಸ್‌. ಜಾಥಾ ಮತ್ತು ಧರಣಿಯನ್ನು ಬಿಎಂಎಸ್‌ ಜಿಲ್ಲಾ ಕಾರ್ಯದರ್ಶಿ ಕೆ.ಎ. ಶ್ರೀನಿವಾಸನ್‌ ಉದ್ಘಾಟಿಸಿ ಮಾತನಾಡಿದರು.

ಕೇರಳ ಸರಕಾರದ ದುರಾಡಳಿತದಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಿತ್ಯೋಪ ಯೋಗಿ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿ ದ್ದರೂ, ಬೆಲೆ ನಿಯಂತ್ರಣಕ್ಕೆ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿನಲ್ಲಿ  ಚೆಲ್ಲಾಟವಾಡುತ್ತಿದೆ ಎಂದು ಶ್ರೀನಿವಾಸನ್‌ ಆರೋಪಿಸಿದರು.

ಕಾರ್ಯಕ್ರಮದಲ್ಲಿ ವಿಶ್ವನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಎಂ. ಬಾಬು, ಪಿ. ಗೋಪಾಲನ್‌ ನಾಯರ್‌, ಪಿ. ಪ್ರಿಯಾ, ಎ. ಓಮನಾ ಮೊದಲಾದವರು ಮಾತನಾಡಿದರು. ರತೀಶ್‌ ಕೆ. ಸ್ವಾಗತಿಸಿದರು. ಲೀಲಾ ಕೃಷ್ಣನ್‌ ಮುಳ್ಳೇರಿಯ ವಂದಿಸಿದರು.

ಆಹಾರ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಏಜೆನ್ಸಿಗಳನ್ನು ಹೊರತುಪಡಿಸಿ ಅಂತಾರಾಜ್ಯ ಮಾರುಕಟ್ಟೆಗಳೊಂದಿಗೆ ಸರಕಾರ ನೇರವಾಗಿ ವ್ಯವಹರಿಸಬೇಕು, ರೇಶನ್‌ ವಿತರಣೆ ಸುಗಮಗೊಳಿಸಬೇಕು. ಜೀವ ರಕ್ಷಾ ಔಷಧಿಗಳ ಲಭ್ಯತೆಯನ್ನು ಖಚಿತಗೊಳಿಸಬೇಕು, ಸಾವಿ ರಾರು ಮಂದಿಯ ಕ್ಷೇಮನಿಧಿ ಪಿಂಚಣಿ ಗಳನ್ನು ಹೊರತುಪಡಿಸುವ ಕ್ರಮ, ಕ್ಷೇಮ ನಿಧಿ ಪಿಂಚಣಿ, ಪಿ.ಎಫ್‌. ಪಿಂಚಣಿಯನ್ನು ಪಡೆಯುವ ಸಾಮೂಹಿಕ ಪಿಂಚಣಿಯಿಂದ ಹೊರತುಪಡಿಸುವ ಸರಕಾರದ ಕ್ರಮವನ್ನು ಕೈಬಿಡಬೇಕು, ನಿಶ್ಚಲಗೊಂಡಿರುವ ಕ್ಷೇಮ ಪಿಂಚಣಿ ವಿತರಣೆಯನ್ನು ಸುಗಮಗೊಳಿಸ ಬೇಕು, ಕ್ಷೇಮ ನಿಧಿ ಕಚೇರಿಗಳಲ್ಲಿ ಉಳಿದು ಕೊಂಡಿರುವ ಅರ್ಜಿಗಳಿಗೆ ತುರ್ತು ತೀರ್ಮಾನ ತೆಗೆದುಕೊಳ್ಳಬೇಕು, ಎಲ್ಲ ಕ್ಷೇಮ ನಿಧಿ ಪಿಂಚಣಿಯನ್ನು 3,000 ರೂ.ಗೇರಿಸಬೇಕು, ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಉಚಿತ ರೇಶನ್‌ ನೀಡಬೇಕು ಮೊದಲಾದ ಬೇಡಿಕೆ ಗಳನ್ನು ಮುಂದಿಟ್ಟು ಜಾಥಾ ಮತ್ತು ಧರಣಿಯನ್ನು ಬಿಎಂಎಸ್‌ ಆಯೋಜಿಸಿತ್ತು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.