ಸಿ.ಎನ್‌.ಸಿ.ಯಿಂದ ಯುಗಾದಿ : ಪಂಜಿನ ಮೆರವಣಿಗೆ


Team Udayavani, Apr 13, 2018, 10:20 AM IST

Panju-12-4.jpg

ಮಡಿಕೇರಿ: ಕೊಡವ ಹೊಸ ವರ್ಷ ಎಡಮ್ಯಾರ್‌ನ್ನು ಕೊಡವ ನ್ಯಾಷನಲ್‌ ಕೌನ್ಸಿಲ್‌ (ಸಿಎನ್‌ಸಿ) ಸಂಘಟನೆ ವತಿಯಿಂದ ಪ್ರತೀವರ್ಷದಂತೆ ಈ ಬಾರಿಯೂ ಸಾರ್ವತ್ರಿಕವಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಎ. 14ರ ಸಂಜೆ 6.30ಕ್ಕೆ ಗೋಣಿಕೊಪ್ಪದಲ್ಲಿ 22ನೇ ವರ್ಷದ ಬೃಹತ್‌ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್‌.ಯು.ನಾಚಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವ ಪಂಚಾಂಗದ ಎಡಮ್ಯಾರ್‌ ಚಂಗ್ರಾಂದಿಯು (ಸೌರಮಾನ ಯುಗಾದಿ) ಕೊಡವರ ಹೊಸ ವರ್ಷವನ್ನು ಬಿಂಬಿಸುವ ಪವಿತ್ರ ಉತ್ಸವವಾಗಿದ್ದು, ಇದಕ್ಕೆ ವಿಶೇಷ ವಾದಂತಹ ಮಹತ್ವ  ನೀಡಿರುವುದು ಕೊಡವ ಜನಪದೀಯ ಚರಿತ್ರೆ ಮತ್ತು ಕಾವ್ಯಗಳಲ್ಲಿ ಕಂಡು ಬರುತ್ತದೆ. ಎಡಮ್ಯಾರ್‌ ಹಬ್ಬವು ವರ್ಷದ 6 ಮಾಸಗಳಲ್ಲಿ ಅತ್ಯಂತ ವರ್ಣ ರಂಜಿತ ಮತ್ತು ವಿಶೇಷವಾದ ವಸಂತ ಕಾಲದ ಅಂತಿಮ ಪರ್ವವಾಗಿದ್ದು, ಈ ಎಡಮ್ಯಾರ್‌ ನಮ್ಮೆ ಕೃಷಿ ಪರ್ವದ ಆರಂಭಿಕ ಅಧ್ಯಾಯವಾಗಿದೆ. ಹಬ್ಬ ಹರಿದಿನಗಳಲ್ಲಿ ಬಿಡುವು ಪಡೆದುಕೊಂಡ ಕೊಡವ ಬುಡಕಟ್ಟು ಕುಲ ಮುಂದೆ ಕೃ ಚಟುವಟಿಕೆ ಪ್ರಾರಂಭಿಸುವ ಕಾಲ ಇದಾಗಿದ್ದು, ಎಡಮ್ಯಾರ್‌ ನಂತರ ಮುಂದಿನ ಮುಂಗಾರು ಬಿತ್ತನೆಗೆ, ಕೃಷಿ ಚಟುವಟಿಕೆಗೆ ಕೊಡವ ರೈತರು ತಯಾರಿ ನಡೆಸುತ್ತಾರೆ. ಪ್ರಕೃತಿಯ ವರ್ಷ ಚಕ್ರದ ಪ್ರಕಾರ ಕೊಡವರ 5 ಪ್ರಮುಖ ಹಬ್ಬಗಳಲ್ಲಿ ಎಡಮ್ಯಾರ್‌ ಮೊದಲನೆಯದಾಗಿದೆ ಎಂದು ಅವರು ವಿವರಿಸಿದರು.

