‘ಜೀವನದ ಗುರಿಯತ್ತ ಕಾಣುವ ಕನಸು ಎತ್ತರಕ್ಕೊಯ್ಯುತ್ತದೆ: ಹಂಸ


Team Udayavani, Mar 29, 2018, 9:50 AM IST

Hamsa-28-3.jpg

ಕಾಸರಗೋಡು: ಓರ್ವ ನಾಯಕ ಪರಿಪೂರ್ಣನಾಗಬೇಕಾದರೆ ಆತನಲ್ಲಿ ಉನ್ನತ ಮಟ್ಟದ ಕನಸು ಮನೆ ಮಾಡಿರಬೇಕು. ಜೀವನದಲ್ಲಿ ನಾವು ಕಾಣುವ ಕನಸು ನಮ್ಮನ್ನು ಎತ್ತರಕ್ಕೊಯ್ಯಬಲ್ಲದು. ‘ಟೈಮ್‌, ಎನರ್ಜಿ, ಮನಿ’ ಉಪಯೋಗಿಸಲು ನಾಯಕನಾದವ ಸಿದ್ಧನಿರಬೇಕು ಎಂದು ಪ್ರಸಿದ್ಧ ತರಬೇತುದಾರರಾದ ಹಂಸ ಪಾಲಕ್ಕಿ ತಿಳಿಸಿದರು. ಅವರು ಮಂಗಳವಾರ ಬದಿಯಡ್ಕದಲ್ಲಿ ವ್ಯಾಪಾರಿಗಳ ನೇತೃತ್ವ ಪರಿಶೀಲನಾ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ನಾಯಕನಾಗಬೇಕೆಂಬ ಹಂಬಲ ಎಲ್ಲರಲ್ಲೂ ಮನೆಮಾಡಿರುತ್ತದೆ. ನಮ್ಮ ಕುಟುಂಬಕ್ಕೆ, ನಮ್ಮ ಸಂಸ್ಥೆಗೆ ನಾವು ಲೀಡರ್‌ ಆಗಿರದಿದ್ದರೆ ನಮ್ಮನ್ನು ಲೀಡ್‌ ಮಾಡಲು ಬೇರೊಬ್ಬ ಬರುತ್ತಾನೆ. ಸಮಯ, ಶಕ್ತಿ, ಯುಕ್ತಿ ನಮ್ಮಲ್ಲಿರಬೇಕು. ಅಗತ್ಯಕ್ಕೆ ತಕ್ಕಂತಹ ಹಣವನ್ನು ಖರ್ಚುಮಾಡುವಲ್ಲಿ ನಾವು ಎಡವಬಾರದು. ನಮ್ಮೊಳಗಿನ ಸಂಘಟನಾತ್ಮಕ ಶಕ್ತಿಯನ್ನು ಹೊರತರಬೇಕು. ಸಂಘಟನೆಗಳನ್ನು ಅಳೆಯುವುದು ಅದರ ಉನ್ನತ ಕಾರ್ಯಗಳಿಂದ. ಪ್ರತಿ ಯೂನಿಟ್‌ ಸದಸ್ಯರೂ ಸಭೆ ಸೇರುವುದು, ಭಾಷಣ ಕಲೆಯನ್ನು ಕರಗತಮಾಡಿಕೊಳ್ಳಬೇಕು. ಸಂಘಟನೆಯ ಪ್ರಧಾನ ಆಧಾರ ಸ್ತಂಭವಾದ ಅಧ್ಯಕ್ಷನು ಆತನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಿದರೆ ಸಂಘಟನೆಯು ಬಲಗೊಳ್ಳುತ್ತದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳಿಗೆ ಅಭಿನಂದನ ಸಮಾರಂಭವೂ ನಡೆಯಿತು. ವಲಯ ಅಧ್ಯಕ್ಷ ಕುಂಜಾರ್‌ ಮುಹಮ್ಮದ್‌ ಹಾಜಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಧ್ಯಕ್ಷ ಅಹಮ್ಮದ್‌ ಶರೀಫ್‌ ಅಭಿನಂದನೆಯನ್ನು ಸ್ವೀಕರಿಸಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ ಉತ್ತಮ ತರಬೇತುದಾರರು ನಮಗೆ ಉತ್ತಮ ಮಾರ್ಗದರ್ಶಕರೂ ಆಗಿದ್ದಾರೆ. ಇದರಿಂದ ನಮ್ಮ ಸದಸ್ಯರಿಗೆ ಅನುಕೂಲವಾಗಲಿದೆ. ಎಲ್ಲರೂ ಉತ್ತಮ ನಾಯಕರಾಗಿ ಸಂಘಟನೆಯನ್ನು ಮುನ್ನಡೆಸೋಣ ಎಂದು ಕರೆಯಿತ್ತರು. ಜಿಲ್ಲಾ ಕಾರ್ಯದರ್ಶಿ ಜೋಸ್‌ ತಯ್ಯಿಲ್‌ ಮಾತನಾಡುತ್ತಾ ಬದಲಾವಣೆಯು ನಮ್ಮನ್ನು ಪುರೋಗತಿಯತ್ತ ಕೊಂಡೊಯ್ಯುತ್ತದೆ. ತಾನೋರ್ವ ನಾಯಕನಾದರೆ ಮಾತ್ರ ನಿಜ ಜೀವನದಲ್ಲಿಯೂ ಜಯ ಸಾಧಿಸಲು ಸಾಧ್ಯ ಎಂದರು.

ಕೋಶಾಧಿಕಾರಿ ಮಾಹಿನ್‌ ಕೋಳಿಕ್ಕರ, ಜಿಲ್ಲಾ ಉಪಾಧ್ಯಕ್ಷ ಎಸ್‌.ಎನ್‌.ಮಯ್ಯ ಬದಿಯಡ್ಕ, ಪೈಕ ಅಬ್ದುಲ್ಲ ಕುಂಞಿ ಹಾಗೂ ತರಬೇತುದಾರ ಹಂಸ ಪಾಲಕ್ಕಿಯವರನ್ನು ಶಾಲು ಹೊದೆಸಿ ಅಭಿನಂದಿಸಲಾಯಿತು. ಅಬ್ದುಲ್‌ ರಹಿಮಾನ್‌ ಪೆರ್ಲ, ಬಾಲಕೃಷ್ಣ ರೈ ಮುಳ್ಳೇರಿಯ, ದಿವಾಕರ ಮಾವಿನಕಟ್ಟೆ, ಬಾಲಸುಬ್ರಹ್ಮಣ್ಯ ಭಟ್‌ ನೀರ್ಚಾಲು ಮಾತನಾಡಿದರು. ಮೊದು ಅಡೂರು ಸ್ವಾಗತಿಸಿ, ಗಣೇಶ ವತ್ಸ ಮುಳ್ಳೇರಿಯ ವಂದಿಸಿದರು. ಯೂತ್‌ ವಿಂಗ್‌ ಹಾಗೂ ವನಿತಾ ವಿಂಗ್‌ನ ಪದಾಧಿಕಾರಿಗಳೂ ಹಾಜರಿದ್ದರು.

ಚಿತ್ರ : ಅಶ್ವಿ‌ನಿ ಸ್ಟುಡಿಯೋ ಬದಿಯಡ್ಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.