ಚಾಂಡಿಮೂಲೆ ವನ ಪ್ರದೇಶಕ್ಕೆ ಪುಟಾಣಿಗಳ ಚಾರಣ


Team Udayavani, Aug 2, 2017, 6:45 AM IST

charana.jpg

ಬದಿಯಡ್ಕ: ಮಾನವ ಮತ್ತು ಪ್ರಕೃತಿಯೊಂದಿಗಿನ ಅವಿನಾಭಾವ ಸಂಬಂಧವನ್ನು ತೆರೆದಿಡುವುದೇ ಮೈಮನಗಳಲ್ಲಿ ನವ ಚೈತನ್ಯ ತುಂಬುವ ಚಾರಣಗಳು. ಪ್ರಕೃತಿಯ ಸೊಬಗನ್ನು ರಮಣೀಯತೆಯನ್ನು ಅನುಭವಿಸುವುದರ ಜತೆಯಲ್ಲಿ ಕುತೂಹಲಕಾರಿ ವಿಷಯಗಳನ್ನು ತಿಳಿದುಕೊಳ್ಳಲು, ಮೈಮರೆತು ಸೌಂದರ್ಯವನ್ನು ತಿಳಿದುಕೊಳ್ಳಲು ಹಾಗೂ ಸೌಂದರ್ಯವನ್ನು ಸವಿಯಲು ಹಿರಿಯ-ಕಿರಿಯ ಮನಸುಗಳಿಗೆ ಅದೇನೋ ಉತ್ಸಾಹ. ಆದುದರಿಂದಲೇ ಶಾಲಾಮಕ್ಕಳು ನಡೆಸುವ ಸಣ್ಣಸಣ್ಣ ಚಾರಣಗಳು ಹೆಚ್ಚು ಮಹತ್ವವನ್ನು ಪಡೆಯುತ್ತವೆ.

ಶಾಲೆಗಳಲ್ಲಿ ಕೈದೋಟಗಳನ್ನು ನಿರ್ಮಿಸಿ ಹಸಿರಾದ ಶಾಲಾ ಪರಿಸರ ಹಾಗೂ ಆರೋಗ್ಯವಂತ ವಾತಾವರಣವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಸೀಡ್‌ ಮಹತ್ವದ ಹೆಜ್ಜೆಯಾಗಿದೆ. ಮಾನ್ಯ ಜ್ಞಾನೋದಯ ಹಿರಿಯ ಪ್ರಾಥಮಿಕ ಶಾಲೆಯ ಸೀಡ್‌ ಕ್ಲಬ್‌ನ ಸದಸ್ಯರು ಅಧ್ಯಾಪಕರೊಂದಿಗೆ ಚಾಂಡಿಮೂಲೆ ವನ ಪ್ರದೇಶಕ್ಕೆ ಚಾರಣ ನಡೆಸಿದರು.

ಧಾರಾಕಾರವಾಗಿ ಸುರಿಯುವ ಮಳೆಯನ್ನು ಲೆಕ್ಕಿಸದೆ ಹೆಚ್ಚಿದ ಬಳ್ಳಿಗಳನ್ನು ಕಡಿದು ದಾರಿಮಾಡುತ್ತಾ ವನಪ್ರದೇಶವನ್ನು ತಲುಪಿದರು. ಈ ಪ್ರದೇಶವು ಇಳಿಜಾರಿನಿಂದ ಕೂಡಿದ್ದು ಕಾಡು, ಬಳ್ಳಿಗಳನ್ನೇ ಆಧರಿಸಿ ಕೆಳಗಿಳಿಯುವ ಪ್ರಯತ್ನ ಮಾಡಿದರು. ಚಾರಣಿಗರಲ್ಲಿ ಪುಟಿಯುತ್ತಿದ್ದ ಉತ್ಸಾಹ ಅವರನ್ನು ಮುನ್ನಡೆಸಿತು. ಕಾಡಿನ ನಡುವೆ ಪಾರೆ ಕಲ್ಲುಗಳ ನಡುವೆ ಕಂಡುಬಂದ ಗುಹಾ ಕವಾಟವು ಮಕ್ಕಳಿಗೊಂದು ಕೌತುಕವಾಗಿತ್ತು. ಅಂತೆಯೇ ಗುಹೆಯ ಎದುರು ಭಾಗದಲ್ಲಿರುವ ವಿಶಾಲವಾದ ಕೊಳವೂ ಚಾರಣಿಗರನ್ನು ತನ್ನತ್ತ ಸೆಳೆಯಿತು.

ವನಪ್ರದೇಶದಲ್ಲಿರುವ ಮರ-ಬಳ್ಳಿಗಳು, ಔಷಧೀಯ ಸಸ್ಯಗಳು ಹಾಗೂ ಬಣ್ಣಬಣ್ಣದ ಚಿಟ್ಟೆಗಳ ಕುರಿತಾದ ಮಾಹಿತಿಯನ್ನು ಸೀಡ್‌ ಕೋರ್ಡಿನೇಟರ್‌ ಪಿ.ವಿ. ಪ್ರದೀಪ್‌ಕುಮಾರ್‌ ನೀಡಿದರು. ಮುಖ್ಯೋಪಾಧ್ಯಾಯರಾದ ಟಿ. ಗೋವಿಂದನ್‌ ನಂಬೂದಿರಿ, ಸ್ಟಾಫ್‌ ಸೆಕ್ರಟರಿ ಎಸ್‌.ಎಸ್‌. ರಾಜ್‌, ಅಧ್ಯಾಪಕರುಗಳಾದ ಆಶಾ ಕಿರಣ್‌, ಸಾವಿತ್ರಿ, ಚಿತ್ರಕಲಾ, ಟಿ.ವಿ. ರಮ್ಯಾ, ಸೀಡ್‌ ಕ್ಯಾಪ್ಟನ್‌ ಅನಸ್‌ ಮುಂತಾದವರು ಚಾರಣದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.