“ಪುರಾಣದ ಮೌನವನ್ನು ಆಧುನಿಕರು ತುಂಬಿಸಬೇಕು’
Team Udayavani, Jul 14, 2017, 2:20 AM IST
ಕಾಸರಗೋಡು: ಪುರಾಣವನ್ನು ಕೆಲವನ್ನು ಹೇಳದೆ ಮೌನವಾಗುತ್ತವೆ. ಪುರಾಣ ಕತೆಗಳ ಆಧಾರದಲ್ಲಿ ರಚನೆಯಾಗುವ ಆಧುನಿಕ ಕೃತಿಗಳು ಅಂತಹ ಮೌನವನ್ನು ಬಗೆದು ಮಾತನಾಡಿದಾಗ, ಮರು ನಿರೂಪಿತ ಕೃತಿಗಳಿಗೆ ಮೌಲ್ಯವಿರುತ್ತದೆ ಎಂದು ಯಕ್ಷಗಾನ ಕಲಾವಿದ ರಾಧಾಕೃಷ್ಣ ಕಲ್ಚಾರ್ ತಿಳಿಸಿದರು. ಪುರಾಣಗಳು ಕೆಲವೊಮ್ಮೆ ಅತಿ ವಾಸ್ತವ ಎಂದೆಣಿಸಿದರೂ ಅದರಲ್ಲಿ ಜೀವನ ಮೌಲ್ಯಗಳಾಗಿರುತ್ತವೆ. ಅದು ಕಾಲಾತೀತವಲ್ಲ. ಅದನ್ನು ಇಂದಿನ ಕಾಲದಲ್ಲಿ ಇದ್ದು ನೋಡುವುದು ಸರಿಯಲ್ಲ. ಆದರೆ ಅದರ ಹಿಂದಿನ ಉದ್ದೇಶ ಅರ್ಥಮಾಡಿಕೊಳ್ಳಬೇಕು. ಪುರಾಣದ ಮರು ನಿರೂಪಿತ ಕೃತಿಗಳಿಗೆ ಪ್ರಚಾರ ಸಿಕ್ಕಿದರೂ,
ಎಲ್ಲವನ್ನೂ ಶ್ರೇಷ್ಠ ಕೃತಿಗಳೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.
ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ಸ್ಮೃತಿ ಕಾರ್ಯಕ್ರಮದಲ್ಲಿ ವಿಚಾರ ಮಂಡಿಸುತ್ತಾ ತಿಳಿಸಿದರು.
ವಿಭಾಗದಲ್ಲಿ ಈ ಹಿಂದೆ ಸೇವೆ ಸಲ್ಲಿಸಿ ದಿವಂಗತರಾದ ಸುಬ್ರಾಯ ಭಟ್, ಬಿ.ಕೆ. ತಿಮ್ಮಪ್ಪ, ವೇಣುಗೋಪಾಲ ಕಾಸರಗೋಡು ಮತ್ತು ಬಿ. ಪದ್ಮನಾಭ ಅವರ ಕುರಿತಾಗಿ ನಿವೃತ್ತ ಪ್ರಾಧ್ಯಾಪಕ ಡಾ| ಸುಬ್ರಹ್ಮಣ್ಯ ಭಟ್ ಮಾತನಾಡಿದರು. ವಿಭಾಗ ಮುಖ್ಯಸ್ಥೆ ಸುಜಾತಾ ಎಸ್. ಅಧ್ಯಕ್ಷತೆ ವಹಿಸಿದ್ದರು.
ತೃತೀಯ ಪದವಿ ವಿದ್ಯಾರ್ಥಿಗಳಾದ ಸುನೀತಾ ಮತ್ತು ಸವಿತಾ ಅವರಿಗೆ ಪ್ರೊ| ಬಿ. ಪದ್ಮನಾಭ ಸ್ಮರಣಾರ್ಥ ನೀಡುವ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಶ್ರದ್ಧಾ ಪ್ರಾರ್ಥಿಸಿದರು. ಕಾರ್ಯಕ್ರಮ ಸಂಯೋಜಕಿ ಡಾ| ಆಶಾಲತಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?