ಆದೇಶ ಹಿಂಪಡೆಯುವ ತನಕ ಹೋರಾಟ: ಕೊಂಡೆವೂರು ಶ್ರೀ


Team Udayavani, May 26, 2018, 6:15 AM IST

25ksde10.jpg

ಕಾಸರಗೋಡು: ಅಚ್ಚಗನ್ನಡ ಪ್ರದೇಶವಾದ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಮೇಲೆ ಮಲಯಾಳ ಭಾಷೆ ಹೇರಿಕೆಯ ಮೂಲಕ ಕನ್ನಡ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಹತ್ತಿಕ್ಕಲು ಪ್ರಯತ್ನಿಸುವ ಕೇರಳ ಸರಕಾರದ ಧೋರಣೆಯ ವಿರುದ್ಧ ಕಾಸರಗೋಡಿನ ಕನ್ನಡಿಗರು ಒಗ್ಗೂಡಿ ನಡೆಸಿದ ಹೋರಾಟ ಇಲ್ಲಿಗೆ ಕೊನೆಯಾಗುವುದಿಲ್ಲ. ಕಾಸರಗೋಡು ಪ್ರದೇಶದಲ್ಲಿ ಮಲಯಾಳ ಹೇರಿಕೆಯನ್ನು ಹಿಂಪಡೆಯುವ ತನಕ ಹೋರಾಟ ನಿಲ್ಲದು ಎಂದು ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು.

ಕೇರಳ ಸರಕಾರ ಜಾರಿಗೆ ತಂದಿರುವ ಒಂದನೇ ತರಗತಿಯಿಂದ ಹತ್ತನೇ ತರಗತಿಯ ವರೆಗೆ ಮಲಯಾಳ ಕಡ್ಡಾಯ ಕಲಿಕೆಯನ್ನು ಪ್ರತಿಭಟಿಸಿ ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಆಯೋಜಿಸಿದ ಒಂದು ವಾರ ಧರಣಿ ಸತ್ಯಾಗ್ರಹದ ಮೂರನೇ ದಿನವಾದ ಶುಕ್ರವಾರ ಆಶೀರ್ವದಿಸುತ್ತ ಸ್ವಾಮೀಜಿಯವರು ಮಾತನಾಡಿದರು.
ಕನ್ನಡ ಭಾಷೆ, ಸಂಸ್ಕೃತಿಯ ರಕ್ಷಣೆಗೆ ಇನ್ನೂ ಹೋರಾಟ ಅನಿವಾರ್ಯವಾಗಿದೆ. ನಾವು ಮಲಯಾಳ ಭಾಷೆ ದ್ವೇಷಿಗಳಲ್ಲ. ಕಾಸರಗೋಡಿನ ಕನ್ನಡಿಗರಿಗೆ ಸಂವಿಧಾನ ಬದ್ಧವಾಗಿ ನೀಡಲಾದ ಹಕ್ಕು, ಸವಲತ್ತು ಗಳನ್ನು ಕೇಳುತ್ತಿದ್ದೇವೆ. ನಮಗೆ ಯಾರ ಭಿಕ್ಷೆಯೂ ಬೇಡ. ಆದರೆ ನಮ್ಮ ಸವಲತ್ತು ಪಡೆದೇ ತೀರುತ್ತೇವೆ. ಕಾನೂನಾತ್ಮಕ ಹೋರಾಟದ ಮೂಲಕ ನಮ್ಮ   ಹಕ್ಕು ಸಂರಕ್ಷಿಸಿ ಕೊಳ್ಳಬೇಕು. ಅದಕ್ಕಾಗಿ ಕನ್ನಡಿಗ ರೆಲ್ಲ ಏಕ ಸೂತ್ರದಡಿ ಕೆಲಸ ಮಾಡಬೇಕಾ ಗಿದೆ. ಕನ್ನಡಿಗರು ಇನ್ನಷ್ಟು ಶಕ್ತಿಶಾಲಿಯಾಗಿ ಕನ್ನಡದ ರಕ್ಷಣೆಗಾಗಿ ಕೇರಳ ಸರಕಾರದ ಎಲ್ಲಾ ಕನ್ನಡ ವಿರೋಧಿ ನಿರ್ಣಯಗಳನ್ನು ವಿರೋಧಿಸುತ್ತಿದ್ದೇವೆ ಎಂದರು.

ಕಾಸರಗೋಡು ಕನ್ನಡಿಗರು ಅತಂತ್ರ ಸ್ಥಿತಿ ಯಲ್ಲಿದ್ದಾರೆ. ಕರ್ನಾಟಕವನ್ನು ಆಶ್ರಯಿಸ ಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಈ ಹಿನ್ನೆಲೆಯಲ್ಲಿ ಕಾಸರಗೋಡಿನ ಎಲ್ಲ ಕಚೇರಿಗಳು ಕನ್ನಡ ಮಯವಾಗಬೇಕು. ಅದಕ್ಕಾಗಿ ಕನ್ನಡಿಗರು ಕೇರಳದ ಪಿಎಸ್‌ಸಿ  ಪರೀಕ್ಷೆ    ಬರೆದು ಸರಕಾರಿ ಉದ್ಯೋಗಕ್ಕೆ ಸೇರಿ ಕೊಳ್ಳುವಂತಾಗಬೇಕು. ಸರಕಾರಿ ಕಚೇರಿಗಳಲ್ಲಿ ಕನ್ನಡಿಗರನ್ನು ನೇಮಿಸ ಬೇಕಾದುದು ಸಂವಿಧಾನಬದ್ಧ ಹಕ್ಕು ಎಂದ ಸ್ವಾಮೀಜಿಯವರು ತಿರುವ ನಂತಪುರದ ಸೆಕ್ರೆಟರಿಯೇಟ್‌ ಮುಂದೆ ಕೂಡ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ಅಲ್ಲೂ ಹೋರಾಟ ನಡೆಸಲು ಹಿಂದೆ ಸರಿಯುವವರಲ್ಲ ಎಂದರು. ಸಂವಿಧಾನಬದ್ಧ ನ್ಯಾಯ ಸಿಗುವ ತನಕ ಹೋರಾಟ ನಡೆಯಬೇಕಾಗಿದೆ ಎಂದರು.