ಭೂಮಿ ತಾಯಿಗೂ ಕೊಡವರಿಗೂ ಇರುವ ಉನ್ನತ, ಪಾರಂಪರಿಕ ಮತ್ತು ಭಾವನಾತ್ಮಕ ಸಂಬಂಧಗಳನ್ನು ಗಟ್ಟಿಗೊಳಿಸುವುದರ ಮೂಲಕ ಮುಂದಿನ ಪೀಳಿಗೆಗೆ ಕೊಡವರ ಶ್ರೇಷ್ಠ ಆದರ್ಶ ಸಂಸ್ಕೃತಿ ಮತ್ತು ನಾಗರಿಕತೆಯ ಹೆಗ್ಗುರುತುಗಳನ್ನು ಬಳುವಳಿಯಾಗಿ ವರ್ಗಾಯಿಸುವ ಸಂದೇಶ ಸಾರುವುದು ಸಿಎನ್‌ಸಿ ಉದ್ದೇಶವಾಗಿ ಎಂದು ನಾಚಪ್ಪ ತಿಳಿಸಿದರು.

ಕೊಡವ ಲ್ಯಾಂಡ್‌ ಸ್ವಾಯತ್ತತೆ ಹಾಗೂ ಹಕ್ಕೊತ್ತಾಯಗಳಾದ ಕೇಂದ್ರಾಡಳಿತ ಪ್ರದೇಶ ರಚನೆ, ಕೊಡವ ಬುಡಕಟ್ಟು ಜನಾಂಗಕ್ಕೆ ಸಂವಿಧಾನದ 244 ನೇ ವಿಧಿ ಪ್ರಕಾರ ಸಂವಿಧಾನ ಭದ್ರತೆ, ಕೊಡವರ ನರಮೇಧ ನಡೆದ ದೇವಟ್‌ಪರಂಬ್‌ ದುರಂತ ಸ್ಥಳದಲ್ಲಿ ಜಾಗತಿಕ ಸ್ಮಾರಕ ನಿರ್ಮಾಣ, ಜಾಗತಿಕ ಹೋಲೊಕಾಸ್ಟ್‌ ಮ್ಯೂಸಿಯಂ, ವಿಶ್ವ ಸಂಸ್ಥೆಯ ಹೋಲೊಕಾಸ್ಟ್‌ ರಿಮೆಂಬರೆನ್ಸ್‌ ಪಟ್ಟಿಯಲ್ಲಿ ಸೇರಿಸುವುದು, ಕೊಡವರ ನರಮೇಧಕ್ಕೆ ಟಿಪ್ಪುವಿನೊಂದಿಗೆ ಸಹಕರಿಸಿದ ಫ್ರೆಂಚ್‌ ಮಿತ್ರ ಪಡೆಯ ಪಾಶವೀ ಕೃತ್ಯಕ್ಕಾಗಿ ಫ್ರಾನ್ಸ್‌ ಕೊಡವರ ಬಹಿರಂಗ ಕ್ಷಮೆಯಾಚಿಸುವುದು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸುವುದೂ ಸೇರಿದಂತೆ ಕೊಡವ ನ್ಯಾಷನಲ್‌ ಕೌನ್ಸಿಲ್‌ ನಡೆಸುತ್ತಿರುವ ಶಾಸನ ಬದ್ಧ ಹಕ್ಕೊತ್ತಾಯದ ಬದ್ಧತೆ ಮತ್ತು ತೀವ್ರತೆಯ ಸಂದೇಶವನ್ನು ಲೋಕಕ್ಕೆ ಬಿತ್ತರಿಸುವುದು ಮತ್ತು ಸರಕಾರಕ್ಕೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.    
ಅಂದು ಮುಂಜಾನೆ 6.30 ಗಂಟೆಗೆ ಚಿಕ್ಕಬೆಟ್ಟಗೇರಿ ಗ್ರಾಮದಲ್ಲಿರುವ ನಂದಿನೆರವಂಡ ಉತ್ತಪ್ಪ ಅವರ  ಭತ್ತದ ಗದ್ದೆಯಲ್ಲಿ ತಾನು ಹೊಸ ವರ್ಷದ ಪ್ರಯುಕ್ತ ಜೋಡೆತ್ತಿನ ಮೂಲಕ ಭೂಮಿ ಉಳುಮೆ ಕಾರ್ಯವನ್ನು ಶಾಸ್ತ್ರೋಕ್ತವಾಗಿ ಮತ್ತು ಸಾಂಪ್ರದಾಯಿಕವಾಗಿ ನೆರವೇರಿಸಲಾಗುವುದು ಎಂದು ನಾಚಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಕಲಿಯಂಡ ಪ್ರಕಾಶ್‌ ಹಾಜರಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.