ಸಮಸ್ಯೆ ಬಗೆಹರಿಯದಿದ್ದರೆ ಬಿಜೆಪಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ


Team Udayavani, Apr 26, 2017, 12:35 PM IST

BJP_symbol.jpg

ಕಾಸರಗೋಡು: ಕೇರಳದ ಎಡರಂಗ ಸರಕಾರವು ಇತ್ತೀಚೆಗೆ ಹೊರಡಿಸಿದ ಮಲಯಾಳ ಕಡ್ಡಾಯ ಆದೇಶದಿಂದ ಗಡಿನಾಡು ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾಕ ಪ್ರದೇಶದ ಶಾಲೆಗಳನ್ನು  ಸಂಪೂರ್ಣ ಹೊರತುಪಡಿಸಲೇಬೇಕು. ಇಲ್ಲದಿದ್ದಲ್ಲಿ  ಉಗ್ರ ಹೋರಾಟಕ್ಕಿಳಿಯಲಾಗುವುದು ಎಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌ ಸ್ಪಷ್ಟ  ಮುನ್ನೆಚ್ಚರಿಕೆ ನೀಡಿದ್ದಾರೆ.

ಕಾಸರಗೋಡು ಪ್ರಸ್‌ ಕ್ಲಬ್‌ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ  ಮಾತನಾ ಡಿದ ಅವರು, ಭಾಷಾ ಅಲ್ಪಸಂಖ್ಯಾಕರಿಗೆ ತಮ್ಮ  ಭಾಷೆಯಲ್ಲಿಯೇ ಕಲಿಯುವ ಹಕ್ಕು ಮತ್ತು  ಸ್ವಾತಂತ್ರÂವನ್ನು ನಮ್ಮ  ಸಂವಿಧಾನ ಒದಗಿಸಿದೆ. ಆದರೆ ರಾಜ್ಯದ ಎಲ್‌ಡಿಎಫ್‌ ಸರಕಾರಕ್ಕೆ ಇದು ಗೊತ್ತಿಲ್ಲದಿರುವುದು ವಿಪರ್ಯಾಸ ಎಂದು ಮಾರ್ಮಿಕವಾಗಿ ಹೇಳಿದರು. ಸರಕಾರ ಹೊರಡಿಸಿದ ಈ ನೂತನ ಮಲಯಾಳೀಕರಣ ಆದೇಶ ಕನ್ನಡ ಮತ್ತು  ಕನ್ನಡಿಗರ  ಕತ್ತು ಹಿಸುಕು ವಂತೆ ಮಾಡಿದೆ. ಮಾತ್ರವಲ್ಲದೆ ಇದು ಸಂವಿಧಾನದ ಸ್ಪಷ್ಟ  ಉಲ್ಲಂಘನೆ ಯಾಗಿದೆ. ಆದುದರಿಂದ ಈ ಅಧ್ಯಾದೇಶ ತಿದ್ದುಪಡಿ ಮಾಡಿ ಕನ್ನಡಿಗರನ್ನು  ಹೊರತು ಪಡಿಸಬೇಕು. ಒಂದು ವೇಳೆ ಸರಕಾರವು ಇದಕ್ಕೆ ಮುಂದಾಗದಿದ್ದಲ್ಲಿ  ಮುಂದಿನ ದಿನಗಳಲ್ಲಿ  ಬಿಜೆಪಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಕಾಸರಗೋಡು ಕನ್ನಡಿಗರ ಶಕ್ತಿ ಪ್ರದರ್ಶಿಸಲಾಗುವುದು ಎಂದರು.

