ಸಾಕಾರಗೊಳ್ಳದ ವೀರಮಲೆ ಪ್ರವಾಸಿ ಯೋಜನೆ


Team Udayavani, Jul 14, 2017, 2:15 AM IST

VEERAMALE.jpg

ಕಾಸರಗೋಡು: ಚಾರಣಿಗರ ಸ್ವರ್ಗವೆಂದೇ ಖ್ಯಾತಿ ಪಡೆದಿರುವ ವೀರಮಲೆಯ ಪ್ರವಾಸಿ ಯೋಜನೆ ಕಡತದಲ್ಲೇ ಉಳಿದಿದೆ. ಕೇರಳದ ಸಚಿವರು ವೀರಮಲೆ ಪ್ರದೇಶವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದೆಂದು ಘೋಷಿಸಿದ್ದರೂ ಈ ವರೆಗೂ ಯಾವುದೇ ಪ್ರಾಥ ಮಿಕ ಪ್ರಕ್ರಿಯೆಯೂ ನಡೆದಿಲ್ಲ. ಸ್ಥಳೀಯರು ಬಹಳಷ್ಟು ನಿರೀಕ್ಷಿಸಿದ್ದರೂ ಯೋಜನೆ ಕಾರ್ಯಗತಗೊಳ್ಳದಿರುವುದರಿಂದ ನಿರಾಸೆಗೊಂಡಿದ್ದಾರೆ. ಸಚಿವರ ಘೋಷಣೆ ಗಾಳಿಗೋಪುರದಂತಾಗಿದೆ.

ಪ್ರಕೃತಿ ರಮಣೀಯ ಪ್ರದೇಶವಾಗಿರುವ ವೀರಮಲೆ ಚೆರ್ವತ್ತೂರು ಪಂಚಾಯತ್‌ನಲ್ಲಿ ನೆಲೆಗೊಂಡಿದ್ದು, ವೀರಮಲೆ ಬೆಟ್ಟವನ್ನು ಕಾರ್ಯಂ ಗೋಡು ನದಿ ಆವರಿಸಿಕೊಂಡಿದೆ. ಇದೇ ವೀರಮಲೆ 18 ನೇ ಶತಮಾನದಲ್ಲಿ ಡಚ್‌ರ ಪ್ರಮುಖ ಕೇಂದ್ರವಾಗಿತ್ತು. ರಾಣಿಪುರದಂತೆ ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುವ ವೀರಮಲೆ ಹಿಲ್‌ ಪ್ರವಾಸಿಗರ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಎಲ್ಲ ಸಾಧ್ಯತೆಗಳಿದ್ದು, ಈ ಬಗ್ಗೆ ಸಚಿವರು ಕೂಡ ಘೋಷಣೆ ಮಾಡಿದ್ದರು.

ಜನಪ್ರತಿನಿಧಿಗಳೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವೀರಮಲೆ ಬೆಟ್ಟಕ್ಕೆ ಹಲವು ಬಾರಿ ಭೇಟಿ ನೀಡಿ ಪ್ರವಾಸಿಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸುವ ಬಗ್ಗೆ ಚರ್ಚಿಸಲ್ಪಟ್ಟಿದ್ದರೂ, ಅಂತಹ ಯಾವುದೇ ಯೋಜನೆ ಕೈಗೂಡದಿದ್ದಾಗ ವೀರಮಲೆ ಪ್ರವಾಸಿ ಕೇಂದ್ರ ಯೋಜನೆಯನ್ನು ಖಾಸಗಿ ಹೂಡಿಕೆಯಿಂದ ಅಭಿವೃದ್ಧಿಪಡಿಸುವುದಾಗಿ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ಘೋಷಣೆ ಮಾಡಿದ್ದರು. ಆದರೆ ಸಚಿವರ ಘೋಷಣೆ ಕಡತದಲ್ಲೇ ಉಳಿದುಕೊಂಡಿದೆ. 

