ಕಾಸರಗೋಡು ಅಪರಾಧ ಸುದ್ದಿಗಳು 


Team Udayavani, Feb 9, 2019, 12:30 AM IST

crime-new.jpg

ಅಡೂರಿನ ಅರಣ್ಯದಲ್ಲಿ ಪತ್ತೆಯಾಗಿದ್ದ ಶವ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ: ಓರ್ವ ವಶಕ್ಕೆ
ಅಡೂರು:
ಅಡೂರು ಕಾಟಿಕಜೆ ಮಾವಿನಡಿಯ ಕುಂಞಪ್ಪ ನಾಯ್ಕ ಅವರ ಪುತ್ರ ಎಂ.ಕೆ. ಚಿದಾನಂದ ಯಾನೆ ಸುಧಾಕರ (36)  ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ನಿವಾಸಿ ಗಣಪ ನಾಯ್ಕ (35)ನನ್ನು ಆದೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಕೂಲಿ ಕೆಲಸಕ್ಕೆಂದು  ಹೋಗಿದ್ದ ಸುಧಾಕರ ಮರಳಿ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಡಿದಾಗ ಅವರ ಮೃತದೇಹ ಅರಣ್ಯದಲ್ಲಿ ಪತ್ತೆಯಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅಡೂರು ಬಳಿಯ ಬಳ್ಳಕಾನದ ಸರಕಾರಿ ಅರಣ್ಯದೊಳಗೆ ಸುಧಾಕರ ಅವರ ಮೃತ ದೇಹ ಫೆ.7ರಂದು ಸಂಜೆ ಪತ್ತೆಯಾಗಿತ್ತು. ಮೃತದೇಹ ಕವುಚಿ ಮಲಗಿದ ಸ್ಥಿತಿಯಲ್ಲಿದ್ದು, ತಲೆಯಲ್ಲಿ ಕಲ್ಲಿನಿಂದ ಉಂಟಾದ ಏಟಿನ ಗಾಯ ಕಂಡು ಬಂದಿ ತ್ತು. ಸಮೀಪದಲ್ಲೇ ರಕ್ತ ಮಿಶ್ರಿತ ಕಲ್ಲು,  ಸುಧಾಕರ ಅವರ ಪಾದರಕ್ಷೆ, ಅಲ್ಲದೆ ಬೇರೆ ವ್ಯಕ್ತಿ ಯ ಒಂದು ಜತೆ ಪಾದರಕ್ಷೆ ಹಾಗೂ ಬೈರಾಸು  ಪತ್ತೆಯಾಗಿದೆ.

ಆದೂರು ಎಸ್‌.ಐ. ನಿಬಿನ್‌ ಜೋಯ್‌, ಇನ್‌ಸ್ಪೆಕ್ಟರ್‌ ಎಂ. ಎ. ಮ್ಯಾಥ್ಯೂ, ಜಿಲ್ಲಾ  ಕ್ರೈಂಬ್ರಾಂಚ್‌ ಡಿವೈಎಸ್‌ಪಿ ಪ್ರದೀಪ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸರು ಹಾಗೂ ಶ್ವಾನದಳ ಸ್ಥಳಕ್ಕೆ ತೆರಳಿ ತನಿಖೆ ನಡೆಸಿದರು.