ನೂತನ ಅಧ್ಯಾದೇಶದಲ್ಲಿ  ಒಂದರಿಂದ ಹತ್ತನೇ ತರಗತಿ ವರೆಗೆ 2017ರಿಂದ ಮಲಯಾಳವನ್ನು  ಕಡ್ಡಾಯವಾಗಿ ಕಲಿಸಬೇಕೆಂದು ತಿಳಿಸಲಾಗಿದೆ. ಇಷ್ಟೆಲ್ಲ ಅವಾಂತರ ಸಂಭವಿಸಿದ್ದರೂ ಜಿಲ್ಲೆಯ ನಾಲ್ಕು ಮಂದಿ ಶಾಸಕರಾಗಲಿ, ಜಿಲ್ಲೆಯ ಉಸ್ತುವಾರಿ ಹೊಂದಿರುವ ಸಚಿವರಾಗಲಿ ಇದುವರೆಗೆ ಈ ಬಗ್ಗೆ  ಯಾವುದೇ ಚಕಾರವೆತ್ತದೆ ಮೌನವ್ರತದಲ್ಲಿದ್ದಾರೆ. ಈ ಹಿಂದೆ ಕನ್ನಡಿಗರ ಬಗ್ಗೆ  ಮೊಸಳೆ ಕಣ್ಣೀರು ಸುರಿಸಿದ್ದ  ಜಿಲ್ಲೆಯ ಶಾಸಕರು, ಸಚಿವರು ಇದೀಗ ಮೋಸದ ಆಟ ಆಡುತ್ತಿದ್ದಾರೆ. ಇವರೆಲ್ಲರೂ ಜಿಲ್ಲೆಯ ಅಲ್ಪಸಂಖ್ಯಾಕ ಕನ್ನಡಿಗರನ್ನು  ನಿರಂತರವಾಗಿ ಅವಗಣಿ ಸುತ್ತಿದ್ದಾರೆ ಎಂದು ಕೆ. ಶ್ರೀಕಾಂತ್‌ ಆರೋಪಿಸಿದರು.

ಜಿಲ್ಲೆಯ ಸಚಿವರು, ಶಾಸಕರು ಈ ವಿಚಾರದಲ್ಲಿ  ತಮ್ಮ  ನಿಲುವನ್ನು  ಕೂಡಲೇ ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು. ಇದಲ್ಲದೆ ಈ ವಿಷಯದಲ್ಲಿ  ಜಿಲ್ಲೆಯ ಇತರ ರಾಜಕೀಯ ಪಕ್ಷಗಳು ಇದುವರೆಗೆ ತಮ್ಮ  ನಿಲುವನ್ನು  ಬಹಿರಂಗಪಡಿಸಿಲ್ಲ. ಇದು ಕನ್ನಡಿಗರ ಸಂಶಯಕ್ಕೆ ಕಾರಣವಾಗಿದೆ. ಆದಕಾರಣ ಎಲ್ಲ  ರಾಜಕೀಯ ಪಕ್ಷ ಗಳು ತಮ್ಮ  ಧೋರಣೆಯನ್ನು  ಸ್ಪಷ್ಟಪಡಿಸ ಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಆಗ್ರಹಿಸಿದರು.

