ದುಬಾೖಯಿಂದ ನಾಪತ್ತೆಯಾದ ಕಾಸರಗೋಡಿನ 2 ಕುಟುಂಬ


Team Udayavani, Jun 28, 2018, 8:56 AM IST

missing.jpg

ಕಾಸರಗೋಡು: ದುಬಾೖಗೆ ಹೋಗಿದ್ದ ಕಾಸರಗೋಡಿನ ಎರಡು ಕುಟುಂಬಗಳಿಗೆ ಸೇರಿದ 10 ಮಂದಿ ನಿಗೂಢವಾಗಿ ನಾಪತ್ತೆಯಾಗಿದ್ದು, ಭಾರೀ ಆತಂಕ ಮೂಡಿದೆ. ನಾಪತ್ತೆಯಾಗಿರುವವರಲ್ಲಿ 6 ಮಕ್ಕಳು ಸೇರಿದ್ದಾರೆ. 

ನಾಪತ್ತೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎನ್‌ಐಎ(ರಾಷ್ಟ್ರೀಯ ತನಿಖಾದಳ)ಯಿಂದಲೂ ತನಿಖೆ ನಡೆಸಲಾಗುತ್ತಿದೆ.
ಚೆಮ್ನಾಡು ಸಮೀಪದ ಮುಂಡಾಂಕುಳದ ಕುನ್ನಿಲ್‌ ಹೌಸ್‌ನ ಎ.ಅಬ್ದುಲ್‌ ಹಮೀದ್‌ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತನ್ನ ಕುಟುಂಬದ ಆರು ಮಂದಿ ಮತ್ತು ಅಣಂಗೂರಿನ ಕುಟುಂಬವೊಂದರ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅಬ್ದುಲ್‌ ಹಮೀದ್‌ ಅವರ ಪುತ್ರಿ ನಸೀರಾ (25), ಆಕೆಯ ಪತಿ ಮೊಗ್ರಾಲ್‌ನ ಸವಾದ್‌ (35), ಈ ದಂಪತಿಯ ಮಕ್ಕಳಾದ ಮುಸ್ಬಾ (6), ಮರ್ಜಾನ (3), ಮುಖಾಬಿಲ್‌ (11 ತಿಂಗಳು) ಮತ್ತು ಸವಾದ್‌ರ ದ್ವಿತೀಯ ಪತ್ನಿ, ಮೂಲತಃ ಪಾಲಾ^ಟ್‌ ನಿವಾಸಿ ರೆಹಮ್ಮಾತ್‌ (25) ಜೂ. 15ರಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮತ್ತೂಂದು ಪ್ರಕರಣ
 ಕಾಸರಗೋಡು ಸಮೀಪದ ಅಣಂಗೂರು ಕೊಲ್ಲಂಪಾಡಿ ನಿವಾಸಿಗಳಾದ ಅನ್ವರ್‌, ಅವರ ಪತ್ನಿ ಮೂರು ತಿಂಗಳ ಗರ್ಭಿಣಿ ಝೀನತ್‌ ಹಾಗೂ ಇಬ್ಬರು ಮಕ್ಕಳು ದುಬಾೖಯಲ್ಲಿ ಕಾಣೆಯಾಗಿರುವುದಾಗಿ ಮಾಹಿತಿ ದೊರಕಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಅಬ್ದುಲ್‌ ಹಮೀದ್‌ ಉಲ್ಲೇಖೀಸಿದ್ದಾರೆ.

ಕೊಲ್ಲಂಪಾಡಿಯ ನಾಲ್ವರು ನಾಪತ್ತೆಯಾದ ಕುರಿತು ಅವರ ಸಂಬಂಧಿಕರು ಇಲ್ಲಿಯವರೆಗೆ ದೂರು ನೀಡಿಲ್ಲ. ಒಂದು ವೇಳೆ ದೂರು ಕೊಟ್ಟಲ್ಲಿ ಆ ಬಗ್ಗೆಯೂ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

ನಾಪತ್ತೆಯಾದ ಸವಾದ್‌ ಅಲ್ಲಿ ಮೊಬೈಲ್‌ ಫೋನ್‌, ಸುಗಂಧ ದ್ರವ್ಯದ ಅಂಗಡಿ ನಡೆಸುತ್ತಿದ್ದರು. ಅವರನ್ನು ಕಾಣಲೆಂದು ಪತ್ನಿ ಹಾಗೂ ಮಕ್ಕಳು ಇತ್ತೀಚೆಗಷ್ಟೇ ಅಲ್ಲಿಗೆ ತೆರಳಿದ್ದರು.