ಪೊಲೀಸರು ನೀಡಿದ ಮಾಹಿತಿ
ಗಣಪನ  ತೋಟದಿಂದ ಹಲವು ಬಾರಿ ಅಡಿಕೆ ಕಳವಾಗಿದ್ದು, ಈ ಬಗ್ಗೆ ಸುಧಾಕರನ ಮೇಲೆ  ಸಂಶಯವಿತ್ತು. ಅಲ್ಲದೆ ಸುಧಾಕರನು ತನ್ನ ಸ್ನೇಹಿತನೊಂದಿಗೆ  ಗಣಪನ ಅಡಿಕೆ ತೋಟದಲ್ಲಿ ಮದ್ಯ ಸೇವಿಸುತ್ತಿದ್ದ. ಇದನ್ನು ಪ್ರಶ್ನಿಸಿದಾಗ ಗಣಪ ಹಾಗೂ ಸುಧಾಕರನ ಮಧ್ಯೆ ಮಾತಿನ ಚಕ ಮಕಿ ನಡೆದಿತ್ತು. ಬುಧವಾರ ಸಂಜೆ 5.30ಕ್ಕೆ ಗಣಪ ಮದ್ಯ ಸೇವಿಸಿ ಬರುತ್ತಿದ್ದಾಗ ಸುಧಾಕರನೂ ಕಾಡಿ ನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ. ಈ ಸಂದರ್ಭದಲ್ಲಿ ಅವರಿಬ್ಬರ ನಡುವೆ ಹೊಕೈ ನಡೆದಿದ್ದು, ಗಣಪ ಕಲ್ಲಿನಿಂದ ಸುಧಾಕರನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆಂದು  ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಆದೂರು ಪೊಲೀಸರು ತಿಳಿಸಿದ್ದಾರೆ.

ಮನೆಯಿಂದ ಕಳವು
ಕಾಸರಗೋಡು:
ನಗರದ ತೆರುವತ್ತ್ ಹೊನ್ನೆಮೂಲೆಯ ಅಬ್ದುಲ್‌ ಖಾದರ್‌ ಅವರ ಮನೆಯಿಂದ ಫೆ. 7ರಂದು ರಾತ್ರಿ ಬಾಗ್‌ನ್ನು ಕಳವು ಮಾಡಿದ ಘಟನೆ ನಡೆದಿದೆ. ಬ್ಯಾಗ್‌ನಲ್ಲಿ 20 ಸಾವಿರ ರೂ. ನಗದು ಮತ್ತು ಒಂದು ಪಾಸ್‌ಪೋರ್ಟ್‌ ಇತ್ತೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಅಡುಗೆ ಕೋಣೆಯ ಗ್ರಿಲ್ಸ್‌ ಮುರಿದು ಮಾಡಿ ಒಳನುಗ್ಗಿದ ಕಳ್ಳ ಕಪಾಟಿನಲ್ಲಿದ್ದ ಚಿನ್ನವನ್ನು ತೆಗೆಯುತ್ತಿದ್ದ ವೇಳೆ ಎಚ್ಚೆತ್ತ ಮನೆಯವರು ಬೊಬ್ಬೆ ಹಾಕಿದಾಗ ಚಿನ್ನವನ್ನು ಅಲ್ಲೇ ಬಿಸಾಡಿ ಕಳ್ಳ ಕೈಗೆ ಸಿಕ್ಕಿದ ಬ್ಯಾಗನ್ನು ಕದ್ದೊಯ್ದಿದ್ದಾನೆ.

ಅಲ್ಲಿಲ್ಲಿ ಬೆಂಕಿ ಅನಾಹುತ
ಕಾಸರಗೋಡು
: ಕಾಸರಗೋಡು ಮತ್ತು ಪರಿಸರ ಪ್ರದೇಶದಲ್ಲಿ ಏಳು ಕಡೆಗಳಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೋವಿಕ್ಕಾನ ಮೊದಲಪ್ಪಾರೆಯಲ್ಲಿರುವ ತೋಟಗಾರಿಕಾ ನಿಗಮದ ಮೂರು ಎಕ್ರೆಯಷ್ಟು ಗೇರು ತೋಟಕ್ಕೆ ಬೆಂಕಿ ಹತ್ತಿಕೊಂಡಿದೆ. ಕಳನಾಡು ರೆೈಲ್ವೇ ಮೇಲ್ಸೇತುವೆ ರೈಲ್ವೇ ಟ್ರಾÂಕ್‌ ಬಳಿ, ಚೆರ್ಕಳ ಕೆ.ಕೆ. ಪುರ, ಚೌಕಿ ಬದಿಯಲ್ಲಿರುವ ಮರಕ್ಕೆ, ಚೆಂಗಳ ಬೇರ್ಕ ಮತ್ತು ಚೆರ್ಕಳದ ಬೇರ್ಕದ ಹಿತ್ತಿಲಿಗೂ ಬೆಂಕಿ ಹತ್ತಿಕೊಂಡಿದ್ದು ಕಾಸರಗೋಡು ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸಿತು.