ಜನಪ್ರತಿನಿಧಿಗಳೇ ಸದನದಲ್ಲಿ ಮಾತನಾಡಿ
ಕಾಸರಗೋಡಿನ ಕನ್ನಡಿಗರು ಎದುರಿಸು ತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಜನಪ್ರತಿನಿಧಿಗಳು ಶಾಸನ ಸಭೆಯಲ್ಲಿ ಧ್ವನಿಸಬೇಕೆಂದು ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿದ ಎಣ್ಮಕಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ರೂಪವಾಣಿ ಆರ್‌. ಭಟ್‌ ಅವರು ಹೇಳಿದರು.

ಧರಣಿ ಸತ್ಯಾಗ್ರಹದಲ್ಲಿ ಕನ್ನಡ ಹೋರಾಟ ಸಮಿತಿ ಸಂಚಾಲಕ ತಾರಾನಾಥ ಮಧೂರು ಅಧ್ಯಕ್ಷತೆ ವಹಿಸಿದರು.

ಕ್ಯಾಂಪ್ಕೋ ಸಂಸ್ಥೆಯ ಸತೀಶ್ಚಂದ್ರ ಭಂಡಾರಿ, ಎಣ್ಮಕಜೆ ಗ್ರಾಮ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಪೆರ್ಲ ಎ.ಎ., ಪಾರ್ತಿಸುಬ್ಬ ಯಕ್ಷಗಾನ ಕಲಾಸಂಸ್ಥೆ ಅಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು, ಕೇಶವ ಪ್ರಸಾದ್‌ ಬದಿಯಡ್ಕ, ವಿಶ್ವನಾಥ ರಾವ್‌, ಡಾ| ರಾಧಾಕೃಷ್ಣ ಬೆಳ್ಳೂರು, ಪ್ರೊ| ಎ. ಶ್ರೀನಾಥ್‌ ಮೊದಲಾ ದವರು ಮಾತನಾಡಿದರು. ಧರಣಿ ಸತ್ಯಾಗ್ರಹದಲ್ಲಿ ಬಾಲ ಮಧುರಕಾನನ, ಶ್ರದ್ಧಾ ನಾಯರ್ಪಳ್ಳ, ಶಿವರಾಮ ಭಟ್‌, ಪದ್ಮಾವತಿ, ಪ್ರದೀಪ್‌ ಕುಮಾರ್‌ ಬೇಳ, ಪದ್ಮರಾಜ್‌ ಮೊದಲಾದವರು ಉಪಸ್ಥಿತರಿದ್ದರು.

ಸತೀಶ್‌ ಮಾಸ್ಟರ್‌ ಕೂಡ್ಲು ಸ್ವಾಗತಿಸಿದರು. ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ ಕಾರ್ಯಕ್ರಮ ನಿರೂಪಿಸಿದರು. ಎಂ.ವಿ. ಮಹಾಲಿಂಗೇಶ್ವರ ಭಟ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಹೋರಾಟದ ಕಿಚ್ಚು ಹೆಚ್ಚಲಿ
ಕನ್ನಡಿಗರ ಬೇಡಿಕೆ ಈಡೇರುವ ತನಕ ವಿಶ್ರಾಂತಿ ಎಂಬುದಿಲ್ಲ ಎಂದ ಅವರು ಅಗತ್ಯ ಬಿದ್ದಲ್ಲಿ ತಿರುವನಂತಪುರದ ಸೆಕ್ರೆಟರಿಯೇಟ್‌ ಮುಂದೆ ಕೂಡ ಸತ್ಯಾಗ್ರಹಕ್ಕೆ ಕನ್ನಡಿಗರು ಸಿದ್ಧರಾಗಬೇಕೆಂದರು. ಪ್ರತಿಯೊಂದು ಮನೆಯಲ್ಲೂ ಹೋರಾಟದ ಕಿಚ್ಚು ಎದ್ದೇಳಬೇಕು. ಹೋರಾಟದ ಮೂಲಕ ಸರಕಾರಕ್ಕೆ ಸ್ಪಷ್ಟ ಸಂದೇಶವನ್ನು ಕಳುಹಿಸಬೇಕು. ಹೋರಾಟ ತೀಕ್ಷ್ಣತೆ ಪಡೆಯಬೇಕೆಂದರು. ಸಂವಿಧಾನಬದ್ಧ ಹಕ್ಕುಗಳನ್ನು ಕಸಿದುಕೊಳ್ಳುತ್ತಾ ಕನ್ನಡಿಗರ ಶೋಷಣೆ ನಡೆಯುತ್ತಿದೆ. ದಮನಿಸುವ ಯತ್ನವೂ ನಡೆಯುತ್ತಿದೆ. ಇದು ಹೀಗೆ ಮುಂದುವರಿದರೆ ನಮ್ಮ ಎಲ್ಲ ಹಕ್ಕುಗಳನ್ನು ಕಳೆದುಕೊಳ್ಳುವ ದಿನ ದೂರವಿಲ್ಲ.
– ರೂಪವಾಣಿ ಆರ್‌. ಭಟ್‌
ಅಧ್ಯಕ್ಷೆ , ಎಣ್ಮಕಜೆ ಗ್ರಾಮ ಪಂಚಾಯತ್‌ 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.