ಯಕ್ಷಗಾನ ಬೊಂಬೆಯಾಟ: ಕೆ.ವಿ. ರಮೇಶ್‌ರಿಂದ ಸಾಕ್ಷಚಿತ್ರ ಪ್ರದರ್ಶನ


Team Udayavani, Jul 7, 2017, 3:50 AM IST

sakshachitra.jpg

ಬದಿಯಡ್ಕ: ಕಾಸರಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಎಡನೀರಿನಲ್ಲಿ ನಡೆದ ಯಕ್ಷಗಾನ ತರಬೇತಿ ಶಿಬಿರದಲ್ಲಿ ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನಿರ್ದೇಶಕ ಕೆ.ವಿ. ರಮೇಶ್‌ ಅವರಿಂದ ಯಕ್ಷಗಾನ ಬೊಂಬೆಯಾಟ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಬೊಂಬೆ ಕುಣಿತ ಪ್ರಾತ್ಯಕ್ಷಿಕೆ ನಡೆಯಿತು.

ಕಾರ್ಯಕ್ರಮದಲ್ಲಿ ಕೆ.ವಿ.ರಮೇಶ್‌ ಅವರು ಮಾತನಾಡಿ ಇಷ್ಟೊಂದು ಚಂದವಾದ ಕಲೆ ಪ್ರಪಂಚದಲ್ಲಿ ಬೇರೆ ಇಲ್ಲ. ಆದುದರಿಂದ ಇದನ್ನು ಉಳಿಸುವ ಪ್ರಯತ್ನ ಆಗಲೇಬೇಕು. ಈ ಕಲೆಯ ಮೇಲಿನ ಪ್ರೀತಿಯನ್ನು  ಬೆಳೆಸಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಯಕ್ಷಗಾನ ಬೊಂಬೆಯಾಟದ ಬಗೆಗಿನ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು  ಐದು ದೇಶಗಳಲ್ಲಿ  ಯಕ್ಷಗಾನ ಬೊಂಬೆಯಾಟ ಪ್ರದರ್ಶನ ನೀಡಿದ್ದೇನೆ. 1995ರಲ್ಲಿ  ಪಾಕಿಸ್ಥಾನದಲ್ಲಿ ಮೊದಲ ಪ್ರದರ್ಶನ ನೀಡಲಾಗಿತ್ತು. ಪಂಚವಟಿ  ಪ್ರಸಂಗವನ್ನು ಮೊದಲು ಪ್ರದರ್ಶಿಸಲಾಗಿತ್ತು. ದೇಶ-ವಿದೇಶಗಳಲ್ಲಿ  3000ದಷ್ಟು ಪ್ರದರ್ಶನಗಳನ್ನು ನಡೆಸಲಾಗಿದೆ. ಯಕ್ಷಗಾನ ಬೊಂಬೆಯಾಟಕ್ಕೆ ನಾಲ್ಕು ಸಾವಿರ ವರ್ಷಗಳ ಇತಿಹಾಸವಿದೆ ಎಂದರು.

ಬಣ್ಣಗಾರಿಕೆಗಳಿಗೆ ನಾಜೂಕು ಇರುವುದು ಕರಾವಳಿಯಲ್ಲಿ ಮಾತ್ರ. ಪರಂಪರೆಗೆ ಒತ್ತು ಕೊಟ್ಟು ಯಕ್ಷಗಾನದ ಬೊಂಬೆಗಳಿಗೆ ವೇಷಭೂಷಣಗಳನ್ನು ಮಾಡಲಾಗಿದೆ. ಇದೀಗ ಈ  ಬೊಂಬೆಗಳಿಗೆ 15 ವರ್ಷಗಳು ಸಂದಿವೆ ಎಂದರು.

ವಿವಿಧ ಭಂಗಿಯ ಬೊಂಬೆ ತಯಾರಿಗೆ ನಿರ್ಧಾರ
ವಿದೇಶದಲ್ಲಿ ಪ್ರದರ್ಶನ ನೀಡಿದಾಗ ಅಲ್ಲಿ ಕಥಾ ಸಾರಂಶವನ್ನು  ಇಂಗ್ಲೀಷಿನಲ್ಲಿಯೇ ಹೇಳಲಾಗುತ್ತದೆ. ಬಳಿಕ ಪ್ರಸಂಗವನ್ನು ಕನ್ನಡದಲ್ಲಿಯೇ ಹೇಳಲಾಗುತ್ತದೆ. ಬೊಂಬೆಯಾಟವನ್ನು ಒಂದು ಗಂಟೆ ಹೊತ್ತು ಪ್ರದರ್ಶಿಸಲಾಗುತ್ತದೆ. ಅರ್ಧ ಗಂಟೆ ದೃಶ್ಯ, ಕಾಲು ಗಂಟೆ  ಭಾಗವತಿಕೆ ಮತ್ತು ಕಾಲು ಗಂಟೆ  ಅರ್ಥಗಾರಿಕೆ ನಡೆಯುತ್ತದೆ ಎಂದು ಹೇಳಿದ ಕೆ.ವಿ.ರಮೇಶ್‌ ಅವರು, ಬೊಂಬೆಗಳನ್ನು  ಹಿಮ್ಮೇಳವಾಗಿ  ಬಳಸಲು ಸಾಧ್ಯವಿಲ್ಲ. ಒಂದು ವೇಷವನ್ನು ವಿವಿಧ ಭಂಗಿಯಲ್ಲಿ ತಯಾರಿಸಿ  ಬೊಂಬೆಗಳನ್ನು ಸಿದ್ಧಪಡಿಸಲು  ತೀರ್ಮಾನಿಸಲಾಗಿದೆ ಎಂದರು.

ಭಾರತದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ  ಯಕ್ಷಗಾನ ಬೊಂಬೆಯಾಟ ಪ್ರದರ್ಶನ  ನಡೆದಿದೆ. ಕೇವಲ ಕೇರಳ ಹಾಗೂ ಕರ್ನಾಟಕದಲ್ಲಿ ಮಾತ್ರವಲ್ಲ. ಉಳಿದ ರಾಜ್ಯಗಳಾದ್ಯಂತ  ಪ್ರದರ್ಶನವಾಗಿದೆ. ಯಕ್ಷಗಾನ ಅಭ್ಯಾಸ ಮಾಡಿದ್ದೇ ಬೊಂಬೆಯಾಟಕ್ಕೆ ಸ್ಫೂರ್ತಿಯಾಯಿತು ಎಂದು ಕೆ.ವಿ. ರಮೇಶ್‌ ಹೇಳಿದರು.

ನಾಟ್ಯಗುರು ದಿವಾಣ ಶಿವಶಂಕರ ಭಟ್‌ ಉಪಸ್ಥಿತರಿದ್ದರು. ಸುಜಾತಾ, ಅನುರಾಧಾ, ವೃಂದ, ತಿಲಕ ಚರ್ಚೆಯಲ್ಲಿ ಭಾಗವಹಿಸಿದ್ದರು. ಶಿಬಿರಾರ್ಥಿ ದಿತಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಸಂಯೋಜನಾಧಿಕಾರಿ ಡಾ| ರತ್ನಾಕರ ಮಲ್ಲಮೂಲೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.  ಜಯಪ್ರಕಾಶ್‌ ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.