ಈ ಕುಟುಂಬ ಜೂ. 15ರಿಂದ ದುಬಾೖಯಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದ್ದರೂ ಅವರು ಕೆಲವು ತಿಂಗಳುಗಳ ಹಿಂದೆಯೇ ಅಲ್ಲಿಂದ ನಾಪತ್ತೆಯಾಗಿದ್ದಾರೆಂಬ ಗುಪ್ತ ಮಾಹಿತಿ ಪೊಲೀಸರಿಗೆ ಮೊದಲೇ ಲಭಿಸಿತ್ತು ಎನ್ನಲಾಗಿದೆ. ಆದರೆ ಮನೆಯವರು ದೂರು ನೀಡದ ಕಾರಣ ಕೇಸು ದಾಖಲಿಸಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ.

2 ವರ್ಷ ಹಿಂದೆ 17 ಮಂದಿ ನಾಪತ್ತೆಯಾಗಿದ್ದರು 
ಕಾಸರಗೋಡು ಜಿಲ್ಲೆಯ ಪಡನ್ನ, ತೃಕ್ಕರಿಪುರ ಮುಂತಾದ ಕಡೆಗಳಿಂದ ಸುಮಾರು ಎರಡು ವರ್ಷಗಳ ಹಿಂದೆ ಮಕ್ಕಳು, ಮಹಿಳೆಯರು ಸಹಿತ 17 ಮಂದಿ ನಾಪತ್ತೆಯಾಗಿದ್ದರು. ಅವರು ಇರಾಕ್‌, ಸಿರಿಯಾ ಹಾಗೂ ಅಫ್ಘಾನಿಸ್ಥಾನದಲ್ಲಿರುವ ಉಗ್ರ ಸಂಘಟನೆ ಐಸಿಸ್‌ಗೆ ಸೇರಿರುವುದಾಗಿ ಎನ್‌ಐಎಗೆ ಸ್ಪಷ್ಟ ಮಾಹಿತಿ ದೊರಕಿತ್ತು. ಅವರಲ್ಲಿ ಕೆಲವು ಮಂದಿ ಅಮೆರಿಕ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿಯೂ ಎನ್‌ಐಎಗೆ ಮಾಹಿತಿ ಸಿಕ್ಕಿತ್ತು. ಆದರೆ ಅದನ್ನು ಈ ತನಕ ದೃಢೀಕರಿಸಲಿಲ್ಲ. ಅಂತಹ ಆತಂಕದ ನಡುವೆಯೇ ಕಾಸರಗೋಡಿನ 10 ಮಂದಿ ನಾಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

ಸಂಘಟನೆ ಸಂಪರ್ಕ? 
ನಾಪತ್ತೆಯಾದವರು ಯಾವುದಾದರೂ ಸಂಘಟನೆಗೆ ಸೇರಿದ್ದಾರೆಯೇ ಎಂಬ ಶಂಕೆ ಬಲವಾಗಿ ಉಂಟಾಗಿದೆ. ಇದನ್ನು ಪೊಲೀಸರು ಕೂಡ ಅಲ್ಲಗಳೆ ಯುವುದಿಲ್ಲ. ಆದ್ದರಿಂದ ಎನ್‌ಐಎ ಮತ್ತು ಕೇಂದ್ರ ಗುಪ್ತಚರ ವಿಭಾಗವೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಯೆಮನ್‌ಗೆ ಪಯಣ?
ಮತ್ತೂಂದೆಡೆ ಆರು ಮಂದಿ ನಾಪತ್ತೆ ಯಾಗಿರುವ ಬಗ್ಗೆ ದೂರು ದೊರಕಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿ ದ್ದಾರೆ. ನಾಪತ್ತೆಯಾದವರು ಕೊಲ್ಲಿ ರಾಷ್ಟ್ರ ವಾದ ಯೆಮನ್‌ನ ದಮ್ಮಾದಲ್ಲಿ ಇರುವುದಾಗಿ ಮನೆಯವರಿಗೆ ಬುಧವಾರ ಬೆಳಗ್ಗೆ ಮಾಹಿತಿ ಲಭಿಸಿದೆ. ಸವಾದ್‌ ಮೊಬೈಲ್‌ ವಾçಸ್‌ ಮೆಸೇಜ್‌ ಮೂಲಕ ಈ ವಿಷಯವನ್ನು ಊರಲ್ಲಿರುವ ಸಂಬಂಧಿಕರಿಗೆ ತಿಳಿಸಿದ್ದಾರೆ. ಆದರೆ ದುಬಾೖಯಿಂದ ಯೆಮನ್‌ಗೆ ಏಕೆ ಹೋಗಿದ್ದಾರೆ ಎಂಬುದೇ ಮನೆಯವರಿಗೆ ಸಂಶಯ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.