ಇದೇ ರೀತಿ ಯುಡಿಎಫ್‌ ಸರಕಾರವು ಅಧಿಕಾರದಲ್ಲಿದ್ದಾಗ ಹೊರತಂದ ಮಲಯಾಳ ಕಡ್ಡಾಯದ ವಿಚಾರವಾಗಿ 2015ನೇ ಡಿಸೆಂಬರ್‌ 17ರಂದು ವಿಧಾನಸಭಾ ಅಧಿವೇಶನದಲ್ಲಿ  ಸ್ಪಷ್ಟೀಕರಣ ನೀಡಿ ಭಾಷಾ ಅಲ್ಪಸಂಖ್ಯಾಕ ರನ್ನು  ಹೊರತುಪಡಿಸಲಾಗಿತ್ತು. ಆದರೆ ಬಳಿಕ ರಾಜ್ಯಪಾಲರ ಅಂಕಿತ ಹೊಂದಿದ ಅಧ್ಯಾದೇಶವು ಹೊರಬಂದಾಗ ವಿಧಾನ ಸಭಾ ಅಧಿವೇಶನದಲ್ಲಿ  ತಿದ್ದುಪಡಿ ಮಾಡಿದ ವಿಷಯವು ಅದರಿಂದ ಕಣ್ಮರೆ ಯಾಗಿತ್ತು. ಅನಂತರ ವಿಧಾನಸಭಾ ಅಧಿವೇಶನದಲ್ಲಿ  ಈ ಕುರಿತು ಸಮಗ್ರವಾಗಿ ಚರ್ಚಿಸಿ ಭಾಷಾ ಅಲ್ಪಸಂಖ್ಯಾಕ‌ರನ್ನು  ಮಲಯಾಳ ಕಡ್ಡಾಯದಿಂದ ಮತ್ತೆ  ಹೊರತುಪಡಿಸಲಾಗಿತ್ತು. ಆದುದರಿಂದ ಈ ವಿಷಯದಲ್ಲಿ  ವಿಧಾನಸಭಾ ಸ್ಪೀಕರ್‌ ಮಧ್ಯೆ ಪ್ರವೇಶಿಸಿ ಕಣ್ಮರೆಯಾದ ವಿಚಾರವನ್ನು  ಸರಿಪಡಿಸಿ ಅದಕ್ಕೆ ಕಾರಣಕರ್ತರಾದವರ ವಿರುದ್ಧ  ಕಠಿನ ಕ್ರಮ ಕೈಗೊಳ್ಳಬೇಕೆಂದು ಶ್ರೀಕಾಂತ್‌ ಒತ್ತಾಯಿಸಿದರು. ಈಗಿನ ಹೊಸ ಆದೇಶದಲ್ಲಿ  ಇಂಗ್ಲಿಷ್‌ ಭಾಷೆ ಕಲಿಯು ವವರಿಗೆ ಸವಲತ್ತುಗಳನ್ನು  ಒದಗಿಸಿದರೂ ಇಲ್ಲಿನ ಮೂಲ ನಿವಾಸಿಗಳಾದ ಭಾಷಾ ಅಲ್ಪಸಂಖ್ಯಾಕರಿಗೆ ಯಾವುದೇ ಪರಿಗಣನೆ ನೀಡದಿರುವುದು ಖಂಡನಾರ್ಹ. ಈ ನಡುವೆ ನೂತನ ಆದೇಶದ ಪ್ರಕಾರ ಅನುದಾನಿತ ಶಾಲೆಗಳಲ್ಲಿ  ಕೂಡ ಮಲಯಾಳವನ್ನು  ಕಲಿಸಬೇಕೆಂದು ಹೇಳಲಾಗುತ್ತಿದೆಯೇ ಹೊರತು ಶಾಲೆಯ ಭೌತಿಕ ಸೌಕರ್ಯದ ಬಗ್ಗೆ  ಏನನ್ನೂ  ಹೇಳುತಿಲ್ಲ. ಇದು ಕೇವಲ ಪ್ರಚಾರಕ್ಕಾಗಿ ಮಾತ್ರ ಮಾಡಿದ ಆದೇಶವಾಗಿದೆ ಎಂದು ಅವರು ಆರೋಪಿಸಿದರು.

ಉಪ್ಪುನೀರು ಕುಡಿಸುತ್ತಿರುವ ಆಡಳಿತ 
ಕಾಸರಗೋಡು ನಗರದ ಜನರು ಎದುರಿಸುತ್ತಿರುವ ಉಪ್ಪುನೀರು ಸಮಸ್ಯೆ ಯನ್ನು  ಪರಿಹರಿಸಲು ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ನಗರದ ಉಪ್ಪುನೀರಿನ ಸಮಸ್ಯೆಯನ್ನು  ಕೂಡಲೇ ಸರಿಪಡಿಸಬೇಕು. ಈ ನಿಟ್ಟಿನಲ್ಲಿ  ಸಂಬಂಧಪಟ್ಟ  ಆಡಳಿತ ಅಥವಾ ಇಲಾಖೆಯು ಅಗತ್ಯದ ವ್ಯವಸ್ಥೆ  ಜಾರಿಗೊಳಿಸಬೇಕು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿ ಸುತ್ತ  ಕೆ. ಶ್ರೀಕಾಂತ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ  ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯ ಎಂ. ಸಂಜೀವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ರವೀಶ ತಂತ್ರಿ ಕುಂಟಾರು, ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ  ಮುಂತಾದವರು ಉಪಸ್ಥಿತರಿದ್ದರು.
 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.