2016 ಡಿಸೆಂಬರ್‌ ತಿಂಗಳಲ್ಲಿ ಸಚಿವರು ವೀರಮಲೆಗೆ ಭೇಟಿ ನೀಡಿದ್ದರು. ಬಜೆಟ್‌ನ ಅಧಿವೇಶನಕ್ಕೆ ಮುನ್ನ ಸಚಿವರು ವೀರಮಲೆ ಭೇಟಿ ನೀಡಿ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಘೋಷಣೆ ಮಾಡಿದ್ದರಿಂದ ಸ್ಥಳೀಯರು ಬಹಳಷ್ಟು ನಿರೀಕ್ಷೆಯನ್ನು ಇರಿಸಿಕೊಂಡಿದ್ದರು. ಸಚಿವರ ಘೋಷಣೆಯ ಬಳಿಕ 6 ತಿಂಗಳು ಕಳೆದರೂ ಈ ವರೆಗೂ ಯಾವುದೇ ಪ್ರಸ್ತಾಪವಾಗಲೀ, ಪ್ರಾಥಮಿಕ ಪ್ರಕ್ರಿಯೆಯಾಗಲೀ ನಡೆದಿಲ್ಲ. ಇದರಿಂದ ಸಹಜವಾಗಿಯೇ ಸ್ಥಳೀಯರು ನಿರಾಸೆಗೊಂಡಿದ್ದಾರೆ.

ಸರಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು 
ಅರಣ್ಯ ಇಲಾಖೆಯ ಸ್ವಾಧೀನದಲ್ಲಿರುವ 70 ಎಕರೆ ಭೂಪ್ರದೇಶದಲ್ಲಿ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಬಗ್ಗೆ ವರ್ಷಗಳ ಹಿಂದೆಯೇ ಡಿ.ಟಿ.ಪಿ.ಸಿ. ಮುಖಾಂತರ ಯೋಜನೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿತ್ತು.

ಸ್ವದೇಶಿ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ತಕ್ಕುದಾದ ಅಭಿವೃದ್ಧಿ ಪಡಿಸಲಾಗುವು ದೆಂದು ಡಿಟಿಪಿಸಿ ಅಧಿಕಾರಿಗಳೊಂದಿಗಿದ್ದ ಜನಪ್ರತಿನಿಧಿಗಳು ಘೋಷಿಸಿದ್ದರು. ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಹಾಗು ಪ್ರವಾಸಿಗ ರನ್ನು ಆಕರ್ಷಿಸಲು ವಿವಿಧ ಸೌಕರ್ಯಗಳನ್ನು ಏರ್ಪಡಿಸುವುದಾಗಿ ತಿಳಿಸಲಾಗಿತ್ತು. 

ವೀರಮಲೆ ಬೆಟ್ಟದ ಮೇಲೆ ಮಕ್ಕಳ ಪಾರ್ಕ್‌, ಆಟಿಕೆಗಳ ಜೋಡಣೆ, ರೋಪ್‌ ವೇ, ತೇಜಸ್ವಿನಿ ಹೊಳೆಯಿಂದ ವೀರಮಲೆ ತಲುಪಲು ವಿಶೇಷ ರೀತಿಯ ಬೋಟ್‌ ಸರ್ವೀಸ್‌ ಆರಂಭಿಸುವುದು, ಈಜು ಕೊಳ ಮೊದಲಾದವುಗಳನ್ನು ಕಲ್ಪಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಎಲ್ಲ ಘೋಷಣೆ ಗಳೂ, ಯೋಜನೆಗಳೂ ಮರೆಯಾದವು. ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ತಕ್ಕ ಪ್ರದೇಶ ವಾಗಿರುವ ವೀರಮಲೆ ಬೆಟ್ಟವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗಿದ್ದರೆ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತಿತ್ತು. ಆದರೆ ಅದು ಈ ವರೆಗೂ ಸಾಧ್ಯವಾಗಿಲ್ಲ. 

