ಮಡಿಕೇರಿ ಸಮೀಪದ ಗ್ರಾಮಕ್ಕೆ ಕಾಡಾನೆ ಲಗ್ಗೆ
Team Udayavani, Jul 3, 2018, 9:12 AM IST
ಮಡಿಕೇರಿ: ನಗರಕ್ಕೆ ಹೊಂದಿಕೊಂಡಿರುವ ಮೇಕೇರಿ ಗ್ರಾಮದಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮಡಿಕೇರಿ ನಗರದಿಂದ 5 ಕಿ.ಮೀ. ದೂರದಲ್ಲಿರುವ ಕಾಫಿ ತೋಟಕ್ಕೆ ರವಿವಾರ ರಾತ್ರಿ ಲಗ್ಗೆ ಇಟ್ಟ ಕಾಡಾನೆಗಳು ಕಾಫಿ, ಬಾಳೆ ಗಿಡಗಳನ್ನು ನಾಶಪಡಿಸಿವೆ. ಹಲಸಿನ ಹಣ್ಣು ಯಥೇತ್ಛವಾಗಿ ಇರುವ ಕಾರಣ ಆನೆಗಳು ಅಲ್ಲೇ ಬೀಡು ಬಿಟ್ಟಿವೆ. ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬಂದಿ ಮಾಡಿದ ಪ್ರಯತ್ನ ವಿಫಲವಾಗಿದೆ.
ಮಡಿಕೇರಿ- ಮೇಕೇರಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಿ, ಕಾಡಾನೆಗಳನ್ನು ಓಡಿಸಲು ಯತ್ನಿಸಲಾಯಿತು. ರಸ್ತೆ ಬದಿಗೆ ಬಂದಿದ್ದ ಆನೆಗಳು ವಾಹನಗಳ ಶಬ್ದಕ್ಕೆ ಬೆದರಿ ಮತ್ತೆ ತೋಟದೊಳಗೆ ನುಸುಳಿವೆ.
ಕುಶಾಲನಗರ ವಲಯ ಉಪ ಅರಣ್ಯಾಧಿಕಾರಿ ಕನ್ನಂಡ ರಂಜನ್ ನೇತೃತ್ವದಲ್ಲಿ ಮಡಿಕೇರಿ ಅರಣ್ಯ ಸಿಬಂದಿ, ರ್ಯಾಪಿಡ್ ರೆಸ್ಪಾನ್ಸ್ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