ವ್ಯಾಪಾರಿಗೆ ಹಲ್ಲೆ
ಬದಿಯಡ್ಕ
: ಚರ್ಲಡ್ಕದ ವ್ಯಾಪಾರಿ, ಕೊಲ್ಲಂಗಾನ ನಿವಾಸಿ ಹಸೈನಾರ್‌(45) ಅವರಿಗೆ ತಂಡವೊಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಆರು ಮಂದಿಯ ತಂಡ ಅಂಗಡಿಗೆ ಬಂದು ಸಿಗರೇಟ್‌ ಪಡೆದಕೊಂಡು ಸಾಲ ನೀಡದಿದ್ದಾಗ ಹಲ್ಲೆ ಮಾಡಿದರೆಂದು ಗಾಯಾಳು ಆರೋಪಿಸಿದ್ದಾರೆ.

ಸುಬೈದಾ ಕೊಲೆ ಪ್ರಕರಣ : ಆರೋಪಿಯ ಬಂಧನ
ಕಾಸರಗೋಡು:
ಬೇಕಲ ಪೆರಿಯ ಆಯಂಪಾರ ಚೆಕ್ಕಿಪಳ್ಳದ ಸುಬೈದಾ (65) ಅವರನ್ನು 2018 ಜ.17 ರಂದು ಕೈಕಾಲು ಕಟ್ಟಿ ಹಾಕಿ ಕುತ್ತಿಗೆ ಬಿಗಿದು ಕೊಲೆಗೈದು ಚಿನ್ನಾಭರಣ ದರೋಡೆ ಮಾಡಿದ ಪ್ರಕರಣದ ಆರೋಪಿಯಾಗಿದ್ದು, ಪೊಲೀಸ್‌ ಕಸ್ಟಡಿಯಿಂದ ಪರಾರಿಯಾಗಿದ್ದ ಮೂಲತಏ ಕರ್ನಾಟಕ ಸುಳ್ಯ ಅಜ್ಜಾವರ ಗುಳಿಂಬೆ ನಿವಾಸಿ, ಮಧೂರು ಪಟ್ಲದ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಅಸೀಸ್‌ ಆಲಿಯಾಸ್‌ ಕರ್ನಾಟಕ ಅಸೀಸ್‌(30)ನನ್ನು ಕರ್ನಾಟಕದಿಂದ ಪೊಲೀಸರು ಬಂಧಿಸಿದ್ದಾರೆ. 2018 ಸೆ.14 ರಂದು ಪೊಲೀಸ್‌ ಕಸ್ಟಡಿಯಿಂದ  ಈತ ಪರಾರಿಯಾಗಿದ್ದ.

ಜುಗಾರಿ : ಯುವಕನ ಬಂಧನ
ಕುಂಬಳೆ:
ಶಾಂತಿಪಳ್ಳದ ಕಾಡಿನಲ್ಲಿ ಜುಗಾರಿ ದಂಧೆಯಲ್ಲಿ ನಿರತನಾಗಿದ್ದ ಮಧೂರು ನಿವಾಸಿ ಅಜೀಶ್‌(31)ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಇಬ್ಬರು ಪರಾರಿಯಾಗಿದ್ದಾರೆ. ಜುಗಾರಿ ಸ್ಥಳದಿಂದ 4, 000 ರೂ. ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.