ಮಳೆಗಾಲದಲ್ಲಿ ನಿರಾಶ್ರಿತರಾಗುವ ಜನರಿಗಾಗಿ ಎರಡು ಕೇಂದ್ರಗಳನ್ನು ಈ ಬೆಟ್ಟದ ಮೇಲೆ ನಿರ್ಮಿಸಲಾಗಿದೆ. ಈ ಕೇಂದ್ರಗಳು ಇದೀಗ ಸಮಾಜ ವಿದ್ರೋಹಿಗಳ ಅಟ್ಟಹಾಸ ಕೇಂದ್ರವಾಗಿ ಬದಲಾಗಿದೆ ಎಂಬುದಾಗಿ ಸ್ಥಳೀಯರು ಸಾರ್ವತ್ರಿಕವಾಗಿ ಆರೋಪಿಸುತ್ತಿದ್ದಾರೆ.

ಕಾಂಞಂಗಾಡ್‌ನಿಂದ ಸುಮಾರು 16 ಕಿ.ಮೀ. ದೂರದಲ್ಲೂ, ಬೇಕಲ ಕೋಟೆಯಿಂದ 29 ಕಿ.ಮೀ. ದೂರದಲ್ಲಿರುವ ಚೆರ್ವತ್ತೂರಿನ ವೀರಮಲೆ ಹಿಲ್‌ಪ್ರದೇಶಕ್ಕೆ ಹತ್ತಿರದ ರೈಲು ನಿಲ್ದಾಣ ಚೆರ್ವತ್ತೂರು ಆಗಿದೆ.

ಕಾಸರಗೋಡು ಜಿಲ್ಲೆಯ ಪ್ರಮುಖ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಸಾಧ್ಯತೆಯಿರುವ ಪ್ರದೇಶವಾಗಿರುವ ವೀರಮಲೆ ಬೆಟ್ಟ ಚಾರಣಿಗರ ಸ್ವರ್ಗವಾಗಿ ಪರಿವರ್ತಿಸಬಹುದು. ಅಲ್ಲದೆ ಬೇಕಲ ಕೋಟೆಯನ್ನು ಆಸ್ವಾದಿಸಲು ಬರುವ ಸ್ವದೇಶಿ ಮತ್ತು ವಿದೇಶಿ ಪ್ರವಾಸಿಗರನ್ನೂ ಇತ್ತ ಆಕರ್ಷಿಸಬಹುದಾಗಿದೆ. ಈ ಕಾರಣದಿಂದ ಈ ಬೆಟ್ಟ ಪ್ರದೇಶ ಅಭಿವೃದ್ಧಿ ಸಾಧ್ಯವಾದರೆ ಜಿಲ್ಲೆಯ ಆರ್ಥಿಕ ಸ್ಥಿತಿಯ ಮೇಲೂ ಉತ್ತಮ ಪರಿಣಾಮ ಬೀರಲಿದೆ. 

ಹೀಗಿರುವುದರಿಂದ ವೀರಮಲೆ ಪ್ರವಾಸಿ ಕೇಂದ್ರವನ್ನು ಶೀಘ್ರದಲ್ಲೇ ಅಭಿವೃದ್ಧಿ ಸಾಧ್ಯವಾ ಗಬೇಕು. ಈ ಮೂಲಕ ಸಚಿವರ ಘೋಷಣೆ ಸಾಕಾರಗೊಳ್ಳಬೇಕು. ಜನರ ಬಹಳ ನಿರೀಕ್ಷೆಯ ಪ್ರವಾಸಿ ಕೇಂದ್ರ ಸಾಕಾರಗೊಳ್ಳಬಹುದೇ ಎಂಬುದಾಗಿ ಕಾಸರಗೋಡಿನ ಜನತೆ ಎದುರು ನೋಡುತ್ತಿದ್ದಾರೆ.

– ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.