ಬತ್ತಿದ ಜೀವಸೆಲೆ; ಕುಡಿಯುವ ನೀರಿಗೆ ನಿಲ್ಲದ ಪರದಾಟ 


Team Udayavani, Feb 20, 2019, 1:00 AM IST

battida-jeeva-sele1.jpg

ಕಾಪು: ಕಾಪು ತಾಲೂಕಿನ ಇನ್ನಂಜೆ ಮತ್ತು ಮಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಬೇಸಗೆ ಬಂತೆಂದರೆ ಸಾಕು, ನೀರಿನ ಸಮಸ್ಯೆ ಶುರುವಾಗುತ್ತದೆ.  

ಎಲ್ಲೆಲ್ಲಿ ಸಮಸ್ಯೆಗಳು ? 
ಮಜೂರು ಗ್ರಾ.ಪಂ. ವ್ಯಾಪ್ತಿಯ ಪಾದೂರು ಮತ್ತು ಮಜೂರು ಗ್ರಾಮಗಳ ಮೂರು ಕಡೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಪಾದೂರು ಗ್ರಾಮದ ಕೂರಾಲು, ಕರಂದಾಡಿ ಶಾಲೆಯ ಬಳಿ, ಕರಂದಾಡಿ ಕಡ್ಸಲೆಬೆಟ್ಟು, ಮಜೂರು ರೈಲ್ವೇ ಬ್ರಿಡ್ಜ್ ಬಳಿಯ ಗರಡಿ ರಸ್ತೆ, ಮಜೂರು ಎಸ್‌ಸಿ ಕಾಲನಿಯ 100ಕ್ಕೂ ಅಧಿಕ ಕುಟುಂಬಗಳಿಗೆ ನೀರಿನ ಸಮಸ್ಯೆ ತೀವ್ರವಾಗಿದೆ.  

ವರ್ಷಕ್ಕೆ 7-8 ಲಕ್ಷ ರೂ. ವ್ಯಯ 
ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂರಾಲು, ಕರಂದಾಡಿ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇಲ್ಲಿ ನೀರಿನಾಶ್ರಯಕ್ಕಾಗಿ ಬೋರ್‌ವೆಲ್‌ ನಿರ್ಮಾಣ, ಬಾವಿ ಶುಚಿತ್ವ, ಪೈಪ್‌ಲೈನ್‌ ಅಳವಡಿಕೆ ಮತ್ತು ಟ್ಯಾಂಕರ್‌ ಮೂಲಕ ನೀರು ಸರಬರಾಜಿಗಾಗಿ ಪ್ರತೀ ವರ್ಷ 7ರಿಂದ 8 ಲಕ್ಷ ರೂ.  ವ್ಯಯಿಸಲಾಗುತ್ತದೆ. 

ಅಂತರ್ಜಲ ಕುಸಿತ 
ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ವರ್ಷದಿಂದ ವರ್ಷಕ್ಕೆ ಅತಂರ್ಜಲ ಕುಸಿತವಾಗುತ್ತಿದೆ. ಪಂಜಿತ್ತೂರು, ಕರಂದಾಡಿ ಮತ್ತು ವಳದೂರಿನಲ್ಲಿ ಹರಿಯುವ ಹೊಳೆಗೆ ಅಡ್ಡಲಾಗಿ ಅಣೆಕಟ್ಟು ಹಾಕಿ ಅಂತರ್ಜಲ ವೃದ್ಧಿಗೆ ಗ್ರಾಮಸ್ಥರೇ ಪ್ರಯತ್ನ ನಡೆಸಿದ್ದಾರೆ. ಅದರೊಂದಿಗೆ ಉಳಿಯಾರು ಬಳಿ ಅಣೆಕಟ್ಟು ರಿಪೇರಿಗೆ ವಿಶೇಷ ಆದ್ಯತೆ ನೀಡಬೇಕಿದೆ.

ಇನ್ನಂಜೆ ಗ್ರಾಮ ಪಂಚಾಯತ್‌
ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಪಾಂಗಾಳ ಸದಾಡಿ, ಗಾಂಧಿ ನಗರ ಮತ್ತು ಸರಸ್ವತಿ ನಗರ, ಮಂಡೇಡಿ ಪರಿಸರದಲ್ಲಿ  ನೀರಿನ ಸಮಸ್ಯೆ ಇದೆ. ಮಳೆ ವಿಳಂಬವಾದರೆ ಇನ್ನಂಜೆ – ಗೋಳಿಕಟ್ಟೆಯಲ್ಲೂ ಸಮಸ್ಯೆ ಉದ್ಭವವಾಗುತ್ತದೆ.  
ನೀರಿನ ಯೋಜನೆಗೆ 6 ಲಕ್ಷ ರೂ.

ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿ  ಬಾವಿ ಕೊರೆಯುವಿಕೆ, ಶುಚಿತ್ವ, ಪಂಪ್‌ ಫಿಟ್ಟಿಂಗ್‌, ಮೋಟಾರ್‌ ಫಿಟ್ಟಿಂಗ್‌, ಪೈಪ್‌ಲೈನ್‌ ಅಳವಡಿಕೆ, ಪೈಪ್‌ಲೈನ್‌ ನಿರ್ವಹಣೆ, ಬೋರ್‌ವೆಲ್‌ ರಚನೆ ಇತ್ಯಾದಿ ಯೋಜನೆಗಳಿಗೆ ಪ್ರತೀ ವರ್ಷ 5ರಿಂದ 6 ಲಕ್ಷ ರೂ. ಖರ್ಚಾಗುತ್ತದೆ. ಪಾಂಗಾಳ ಸದಾಡಿ, ಗಾಂಧಿ ನಗರ, ಸರಸ್ವತಿ ನಗರ, ಮಂಡೇಡಿಗೆ ಕಳೆದ ವರ್ಷ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗಿದೆ. ಕಳೆದ ವರ್ಷ ಇದಕ್ಕಾಗಿ  87 ಸಾವಿರ ರೂ. ಖರ್ಚಾಗಿದೆ. ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿನ ಸರಕಾರಿ ಬಾವಿಗಳನ್ನು ಆಳಗೊಳಿಸಿ ಸಮಸ್ಯೆ ಪರಿಹಾರಕ್ಕೆ ಗ್ರಾ.ಪಂ. ಯೋಜನೆ ರೂಪಿಸಿದೆ. 

ಟ್ಯಾಂಕರ್‌ ಮೂಲಕ ನೀರು ಪೂರೈಕೆ
ಮಜೂರು ಗ್ರಾ.ಪಂ. ವ್ಯಾಪ್ತಿಯಲ್ಲಿ  ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಪ್ರತೀ ವರ್ಷ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಈ ವರ್ಷವೂ ಟಾಸ್ಕ್ಫೋರ್ಸ್‌ನಡಿ ಅಗತ್ಯ ಪ್ರದೇಶಗಳಿಗೆ ನೀರು ಪೂರೈಸಲಾಗುವುದು. ಪ್ರತ್ಯೇಕ 2 ಬೋರ್‌ವೆಲ್‌ ರಚನೆ ಮಾಡಲಾಗುತ್ತಿದೆ. ನಳ್ಳಿ ನೀರಿನ ಬಿಲ್‌ ಪಾವತಿಸದೆ ಇರುವವರಿಗೆ ನೋಟಿಸ್‌ ನೀಡಿ ನೀರಿನ ಸಂಪರ್ಕ ಕಟ್‌ ಮಾಡುವ ಎಚ್ಚರಿಕೆ ನೀಡಲಾಗುತ್ತಿದೆ. ನೀರು ಪೋಲಾಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
– ಪ್ರತಾಪ್‌ಚಂದ್ರ ಶೆಟ್ಟಿ, ಪಿಡಿಒ, ಮಜೂರು ಗ್ರಾಮ ಪಂಚಾಯತ್‌

ಬೇಸಗೆಗೆ ಮೊದಲೇ ಬಾವಿ ನಿರ್ಮಾಣ
ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯ ಪಾಂಗಾಳ ಪೆರಿಯ ಕೆರೆ ಬಳಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಜಿ.ಪಂ. ಅನುದಾನದಡಿ ಬಾವಿ ರಚನೆಗೆ ಹಣ ಬಿಡುಗಡೆಯಾಗಿದೆ. ಇನ್ನಂಜೆ ಶಾಲೆಯ ಬಳಿ ಶಿಥಿಲಗೊಂಡ ಓವರ್‌ಹೆಡ್‌ ಟ್ಯಾಂಕ್‌ಗೆ ಬದಲಾಗಿ ಹೊಸ ಓವರ್‌ ಹೆಡ್‌ ಟ್ಯಾಂಕ್‌ ರಚನೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಅಗತ್ಯಬಿದ್ದರೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಅನುದಾನ ಸಿಗಲಿದೆ. ಬೇಸಗೆಗೆ ಮೊದಲೇ ಬಾವಿ ನಿರ್ಮಾಣ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು.
– ರಾಜೇಶ್‌ ಶೆಣೈ, ಪಿಡಿಒ, ಇನ್ನಂಜೆ ಗ್ರಾಮ ಪಂಚಾಯತ್‌

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.